ರಾಜ್ಯದ ಗೃಹ ರಕ್ಷಕ ದಳದ ಸ್ವಯಂ ಸೇವಕರಿಗೆ ಗುಡ್ ನ್ಯೂಸ್ ಕೊಟ್ಟ ಹೋಮ್ ಮಿನಿಸ್ಟರ್
ಬೆಂಗಳೂರು, ಮಾ. 08: ಪೊಲೀಸರಷ್ಟೇ ಹಗಲಿರುಳು ಬೆವರು ಹರಿಸು, ಐದು ಪೈಸೆ ಲಂಚಕ್ಕೆ ಕೈ ಚಾಚದೇ ಕಾರ್ಯ ನಿರ್ವಹಿಸುವ ಗೃಹ ರಕ್ಷಕ ಸ್ವಯಂ ಸೇವಕರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಗೃಹ ರಕ್ಷಕ ದಳದ ಸ್ವಯಂ ಸೇವಕರ ಭತ್ಯೆಯನ್ನು ದುಪ್ಪಟ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಸುಮಾರು 2025 ಗೃಹ ರಕ್ಷಕ ಸ್ವಯಂ ಸೇವಕರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಸರಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ಹೊರತು ಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸರಿ ಸುಮಾರು 2025, ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ 600 ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.

ಗೃಹ ರಕ್ಷಕರನ್ನು ವರ್ಷದಲ್ಲಿ 353 ದಿನಗಳ ಕಾಲ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದ್ದು, ಬೆಂಗಳೂರು ನಗರದಲ್ಲಿಕೆಲಸ ಮಾಡುವವರಿಗೆ ದಿನಕ್ಕೆ 455 ರೂ. ನೀಡಲಾಗಿತ್ತು. ಪರಿಷ್ಕರಣೆ ಭತ್ಯೆಯಿಂದ ದಿನಕ್ಕೆ 600 ರೂಪಾಯಿ ದೊರೆಯಲಿದೆ. ಅದೇ ರೀತಿ ರಾಜ್ಯದ ಇತರೆ ಭಾಗಗಳಲ್ಲಿ ಗೃಹ ರಕ್ಷಕ ಸಿಬ್ಬಂದಿಗೆ ದಿನಕ್ಕೆ 380 ರೂ. ನೀಡಲಾಗುತ್ತಿತ್ತು. ಇದೀಗ ಅದನ್ನು 600 ರೂ.ಗೆ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶಿಸಿದೆ. ಇದರಿಂದ ಗೃಹ ರಕ್ಷಕ ದಳದ ಸಿಬ್ಬಂದಿಯಲ್ಲಿ ಸಂತಸ ಮನೆ ಮಾಡಿದೆ.

ಹಗಲಿರುಳು ಪೊಲೀಸರಂತೆ ಸೇವೆ ಮಾಡುವ ಗೃಹ ರಕ್ಷಕರು ಬಿಡಿ ಗಾಸು ಭತ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದರು. ತಮ್ಮ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಅನೇಕ ಸಲ ಮನವಿ ಮಾಡಿದ್ದರು. ಆದರೆ, ಸರ್ಕಾರಗಳು ಗೃಹ ರಕ್ಷಕ ಸ್ವಯಂ ಸೇವಕರ ಬಗ್ಗೆ ಗಮನ ಹರಿಸಿರಲಿಲ್ಲ. ಹಾಲಿ ಸರ್ಕಾರ ಪೊಲೀಸ್ ಇಲಾಖೆ ಹೊರತು ಪಡಿಸಿ ಗೃಹ ರಕ್ಷಕ ದಳದಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಯಂ ಸೇವಕರ ದಿನದ ಭತ್ಯೆಯನ್ನು 600 ರೂ.ಗೆ ಹೆಚ್ಚಿಸಿದೆ.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications