Koosina Mane: ಕರ್ನಾಟಕ ಸರ್ಕಾರದಿಂದ ಮಹಿಳಾ ಕಾರ್ಮಿಕರಿಗೆ ಹೊಸ ಗಿಫ್ಟ್
ಬೆಂಗಳೂರು, ಮಾರ್ಚ್ 05: ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ಕಾರ್ಮಿಕರಿಗೆ ಬಂಪರ್ ಗಿಫ್ಟ್ ನೀಡಿದೆ. ನರೇಗಾ ಮಹಿಳಾ ಕಾರ್ಮಿಕರಿಗೆ ಸರ್ಕಾರದ 'ಕೂಸಿನ ಮನೆ' ಯೋಜನೆ ಅನ್ವಯವಾಗುವಂತೆ ಜಾರಿ ತಂದಿದೆ.
ಕರ್ನಾಟಕ ಮಹಿಳೆಯರಿಗೆ ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಘೋಷಿಸಿ ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಕಾರ್ಮಿಕ ಮಹಿಳೆಯರಿಗೆ ಗಿಫ್ಟ್ ನೀಡಿದೆ. ನರೇಗಾ ಮಹಿಳಾ ಕಾರ್ಮಿಕರ ಮಕ್ಕಳಿಗಾಗಿ ರಾಜ್ಯದಲ್ಲಿ ಬರೋಬ್ಬರಿ 3,787 ಕೂಸಿನ ಮನೆಗಳಿಗೆ ಚಾಲನೆ ನೀಡಲಾಗಿದೆ.

'ಕೂಸಿನ ಮನೆ'ಗಳಿಗೆ ಸರ್ಕಾರ ಚಾಲನೆ
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. "ದುಡಿಯುವ ಕೈಗಳಿಗೆ ಆಸರೆಯ ಗ್ಯಾರಂಟಿ" ನೀಡಲಾಗಿದೆ. ನರೇಗಾ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆಗೆ ರಾಜ್ಯಾದ್ಯಂತ 3,787 ಕೂಸಿನ ಮನೆಗಳಿಗೆ ಚಾಲನೆ ಕೊಡಲಾಗಿದೆ. ನಾಡಿನ ಮಹಿಳೆಯರ ಸ್ವಾವಲಂಬಿ ಬದುಕಿನ ಹೋರಾಟಕ್ಕೆ ನಮ್ಮ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿಂದೆ ರಾಜ್ಯ ಕಾಂಗ್ರೆಸ್ ಮಕ್ಕಳ ಆರೈಕೆಯ ವ್ಯವಸ್ಥೆ ಕುರಿತು ಭರವಸೆ ನೀಡಿತ್ತು. ಅಲ್ಲದೇ ಈ ಕೂಸಿನ ಮನೆ ಯೋಜನೆ ಸಿಎಂ ಸಿದ್ದರಾಮಯ್ಯನವರ ಕನಸಿನ ಯೋಜನೆ ಎನ್ನಲಾಗಿದೆ. ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕ ಮಹಿಳೆಯರಿಗೆ ಮಕ್ಕಳಿಗೆ ಅನ್ವಯವಾಗುವಂತೆ ಯೋಜನೆ ರೂಪಿಸಲಾಗಿದೆ.

3 ವರ್ಷದೊಳಗಿನ ಮಕ್ಕಳಿಗೆ ಮನೆ ಸೌಲಭ್ಯ
ಈ ಮಹಿಳೆಯರ ಮೂರು ವರ್ಷದೊಳಗಿನ ಮಕ್ಕಳಿಗೆ ಮನೆ ಸೌಲಭ್ಯ ಸಿಗಲಿದೆ. ಅಂದರೆ ಕೂಲಿ ಕೆಲಸ ಮಾಡುವ ಮಹಿಳೆಯರು ತಮ್ಮ ಸಣ್ಣ ಸಣ್ಣ ಮಕ್ಕಳನ್ನು ಈ ಆರೈಕೆ ಕೇಂದ್ರವಾದ 'ಕೂಸಿನ ಮನೆ'ಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಬಹುದು.
ಈ ಮೂಲಕ ಕೂಲಿ ಮಾಡಿ ತುತ್ತಿನ ಚೀಲ ತುಂಬಿಸಿಕೊಳ್ಳುವ ಬಡ ಮಹಿಳೆಯರಿಗೆ ಇದರಿಂದ ಸಾಕಷ್ಟು ಪ್ರಯೋಜನ ಸಿಗಲಿದೆ. ಕೆಲಸ ವೇಳೆ ಮಕ್ಕಳ ಚಿಂತೆ ದೂರವಾಗಲಿದೆ. ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳುವುದರಿಂದ ಚಿಂತೆ ಬಿಟ್ಟು ಆರಾಮಾಗಿ ಕೂಲಿ ಮಾಡಿಕೊಂಡು ಬರಲು ಈ ಕೂಸಿನ ಮನೆ ಸಹಾಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
"ದುಡಿಯುವ ಕೈಗಳಿಗೆ ಆಸರೆಯ ಗ್ಯಾರಂಟಿ"
— Siddaramaiah (@siddaramaiah) March 5, 2024
ನರೇಗಾ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆಗೆ ರಾಜ್ಯಾದ್ಯಂತ 3,787 ಕೂಸಿನ ಮನೆಗಳಿಗೆ ಚಾಲನೆ.
ನಾಡಿನ ಮಹಿಳೆಯರ ಸ್ವಾವಲಂಬಿ ಬದುಕಿನ ಹೋರಾಟಕ್ಕೆ ನಮ್ಮ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. #ಕೂಸಿನಮನೆ pic.twitter.com/WPGQ4I6X4y
ಯೋಜನೆಗೆ ವ್ಯಾಪಕ ಸ್ಪಂದನೆ ನಿರೀಕ್ಷೆ
ರಾಜ್ಯ ಕಾಂಗ್ರೆಸ್ ಸರ್ಕಾರ ವಿಧಾನಸಭಾ ಚುನಾವಣೆ ಮೊದಲು ನೀಡಿದ ಗ್ಯಾರೆಂಟಿ ಜಾರಿಗೆ ತಂದಿದೆ. ಐದು ಗ್ಯಾರೆಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ನೀಡುವ 'ಶಕ್ತಿ ಯೋಜನೆ' ಮತ್ತು 'ಗೃಹ ಲಕ್ಷ್ಮೀ' ಯೋಜನೆ ಮಹಿಳೆಯರಿಗೆ ಸಂಬಂಧಿಸಿದ ಯೋಜನೆ ಆಗಿವೆ.
ಈ ಎರಡು ಯೋಜನೆಗಳಿಗೆ ಮಹಿಳೆಯರಿಂದ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. ಇದೀಗ ಕೂಸಿನ ಮನೆ ಯೋಜನೆಗೂ ಮಹಿಳಾ ಕಾರ್ಮಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುವ ನಿರೀಕ್ಷೆ ಇದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications