ರಾಜ್ಯದ ಗೃಹ ರಕ್ಷಕ ದಳದ ಸ್ವಯಂ ಸೇವಕರಿಗೆ ಗುಡ್ ನ್ಯೂಸ್ ಕೊಟ್ಟ ಹೋಮ್ ಮಿನಿಸ್ಟರ್
ಬೆಂಗಳೂರು, ಮಾ. 08: ಪೊಲೀಸರಷ್ಟೇ ಹಗಲಿರುಳು ಬೆವರು ಹರಿಸು, ಐದು ಪೈಸೆ ಲಂಚಕ್ಕೆ ಕೈ ಚಾಚದೇ ಕಾರ್ಯ ನಿರ್ವಹಿಸುವ ಗೃಹ ರಕ್ಷಕ ಸ್ವಯಂ ಸೇವಕರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಗೃಹ ರಕ್ಷಕ ದಳದ ಸ್ವಯಂ ಸೇವಕರ ಭತ್ಯೆಯನ್ನು ದುಪ್ಪಟ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಸುಮಾರು 2025 ಗೃಹ ರಕ್ಷಕ ಸ್ವಯಂ ಸೇವಕರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 2025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಸರಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತೆ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ಹೊರತು ಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸರಿ ಸುಮಾರು 2025, ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ 600 ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.

ಗೃಹ ರಕ್ಷಕರನ್ನು ವರ್ಷದಲ್ಲಿ 353 ದಿನಗಳ ಕಾಲ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದ್ದು, ಬೆಂಗಳೂರು ನಗರದಲ್ಲಿಕೆಲಸ ಮಾಡುವವರಿಗೆ ದಿನಕ್ಕೆ 455 ರೂ. ನೀಡಲಾಗಿತ್ತು. ಪರಿಷ್ಕರಣೆ ಭತ್ಯೆಯಿಂದ ದಿನಕ್ಕೆ 600 ರೂಪಾಯಿ ದೊರೆಯಲಿದೆ. ಅದೇ ರೀತಿ ರಾಜ್ಯದ ಇತರೆ ಭಾಗಗಳಲ್ಲಿ ಗೃಹ ರಕ್ಷಕ ಸಿಬ್ಬಂದಿಗೆ ದಿನಕ್ಕೆ 380 ರೂ. ನೀಡಲಾಗುತ್ತಿತ್ತು. ಇದೀಗ ಅದನ್ನು 600 ರೂ.ಗೆ ಹೆಚ್ಚಳ ಮಾಡುವಂತೆ ಸರ್ಕಾರ ಆದೇಶಿಸಿದೆ. ಇದರಿಂದ ಗೃಹ ರಕ್ಷಕ ದಳದ ಸಿಬ್ಬಂದಿಯಲ್ಲಿ ಸಂತಸ ಮನೆ ಮಾಡಿದೆ.

ಹಗಲಿರುಳು ಪೊಲೀಸರಂತೆ ಸೇವೆ ಮಾಡುವ ಗೃಹ ರಕ್ಷಕರು ಬಿಡಿ ಗಾಸು ಭತ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದರು. ತಮ್ಮ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಅನೇಕ ಸಲ ಮನವಿ ಮಾಡಿದ್ದರು. ಆದರೆ, ಸರ್ಕಾರಗಳು ಗೃಹ ರಕ್ಷಕ ಸ್ವಯಂ ಸೇವಕರ ಬಗ್ಗೆ ಗಮನ ಹರಿಸಿರಲಿಲ್ಲ. ಹಾಲಿ ಸರ್ಕಾರ ಪೊಲೀಸ್ ಇಲಾಖೆ ಹೊರತು ಪಡಿಸಿ ಗೃಹ ರಕ್ಷಕ ದಳದಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಯಂ ಸೇವಕರ ದಿನದ ಭತ್ಯೆಯನ್ನು 600 ರೂ.ಗೆ ಹೆಚ್ಚಿಸಿದೆ.
Recommended Video
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications