ಈದ್-ಮಿಲಾದ್: ರಾಜ್ಯ ಸರ್ಕಾರದಿಂದ ಕೊವಿಡ್ 19 ಮಾರ್ಗಸೂಚಿ ಪ್ರಕಟ
ಬೆಂಗಳೂರು, ಅಕ್ಟೋಬರ್ 19: ಈದ್-ಮಿಲಾದ್ ಅಕ್ಟೋಬರ್ 30ರಂದು ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈದ್ ಮಿಲಾದ್ ಆಚರಣೆ ಮಾಡುವವರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದೆ.
ಕೊರೊನಾ ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ಸಾಮೂಹಿಕ ಮೆರವಣಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಒಂದೆಡೆ ಸೇರುವುದಕ್ಕೆ ಸರ್ಕಾರ ಅವಕಾಶ ನಿರಾಕರಿಸಿದೆ.
ಈದ್ ಮಿಲಾದ್ ದಿನದಂದು ನಡೆಯುವ ಯಾವುದೇ ರೀತಿಯ ಹಗಲು ಅಥವಾ ರಾತ್ರಿಯ ಧಾರ್ಮಿಕ ಕಾರ್ಯಕ್ರಮ, ಸಭೆಗಳನ್ನೂ ಸಹ ಕಡ್ಡಾಯವಾಗಿ ನಿಷೇಧಿಸಿದೆ. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬ ಆಚರಿಸಬೇಕು.

-ಪ್ರಾರ್ಥನಾ ಮಂದಿರದಲ್ಲಿ ಸ್ಯಾನಿಟೈಸ್ ಹಾಗೂ ಸೋಪಿನಿಂದ ಕೈ ತೊಳೆಯಲು ಪ್ರವೇಶ ದ್ವಾರದಲ್ಲೇ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕಡ್ಡಾಯವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ ಅಂತರ ಕಾಯ್ದುಕೊಳ್ಳಲೇಬೇಕೆಂದು ಹೇಳಲಾಗಿದೆ.
-ಕೊವಿಡ್ 19 ಶಿಷ್ಟಾಚಾರದಂತೆ ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
-ರಾಜ್ಯದ ವಕ್ಫ್ ಮಂಡಳಿಯ ಜಿಲ್ಲಾ ವಕ್ಫ್ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲಾ ಈದ್ಗಾ, ಮಸೀದಿ, ದರ್ಗಾ ಮತ್ತಿತರೆ ಸಂಸ್ಥೆಗಳಿಗೆ ಈ ಆದೇಶವನ್ನು ಜಾರಿ ಮಾಡುವುದು, ಈ ಆದೇಶವನ್ನು ಎಲ್ಲಾ ವಕ್ಫ್ ಸಂಸ್ಥೆ ಕಟ್ಟು ನಿಟ್ಟಾಗಿ ಆದೇಶವನ್ನು ಜಾರಿ ಮಾಡುವುದು.
Recommended Video
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications