ಈದ್-ಮಿಲಾದ್: ರಾಜ್ಯ ಸರ್ಕಾರದಿಂದ ಕೊವಿಡ್ 19 ಮಾರ್ಗಸೂಚಿ ಪ್ರಕಟ
ಬೆಂಗಳೂರು, ಅಕ್ಟೋಬರ್ 19: ಈದ್-ಮಿಲಾದ್ ಅಕ್ಟೋಬರ್ 30ರಂದು ಆಚರಿಸಲಾಗುತ್ತಿದ್ದು, ರಾಜ್ಯ ಸರ್ಕಾರವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈದ್ ಮಿಲಾದ್ ಆಚರಣೆ ಮಾಡುವವರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದೆ.
ಕೊರೊನಾ ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಬಾರಿ ಸಾಮೂಹಿಕ ಮೆರವಣಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಒಂದೆಡೆ ಸೇರುವುದಕ್ಕೆ ಸರ್ಕಾರ ಅವಕಾಶ ನಿರಾಕರಿಸಿದೆ.
ಈದ್ ಮಿಲಾದ್ ಶಾಂತಿಸಭೆ ನಿಯಮ ಉಲ್ಲಂಘನೆ; ದಾವಣಗೆರೆಯಲ್ಲಿ ಲಾಠಿ ಚಾರ್ಜ್
ಈದ್ ಮಿಲಾದ್ ದಿನದಂದು ನಡೆಯುವ ಯಾವುದೇ ರೀತಿಯ ಹಗಲು ಅಥವಾ ರಾತ್ರಿಯ ಧಾರ್ಮಿಕ ಕಾರ್ಯಕ್ರಮ, ಸಭೆಗಳನ್ನೂ ಸಹ ಕಡ್ಡಾಯವಾಗಿ ನಿಷೇಧಿಸಿದೆ. 60 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬ ಆಚರಿಸಬೇಕು.
-ಪ್ರಾರ್ಥನಾ ಮಂದಿರದಲ್ಲಿ ಸ್ಯಾನಿಟೈಸ್ ಹಾಗೂ ಸೋಪಿನಿಂದ ಕೈ ತೊಳೆಯಲು ಪ್ರವೇಶ ದ್ವಾರದಲ್ಲೇ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕಡ್ಡಾಯವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ ಅಂತರ ಕಾಯ್ದುಕೊಳ್ಳಲೇಬೇಕೆಂದು ಹೇಳಲಾಗಿದೆ.
-ಕೊವಿಡ್ 19 ಶಿಷ್ಟಾಚಾರದಂತೆ ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
Recommended Video
-ರಾಜ್ಯದ ವಕ್ಫ್ ಮಂಡಳಿಯ ಜಿಲ್ಲಾ ವಕ್ಫ್ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಎಲ್ಲಾ ಈದ್ಗಾ, ಮಸೀದಿ, ದರ್ಗಾ ಮತ್ತಿತರೆ ಸಂಸ್ಥೆಗಳಿಗೆ ಈ ಆದೇಶವನ್ನು ಜಾರಿ ಮಾಡುವುದು, ಈ ಆದೇಶವನ್ನು ಎಲ್ಲಾ ವಕ್ಫ್ ಸಂಸ್ಥೆ ಕಟ್ಟು ನಿಟ್ಟಾಗಿ ಆದೇಶವನ್ನು ಜಾರಿ ಮಾಡುವುದು.