ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್; ಕರ್ಫ್ಯೂ ಜಾರಿ
ಬೆಂಗಳೂರು, ಜುಲೈ 26 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ.
ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ತನಕ ಕರ್ನಾಟಕದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸಾರಿಗೆ ಸಂಚಾರ ಸಂಪೂರ್ಣ ರದ್ದುಗೊಳ್ಳಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ಇರುತ್ತದೆ.
ಜನರು ಅನಗತ್ಯವಾಗಿ ಮನೆಯಿಂದ ಹೊರ ಬಾರಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಜನರಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ 5 ಸಾವಿರ ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗುತ್ತಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ಕಳೆದ ವಾರ ಲಾಕ್ ಡೌನ್ ಜಾರಿಯಲ್ಲಿತ್ತು. ಈಗ ಲಾಕ್ ಡೌನ್ ತೆರವು ಮಾಡಲಾಗಿದೆ. ಆದರೆ, ಭಾನುವಾರದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಗರದಲ್ಲಿ ಶನಿವಾರ 2036 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದ ಒಟ್ಟು ಸೋಂಕಿತರ ಸಂಖ್ಯೆ 43,503ಕ್ಕೆ ಏರಿಕೆಯಾಗಿದೆ.
Night curfew on till Monday 5 am.
— N. Manjunatha Prasad,IAS (@BBMPCOMM) July 25, 2020
ಬೆಂಗಳೂರಿನಲ್ಲಿ ಇಂದು ರಾತ್ರಿ 9ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆಯ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಅಗತ್ಯ ಸೇವೆಗಳಿಗೆ ಹೊರತು ಪಡಿಸಿ, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.#BBMP @CMofKarnataka @BBMP_MAYOR @BlrCityPolice @CPBlr
ಭಾನುವಾರದ ಲಾಕ್ ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತರು ಟ್ವೀಟ್ ಮಾಡಿದ್ದಾರೆ.












Click it and Unblock the Notifications