KSRTC Bus: ರಾಜ್ಯದಲ್ಲಿ ರೋಡಿಗಿಳಿದ 'ಪಲ್ಲಕ್ಕಿ' ಬಸ್ಗಳು- ಏನೇನು ವೈಶಿಷ್ಟ್ಯ? ಎಲ್ಲೆಲ್ಲಿ ಸಂಚಾರ? ಮಾಹಿತಿ, ವಿವರ
ಬೆಂಗಳೂರು, ಅಕ್ಟೋಬರ್ 07: ಬಹುನಿರೀಕ್ಷಿತ ನಾನ್ ಎಸಿ 'ಪಲ್ಲಕ್ಕಿ' ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ಗಳೊಂದಿಗೆ 100 ಹೊಸ ಬಸ್ಗಳನ್ನು ಕೆಎಸ್ಆರ್ಟಿಸಿ ಹೊರತಂದಿದೆ.
ನೂತನ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಜರಿದ್ದರು.

'ಪಲ್ಲಕ್ಕಿ' ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್ಗಳು ಅಂತರರಾಜ್ಯಗಳಿಗೆ ಹಾಗೂ ರಾಜ್ಯದ ಪ್ರಮುಖ ನಗರಗಳ ನಡುವೆ ಸಂಚರಿಸಲಿವೆ.
ಪ್ರಸ್ತುತ ಕರ್ನಾಟಕದ ನಾಲ್ಕು ಬಸ್ ಘಟಕಗಳು ರಾಜ್ಯದಾದ್ಯಂತ 23,989 ಬಸ್ಗಳನ್ನು ನಿರ್ವಹಿಸುತ್ತವೆ. ದಿನಕ್ಕೆ ಸರಾಸರಿ 65.02 ಲಕ್ಷ ಕಿಲೋಮೀಟರ್ ಓಡುತ್ತವೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ 'ಶಕ್ತಿ' ಯೋಜನೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಸ್ಗಳಿಗೆ ಹೆಚ್ಚು ಬೇಡಿಕೆ ಇದೆ. ಬಸ್ಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು ನೂರಾರು ಹೊಸ ಬಸ್ಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಈಗ ಬಿಡುಗಡೆಯಾಗಿರುವ ನಲವತ್ತು ಪಲ್ಲಕ್ಕಿ ಬಸ್ಗಳಲ್ಲಿ ಮೂವತ್ತು ಬಸ್ಗಳು ಕರ್ನಾಟಕದಲ್ಲಿಯೇ ಸಂಚಾರ ನಡೆಸಲಿವೆ. ಉಳಿದ ಹತ್ತು ಬಸ್ಗಳು ಬೇರೆ ರಾಜ್ಯಗಳಿಗೆ ತೆರಳಿವೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸ ಪಲ್ಲಕ್ಕಿ ಬಸ್ಗಳ ವೈಶಿಷ್ಟ್ಯ ತಿಳಿಯಿರಿ
- ಈ ಬಸ್ಗಳು 11.3 ಮೀಟರ್ ಉದ್ದವಾಗಿವೆ
- ಎಚ್ಪಿ ಕಂಪನಿಯ ಬಿಎಸ್-6 ತಂತ್ರಜ್ಞಾನವನ್ನು ಬಳಸಿ ಇಂಜಿನ್ ತಯಾರಿಸಲಾಗಿದೆ
- ಇವುಗಳಲ್ಲಿ 28 ಹೈಟೆಕ್ ಸ್ಲೀಪರ್ ಬರ್ತ್ ಸೀಟುಗಳು ಇವೆ
- ಪ್ರತಿ ಆಸನಕ್ಕೂ ಮೊಬೈಲ್ ಸ್ಟ್ಯಾಂಡ್ಗಳಿವೆ
- ಮೊಬೈಲ್ ಮತ್ತು ಲ್ಯಾಪ್ಟಾಪ್ ಚಾರ್ಜಿಂಗ್ ಸೌಲಭ್ಯಗಳನ್ನು ಈ ಬಸ್ಗಳು ಹೊಂದಿವೆ
- ರಾತ್ರಿ ವೇಳೆ ಸೀಟ್ಗಳ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಲು ಎಲ್ಇಡಿ ವ್ಯವಸ್ಥೆ ಮಾಡಲಾಗಿದೆ
- ಪ್ರಯಾಣದ ವೇಳೆ ಓದಲು ಸುಧಾರಿತ ಎಲ್ಇಡಿ ಬೆಳಕಿನ ವ್ಯವಸ್ಥೆ ಇದೆ
- ಪ್ರಯಾಣಿಕರ ಮಾಹಿತಿಗಾಗಿ ಆಡಿಯೋ ರಿಸೀವರ್ಗಳನ್ನು ಅಳವಡಿಸಲಾಗಿದೆ
- ಪಲ್ಲಕ್ಕಿ ಬಸ್ಗಳಲ್ಲಿ ಡಿಜಿಟಲ್ ಗಡಿಯಾರ ಮತ್ತು ಎಲ್ಇಡಿ ನೆಲಹಾಸಿನ ವ್ಯವಸ್ಥೆಯನ್ನು ಅಳವಡಿಸಲಾಗಿದೆ
- ಚಪ್ಪಲಿ ಅಥವಾ ಬೂಟ್ಗಳನ್ನು ಇಡಲು ಪ್ರತಿ ಪ್ರಯಾಣಿಕರಿಗೆ ಅನುಕೂಲಕರ ಸ್ಥಳವನ್ನು ಕಲ್ಪಿಸಲಾಗಿದೆ
- ಪ್ರತಿ ಸ್ಲೀಪರ್ ಸೀಟುಗಳಲ್ಲಿ ದಿಂಬಿನ ವ್ಯವಸ್ಥೆ ಮಾಡಲಾಗಿದೆ
- ಚಾಲಕನಿಗೆ ಸಹಾಯ ಮಾಡಲು ಬಸ್ನ ಹಿಂಭಾಗದಲ್ಲಿ ಹೈಟೆಕ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಹುಬ್ಬಳ್ಳಿ-ಗದಗ ಮಧ್ಯೆ ತಡೆರಹಿತ 'ರಾಜಹಂಸ' ಬಸ್ ಸೇವೆ ಆರಂಭ, ಟಿಕೆಟ್ ದರವೆಷ್ಟು-ವೇಳಾಪಟ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications