ಬಡೇರಿಯಾ ಬಂಧನಕ್ಕೂ, ರಾಜ್ಯಸರ್ಕಾರಕ್ಕೂ ಸಂಬಂಧವಿಲ್ಲ-ಸಿದ್ದರಾಮಯ್ಯ
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯ ಭಾಗವಾಗಿ ಬಡೇರಿಯಾ ಅವರನ್ನು ಬಂಧಿಸಿದೆ. ಇದಕ್ಕೂ ಸರಕಾರಕ್ಕೂ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು, ಮೇ 17: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನಕ್ಕೂ, ರಾಜ್ಯಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ ನೀಡಿರುವ ವರದಿ ಆಧರಿಸಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ವಿಶೇಷ ತನಿಖಾ ದಳ (ಎಸ್ಐಟಿ) ತನಿಖೆಯ ಭಾಗವಾಗಿ ಬಡೇರಿಯಾ ಅವರನ್ನು ಬಂಧಿಸಿದೆ. ಇದಕ್ಕೂ ಸರಕಾರಕ್ಕೂ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.[ಸಿದ್ದರಾಮಯ್ಯ vs ಸಾಮೂಹಿಕ ನಾಯಕತ್ವ, 'ಕೈ'ವಿದಳನ]

ಒಂದೊಮ್ಮೆ ವಿಚಾರಣೆಯಲ್ಲಿ ಬಡೇರಿಯಾ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.












Click it and Unblock the Notifications