ಹಸಿರು ಪಟಾಕಿ ಎಂದರೇನು?: ಸರ್ಕಾರದ ಸ್ಪಷ್ಟನೆ ಇಲ್ಲಿದೆ
ಬೆಂಗಳೂರು, ನವೆಂಬರ್ 13: ದೀಪಾವಳಿ ಸನ್ನಿಹಿತವಾಗುತ್ತಿದೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಸಿರು ಪಟಾಕಿಗಳನ್ನು ಸಿಡಿಸಲು ಹಾಗೂ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ.
ಆದರೆ ಈ ಹಸಿರು ಪಟಾಕಿ ಎಂದರೇನು ಎಂಬುದರ ಕುರಿತು ಜನರಿಗೆ ಗೊಂದಲಗಳಿದ್ದವು. ಇದೀಗ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.
ಹಸಿರು ಪಟಾಕಿಗಳು ಪರಿಸರಕ್ಕೆ ಹಾನಿ ಉಂಟು ಮಾಡುವುದಿಲ್ಲ. ಹೀಗಾಗಿ ಈ ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹಸಿರು ಪಟಾಕಿಯನ್ನು ಕಂಡು ಹಿಡಿಯುವುದು, ಕೊಳ್ಳುವುದು ಹೇಗೆ ಎಂಬುದರ ಕುರಿತು ಕೂಡ ಮಾಹಿತಿ ಇಲ್ಲಿದೆ. ಹಸಿರು ಪಟಾಕಿಯನ್ನು NEERI ಲ್ಯಾಬ್ ಫಾರ್ಮುಲಾದ ಪ್ರಕಾರ ತಯಾರಿಸಲಾಗುತ್ತದೆ. ಇದಕ್ಕೆ ಪೆಟ್ರೋಲಿಯಂ ಆ್ಯಂಡ್ ಎಕ್ಸ್ಪ್ಲೋಸಿವ್ ಸೇಫ್ಟಿ ಆರ್ಗನೈಸೇಷನ್ ಪ್ರಮಾಣೀಕರಣ ನೀಡಿದೆ. ಗ್ರಾಹಕರು ಹಸಿರು ಪಟಾಕಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು.
ಹಸಿರು ಪಟಾಕಿ ಬಾಕ್ಸ್ಗಳ ಮೇಲೆ NEERI ಮತ್ತು PESO ಲಾಂಛನ ಇರುತ್ತದೆ. ನಿಮ್ಮ ಮೊಬೈಲ್ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹಸಿರು ಪಟಾಕಿಯು ಕಡಿಮೆ ಹೊಗೆಯನ್ನು ಹರಡುತ್ತದೆ. ಈ ಪಟಾಕಿ ಸಾಮಾನ್ಯ ಪಟಾಕಿಗಿಂತ ಶೇ. 30ರಷ್ಟು ಮಾತ್ರ ಮಾಲಿನ್ಯ ಮಾಡುತ್ತದೆ. ಹಸಿರು ಪಟಾಕಿಗಳು ಧೂಳೆಬ್ಬಿಸುವುದಿಲ್ಲ, ಇವನ್ನು ಗುರುತಿಸುವುದು ಸುಲಭವಾಗುವಂತೆ ಕ್ಯೂಆರ್ ಕೋಡ್ ನೀಡಲಾಗಿರುತ್ತದೆ.
ಈ ಬಾರಿ ಸಿಎಸ್ಐಆರ್-ನೀರಿ ಸಂಸ್ಥೆಗಳಿಂದ ಮಾನ್ಯತೆ ಪಡೆದಿರುವ ಕಂಪನಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಎಂದರೆ ಸಾಮಾನ್ಯ ಪಟಾಕಿಗಿಂತ ಕಡಿಮೆ ಮಾಲಿನ್ಯ ಮಾಡುವ ಪಟಾಕಿ.
CSIR ಮತ್ತು NEERI ಸಂಶೋಧನಾ ಸಂಸ್ಥೆಗಳು ಜಂಟಿಯಾಗಿ ಹಸಿರು ಪಟಾಕಿಯನ್ನು ಅಭಿವೃದ್ದಿ ಪಡಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications