ಕೋವಿಡ್ ಪರಿಸ್ಥಿತಿ; ಬಿಪಿಎಲ್ ಕಾರ್ಡ್ದಾರರಿಗೆ ಅಕ್ಕಿ ಹೆಚ್ಚಳ
ಬೆಂಗಳೂರು, ಮೇ 14; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ತಡೆಯಲು ಲಾಕ್ಡೌನ್ ಘೋಷಣೆ ಮಾಡಲಾಗಿದೆ. ವಿವಿಧ ವರ್ಗದ ಜನರಿಗೆ ಈ ಸಂದರ್ಭದಲ್ಲಿ ತೊಂದರೆಯಾಗುತ್ತಿದೆ. ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.
ಆಹಾರ, ನಾಗರಿಕ ಸರಬರಾಜು ಇಲಾಖೆ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಧಾವಿಸಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ನೀಡುವ ಅಕ್ಕಿ ಪ್ರಮಾಣವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಕೋವಿಡ್ ಸಂಕಷ್ಟದ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಜ್ಯದ ಬಡವರಿಗೆ ಹಂಚುವ ಪಡಿತರ ವಿತರಣೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸಚಿವ ಉಮೇಶ್ ಕತ್ತಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ರಾಜ್ಯದಲ್ಲಿ ಪಡಿತರ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದ್ದು, ಇಲಾಖೆಯಿಂದ ಪಡಿತರ ಚೀಟಿಯನ್ನು ವಿತರಿಸಲು ಪರಿಶೀಲನೆ ಹಂತದಲ್ಲಿ ಇದ್ದಲ್ಲಿ ಅವರಿಗೆ ಸಹ ಈ ಪ್ರಯೋಜನ ಸಿಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಮೇ ಮತ್ತು ಜೂನ್ ತಿಂಗಳಿಗೆ ಪ್ರತಿ ಮಾಹೆಗೆ ಉಚಿತವಾಗಿ 10 ಕೆ. ಜಿ. ಬಿಪಿಎಲ್ ಅರ್ಜಿದಾರರಿಗೆ ಮತ್ತು 10 ಕೆ. ಜಿ. (ಪ್ರತಿ ಕೆ. ಜಿ. ಗೆ ರೂ. 15ರಂತೆ ಸಬ್ಸಿಡಿ ದರದಲ್ಲಿ) ಎ. ಪಿ. ಎಲ್ ಅರ್ಜಿದಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ ಮತ್ತು ಜೂನ್ ತಿಂಗಳಿಗೆ ಬಿ. ಪಿ. ಎಲ್. ಪಡಿತರ ಚೀಟಿ ಹೊಂದಿರುವ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆ. ಜಿ. ಆಹಾರ ಧಾನ್ಯದ ಜೊತೆಗೆ 5 ಕೆ. ಜಿ. ಅಕ್ಕಿ ಸೇರಿಸಿ ಒಟ್ಟು 10 ಕೆ. ಜಿ. ಆಹಾರ ಧಾನ್ಯ ನೀಡಲಾಗುತ್ತದೆ.
ಪ್ರತಿ ಪಡಿತರ ಚೀಟಿಗೆ 2 ಕೆ. ಜಿ. ಗೋಧಿ ಮತ್ತು ಅಂತ್ಯೋದರ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ. ಜಿ. ಆಹಾರ ಧಾನ್ಯದ ಜೊತೆಗೆ 5 ಕೆ. ಜಿ. ಅಕ್ಕಿ ಸೇರಿಸಿ ವಿತರಣೆ ಮಾಡಲು ಸೂಚನೆ ನೀಡಲಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications