Tirupati Tirumala: ತಿರುಪತಿಗೆ ಹೋಗುವ ಕರ್ನಾಟಕದ ಭಕ್ತರಿಗೆ ಭರ್ಜರಿ ಸಿಹಿಸುದ್ದಿ
ಪ್ರಸಿದ್ಧ ಧಾರ್ಮಿಕ ಸ್ಥಳ ಆಂಧ್ರಪ್ರದೇಶದ ತಿರುಪತಿ ತಿರುಮಲ ಕ್ಷೇತ್ರಕ್ಕೆ ಲಕ್ಷಾಂತರ ಜನ ಭಕ್ತಾದಿಗಳು ಭೇಟಿ ನೀಡುತ್ತಾರೆ. ದಿನವಿಡೀ ಕಾದು ವೆಂಕಟೇಶ್ವರನ ದರ್ಶನ ಪಡೆಯಲು ದೇಶದ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ. ಬೆಂಗಳೂರಿನಿಂದ ಕೆಲವೇ ಗಂಟೆಗಳ ಪ್ರಯಾಣದ ದೂರದಲ್ಲಿರುವುದರಿಂದ ಕರ್ನಾಟಕದಿಂದಲೂ ತಿರುಪತಿಗೆ ತೆರಳುವ ಭಕ್ತರ ಸಂಖ್ಯೆ ಹೆಚ್ಚೇ ಇದೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರವು ತಿರುಪತಿಗೆ ಹೋಗುವ ಕರ್ನಾಟಕದ ಭಕ್ತಾದಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಸರ್ಕಾರದಿಂದಲೇ ಹೊರ ರಾಜ್ಯದಲ್ಲಿ ಭಕ್ತಾದಿಗಳಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ.
ಈ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಛತ್ರ (ಮೈಸೂರು ಕಾಂಪ್ಲೆಕ್ಸ್) "ಶ್ರೀ ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್" ಕಲ್ಯಾಣ ಮಂಟಪವನ್ನು ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದಾರೆ. ತಿರುಮಲದಲ್ಲಿ ನಿರ್ಮಾಣವಾಗಿರುವ 36 ಕೊಠಡಿಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ಕರ್ನಾಟಕ ಛತ್ರದ ದೇವಸ್ಥಾನದ ಉದ್ಘಾಟನೆ ಸೆಪ್ಟೆಂಬರ್ನಲ್ಲಿ ನಡೆಯಲಿದೆ. 36 ಸುಸಜ್ಜಿತ ಕೊಠಡಿಗಳ ವಿಐಪಿ ಬ್ಲಾಕ್ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಅಂತಿಮ ಹಂತದ ಕೆಲಸಗಳು ಪ್ರಗತಿಯಲ್ಲಿವೆ. ಸೆಪ್ಟೆಂಬರ್ ವೇಳೆಗೆ ಇದು ಪೂರ್ಣಗೊಳ್ಳಲಿದ್ದು ಆಗ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಆಂಧ್ರದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಕರ್ನಾಟಕ ಸರ್ಕಾರದಿಂದ ನಿರ್ಮಾಣಗೊಂಡಿರುವ ಈ 36 ಕೋಣೆಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ಉದ್ಘಾಟನೆಯೂ ನಡೆಯಲಿದೆ. ಈ ಮೂಲಕ ಬಹಳ ವರ್ಷಗಳ ಕರ್ನಾಟಕ ಭಕ್ತರ ಕನಸು ನನಸಾಗಲಿದೆ ಎಂದು ಹೇಳಿದ್ದಾರೆ.
ಈ ಸೇವೆ ಪಡೆಯುವುದು ಹೇಗೆ?
ಈ ಕಲ್ಯಾಣ ಮಂಟಪವು ಸುಮಾರು 500 ಆಸನಗಳ ಸಾಮರ್ಥ್ಯ ಹಾಗೂ 13 ಕೊಠಡಿಗಳನ್ನು ಒಳಗೊಂಡಿದೆ. ಕರ್ನಾಟಕದಿಂದ ಬಂದು ತಿರುಮಲದಲ್ಲಿ ಮದುವೆ, ನಾಮಕರಣ ಮೊದಲಾದ ಶುಭ ಸಮಾರಂಭಗಳನ್ನು ಆಯೋಜನೆ ಮಾಡುವ ಭಕ್ತರಿಗೆ ಈ ಕಲ್ಯಾಣ ಮಂಟಪ ಲಭ್ಯವಿರುತ್ತದೆ. ಶ್ರೀಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕರ್ನಾಟಕದ ಭಕ್ತರು ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡು ಈ ಸೇವೆಯನ್ನು ಪಡೆದುಕೊಳ್ಳಬಹುದು ಎಂದಿದ್ದಾರೆ.
ಕೃಷ್ಣರಾಜೇಂದ್ರ ಒಡೆಯರ್ ಬ್ಲಾಕ್ ಕಲ್ಯಾಣ ಮಂಟಪದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಕಂದಾಯ ಇಲಾಖೆ, ಮುಜರಾಯಿ ಇಲಾಖೆ ಆಯುಕ್ತ ಎಂ.ವಿ.ವೆಂಕಟೇಶ್ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನು ಕೆಲವೇ ತಿಂಗಳಲ್ಲಿ ಈ ಕಲ್ಯಾಣ ಮಂಟಪದ ಜೊತೆಗೆ 36 ಕೋಣೆಗಳ ವಿಐಪಿ ಬ್ಲಾಕ್, ಕಲ್ಯಾಣಿ ಮತ್ತು ದೇವಸ್ಥಾನದ ವ್ಯವಸ್ಥೆ ಕೂಡ ಸಿಗಲಿದ್ದು, ರಾಜ್ಯ ಸರ್ಕಾರದಿಂದಲೇ ಈ ವ್ಯವಸ್ಥೆ ಇರುವುದರಿಂದ ಶುಭ ಸಮಾರಂಭಗಳನ್ನು ಸುಸೂತ್ರವಾಗಿ ನೆರವೇರಿಸಬಹುದಾಗಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications