ಹಸಿರು ಪಟಾಕಿ ಎಂದರೇನು?: ಸರ್ಕಾರದ ಸ್ಪಷ್ಟನೆ ಇಲ್ಲಿದೆ
ಬೆಂಗಳೂರು, ನವೆಂಬರ್ 13: ದೀಪಾವಳಿ ಸನ್ನಿಹಿತವಾಗುತ್ತಿದೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಸಿರು ಪಟಾಕಿಗಳನ್ನು ಸಿಡಿಸಲು ಹಾಗೂ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ.
ಆದರೆ ಈ ಹಸಿರು ಪಟಾಕಿ ಎಂದರೇನು ಎಂಬುದರ ಕುರಿತು ಜನರಿಗೆ ಗೊಂದಲಗಳಿದ್ದವು. ಇದೀಗ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.
ಹಸಿರು ಪಟಾಕಿಗಳು ಪರಿಸರಕ್ಕೆ ಹಾನಿ ಉಂಟು ಮಾಡುವುದಿಲ್ಲ. ಹೀಗಾಗಿ ಈ ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹಸಿರು ಪಟಾಕಿಯನ್ನು ಕಂಡು ಹಿಡಿಯುವುದು, ಕೊಳ್ಳುವುದು ಹೇಗೆ ಎಂಬುದರ ಕುರಿತು ಕೂಡ ಮಾಹಿತಿ ಇಲ್ಲಿದೆ. ಹಸಿರು ಪಟಾಕಿಯನ್ನು NEERI ಲ್ಯಾಬ್ ಫಾರ್ಮುಲಾದ ಪ್ರಕಾರ ತಯಾರಿಸಲಾಗುತ್ತದೆ. ಇದಕ್ಕೆ ಪೆಟ್ರೋಲಿಯಂ ಆ್ಯಂಡ್ ಎಕ್ಸ್ಪ್ಲೋಸಿವ್ ಸೇಫ್ಟಿ ಆರ್ಗನೈಸೇಷನ್ ಪ್ರಮಾಣೀಕರಣ ನೀಡಿದೆ. ಗ್ರಾಹಕರು ಹಸಿರು ಪಟಾಕಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು.
ಹಸಿರು ಪಟಾಕಿ ಬಾಕ್ಸ್ಗಳ ಮೇಲೆ NEERI ಮತ್ತು PESO ಲಾಂಛನ ಇರುತ್ತದೆ. ನಿಮ್ಮ ಮೊಬೈಲ್ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹಸಿರು ಪಟಾಕಿಯು ಕಡಿಮೆ ಹೊಗೆಯನ್ನು ಹರಡುತ್ತದೆ. ಈ ಪಟಾಕಿ ಸಾಮಾನ್ಯ ಪಟಾಕಿಗಿಂತ ಶೇ. 30ರಷ್ಟು ಮಾತ್ರ ಮಾಲಿನ್ಯ ಮಾಡುತ್ತದೆ. ಹಸಿರು ಪಟಾಕಿಗಳು ಧೂಳೆಬ್ಬಿಸುವುದಿಲ್ಲ, ಇವನ್ನು ಗುರುತಿಸುವುದು ಸುಲಭವಾಗುವಂತೆ ಕ್ಯೂಆರ್ ಕೋಡ್ ನೀಡಲಾಗಿರುತ್ತದೆ.
ಈ ಬಾರಿ ಸಿಎಸ್ಐಆರ್-ನೀರಿ ಸಂಸ್ಥೆಗಳಿಂದ ಮಾನ್ಯತೆ ಪಡೆದಿರುವ ಕಂಪನಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಎಂದರೆ ಸಾಮಾನ್ಯ ಪಟಾಕಿಗಿಂತ ಕಡಿಮೆ ಮಾಲಿನ್ಯ ಮಾಡುವ ಪಟಾಕಿ.
CSIR ಮತ್ತು NEERI ಸಂಶೋಧನಾ ಸಂಸ್ಥೆಗಳು ಜಂಟಿಯಾಗಿ ಹಸಿರು ಪಟಾಕಿಯನ್ನು ಅಭಿವೃದ್ದಿ ಪಡಿಸಿವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications