KSRTC Bus: ರಾಜ್ಯದಲ್ಲಿ ರೋಡಿಗಿಳಿದ 'ಪಲ್ಲಕ್ಕಿ' ಬಸ್ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ, ವಿವರ
ಬೆಂಗಳೂರು, ಅಕ್ಟೋಬರ್ 07: ಬಹುನಿರೀಕ್ಷಿತ ನಾನ್ ಎಸಿ 'ಪಲ್ಲಕ್ಕಿ' ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ಗಳೊಂದಿಗೆ 100 ಹೊಸ ಬಸ್ಗಳನ್ನು ಕೆಎಸ್ಆರ್ಟಿಸಿ ಹೊರತಂದಿದೆ.
ನೂತನ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಜರಿದ್ದರು.

'ಪಲ್ಲಕ್ಕಿ' ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.
ಪ್ರಸ್ತುತ ಕರ್ನಾಟಕದ ನಾಲ್ಕು ಬಸ್ ಘಟಕಗಳು ರಾಜ್ಯದಾದ್ಯಂತ 23,989 ಬಸ್ಗಳನ್ನು ನಿರ್ವಹಿಸುತ್ತವೆ. ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಓಡುತ್ತವೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ 'ಶಕ್ತಿ' ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್ಗಳಲ್ಲಿ ಮೂವತ್ತು ಬಸ್ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸ ಪಲ್ಲಕ್ಕಿ ಬಸ್ಗಳ ವೈಶಿಷ್ಟ್ಯ ತಿಳಿಯಿರಿ
- ಈ ಬಸ್ಗಳು 11.3 ಮೀಟರ್ ಉದ್ದವಾಗಿವೆ
- ಎಚ್ಪಿ ಕಂಪನಿಯ ಬಿಎಸ್-6 ತಂತ್ರಜ್ಞಾನವನ್ನು ಬಳಸಿ ಇಂಜಿನ್ ತಯಾರಿಸಲಾಗಿದೆ
- ಇವುಗಳಲ್ಲಿ 28 ಹೈಟೆಕ್ ಸ್ಲೀಪರ್ ಬರ್ತ್ ಸೀಟುಗಳು ಇವೆ
- ಪ್ರತಿ ಆಸನಕ್ಕೂ ಮೊಬೈಲ್ ಸ್ಟ್ಯಾಂಡ್ಗಳಿವೆ
- ಮೊಬೈಲ್ ಮತ್ತು ಲ್ಯಾಪ್ಟಾಪ್ ಚಾರ್ಜಿಂಗ್ ಸೌಲಭ್ಯಗಳನ್ನು ಈ ಬಸ್ಗಳು ಹೊಂದಿವೆ
- ರಾತ್ರಿ ವೇಳೆ ಸೀಟ್ಗಳ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಲು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ
- ಪ್ರಯಾಣದ ವೇಳೆ ಓದಲು ಸುಧಾರಿತ ಎಲ್ಇಡಿ ಬೆಳಕಿನ ವ್ಯವಸ್ಥೆ ಇದೆ
- ಪ್ರಯಾಣಿಕರ ಮಾಹಿತಿಗಾಗಿ ಆಡಿಯೋ ರಿಸೀವರ್ಗಳನ್ನು ಅಳವಡಿಸಲಾಗಿದೆ
- ಪಲ್ಲಕ್ಕಿ ಬಸ್ಗಳಲ್ಲಿ ಡಿಜಿಟಲ್ ಗಡಿಯಾರ ಮತ್ತು ಎಲ್ಇಡಿ ನೆಲಹಾಸಿನ ವ್ಯವಸ್ಥೆಯನ್ನು ಅಳವಡಿಸಲಾಗಿದೆ
- ಚಪ್ಪಲಿ ಅಥವಾ ಬೂಟ್ಗಳನ್ನು ಇಡಲು ಪ್ರತಿ ಪ್ರಯಾಣಿಕರಿಗೆ ಅನುಕೂಲಕರ ಸ್ಥಳವನ್ನು ಕಲ್ಪಿಸಲಾಗಿದೆ
- ಪ್ರತಿ ಸ್ಲೀಪರ್ ಸೀಟುಗಳಲ್ಲಿ ದಿಂಬಿನ ವ್ಯವಸ್ಥೆ ಮಾಡಲಾಗಿದೆ
- ಚಾಲಕನಿಗೆ ಸಹಾಯ ಮಾಡಲು ಬಸ್ನ ಹಿಂಭಾಗದಲ್ಲಿ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion












Click it and Unblock the Notifications