ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಲೈಂಗಿಕ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!
ಬೆಂಗಳೂರು, ಜು. 07: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡಲು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ. ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್ 'ಎ' ನಿಂದ ಗ್ರೂಪ್ 'ಡಿ' ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ನೀಡಬೇಕೆಂದು ಆದೇಶ ಮಾಡಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಚಿಂತನೆ ಆರಂಭಿಸಿದ್ದರು. ಇದೀಗ ಹೈಕೋರ್ಟ್ ಆದೇಶದಂತೆ ರಾಜ್ಯ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ನ್ನು ತಿದ್ದುಪಡಿ ಮಾಡಲಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕಳೆದ ವರ್ಷ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಜುಲೈ 6, 2021 ರಂದು ಅಧಿಸೂಚನೆ ಹೊರಡಿಸಿರುವ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ಈಸಲಾತಿ ನಿಗದಿ ಮಾಡಿ ಆದೇಶ ಮಾಡಿದೆ.
ಅಧಿಸೂಚನೆಯ ಪ್ರಕಾರ ಜನರಲ್ ಮೆರಿಟ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ಲಭ್ಯವಿರುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ಕ್ಕೆ ತಿದ್ದುಪಡಿ ತರಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಂಗಮ ಎಂಬ ಸಂಸ್ಥೆಯು ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅಧಿಸೂಚನೆಯ ಕರಡನ್ನು ಸಲ್ಲಿಸಿತ್ತು.

ಸರ್ಕಾರಿ ನೇರ ನೇಮಕಾತಿಯ ಸಂದರ್ಭದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಶೇಕಡಾ 1ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Recommended Video
ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ 2017ರ ನವೆಂಬರ್ ತಿಂಗಳಿನಲ್ಲಿ 'ಲೈಂಗಿಕ ಅಲ್ಪಸಂಖ್ಯಾತರ ನೀತಿ'ಯನ್ನು ಜಾರಿಗೆ ತಂದಿತ್ತು. ಆಗಿನ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡುವ ಬಗ್ಗೆಯೂ ಚರ್ಚೆ ಆಗಿತ್ತು. ಲೈಂಗಿಕ ಅಲ್ಪಸಂಖ್ಯಾತರಿಗೆ ಅಂವಿಧಾನದಲ್ಲಿನ ಎಲ್ಲ ಸವಲತ್ತುಗಳು ಸಿಗಬೇಕು ಎಂದು 2014ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಮೀಸಲಾತಿ ಕೊಡುವ ಕುರಿತು ಪ್ರಕ್ರಿಯೆ ಮುಂದುವರೆಸಿತ್ತು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications