Tirupati Tirumala: ತಿರುಪತಿಗೆ ಹೋಗುವ ಕರ್ನಾಟಕದ ಭಕ್ತರಿಗೆ ಭರ್ಜರಿ ಸಿಹಿಸುದ್ದಿ
ಪ್ರಸಿದ್ಧ ಧಾರ್ಮಿಕ ಸ್ಥಳ ಆಂಧ್ರಪ್ರದೇಶದ ತಿರುಪತಿ ತಿರುಮಲ ಕ್ಷೇತ್ರಕ್ಕೆ ಲಕ್ಷಾಂತರ ಜನ ಭಕ್ತಾದಿಗಳು ಭೇಟಿ ನೀಡುತ್ತಾರೆ. ದಿನವಿಡೀ ಕಾದು ವೆಂಕಟೇಶ್ವರನ ದರ್ಶನ ಪಡೆಯಲು ದೇಶದ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ. ಬೆಂಗಳೂರಿನಿಂದ ಕೆಲವೇ ಗಂಟೆಗಳ ಪ್ರಯಾಣದ ದೂರದಲ್ಲಿರುವುದರಿಂದ ಕರ್ನಾಟಕದಿಂದಲೂ ತಿರುಪತಿಗೆ ತೆರಳುವ ಭಕ್ತರ ಸಂಖ್ಯೆ ಹೆಚ್ಚೇ ಇದೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರವು ತಿರುಪತಿಗೆ ಹೋಗುವ ಕರ್ನಾಟಕದ ಭಕ್ತಾದಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಸರ್ಕಾರದಿಂದಲೇ ಹೊರ ರಾಜ್ಯದಲ್ಲಿ ಭಕ್ತಾದಿಗಳಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.
ಈ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್) "ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್" ಕಲ್ಯಾಣ ಮಂಟಪವನ್ನು ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ ವಿಐಪಿ ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ವೇಳೆಗೆ ಇದು ಪೂರ್ಣಗೊಳ್ಳಲಿದ್ದು ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕರ್ನಾಟಕ ಸರ್ಕಾರದಿಂದ ನಿರ್ಮಾಣಗೊಂಡಿರುವ ಈ 36 ಕೋಣೆಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ಉದ್ಘಾಟನೆಯೂ ನಡೆಯಲಿದೆ. ಈ ಮೂಲಕ ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.
ಈ ಸೇವೆ ಪಡೆಯುವುದು ಹೇಗೆ?
ಈ ಕಲ್ಯಾಣ ಮಂಟಪವು ಸುಮಾರು 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಈ ಕಲ್ಯಾಣ ಮಂಟಪ ಲಭ್ಯವಿರುತ್ತದೆ. ಶ್ರೀಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕರ್ನಾಟಕದ ಭಕ್ತರು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ.
ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್ ಕಲ್ಯಾಣ ಮಂಟಪದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಕಂದಾಯ ಇಲಾಖೆ, ಮುಜರಾಯಿ ಇಲಾಖೆ ಆಯುಕ್ತ ಎಂ.ವಿ.ವೆಂಕಟೇಶ್ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನು ಕೆಲವೇ ತಿಂಗಳಲ್ಲಿ ಈ ಕಲ್ಯಾಣ ಮಂಟಪದ ಜೊತೆಗೆ 36 ಕೋಣೆಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ವ್ಯವಸ್ಥೆ ಕೂಡ ಸಿಗಲಿದ್ದು, ರಾಜ್ಯ ಸರ್ಕಾರದಿಂದಲೇ ಈ ವ್ಯವಸ್ಥೆ ಇರುವುದರಿಂದ ಶುಭ ಸಮಾರಂಭಗಳನ್ನು ಸುಸೂತ್ರವಾಗಿ ನೆರವೇರಿಸಬಹುದಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications