ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕಕ್ಕೆ 'ಕಲ್ಯಾಣ ರಥ' ಬಸ್ಸುಗಳು ಆರಂಭ- ಯುರೋಪಿಯನ್ ಶೈಲಿಯ ಬಸ್ಗಳ ದರ, ವಿಶೇಷತೆ ತಿಳಿಯಿರಿ
ಬೆಂಗಳೂರು, ಆಗಸ್ಟ್ 30: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ( ಕೆಕೆಆರ್ಟಿಸಿ ) ಕಲ್ಯಾಣ ರಥ ಎಂಬ ಹೆಸರಿನ ಹೊಸ ಬಸ್ಗಳನ್ನು ಪ್ರಾರಂಭಿಸಿದೆ. ಈ ಬಸ್ಸುಗಳು ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕದಲ್ಲಿರುವ ನಗರಗಳ ನಡುವೆ ಸಂಚರಿಸಲಿವೆ.
ಈ ಎಸಿ ಸ್ಲೀಪರ್ ಬಸ್ಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( ಕೆಎಸ್ಆರ್ಟಿಸಿ ) ಅಂಬಾರಿ ಉತ್ಸವ ಬಸ್ಗಳನ್ನು ಹೋಲುತ್ತವೆ. ಅಂಬಾರಿ ಬಸ್ಸುಗಳು ಕಳೆದ ವರ್ಷ ಬಿಡುಗಡೆಯಾಗಿವೆ. ಇವುಗಳು ಯುರೋಪಿಯನ್ ಶೈಲಿಯ ವಿನ್ಯಾಸವನ್ನು ಹೊಂದಿವೆ.

ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕಲ್ಯಾಣ ರಥ ಬಸ್ ಸೇವೆಗಳಿಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಕರ್ನಾಟಕದ ರಾಯಚೂರು ವಿಭಾಗಕ್ಕೆ ಪ್ರತಿದಿನ ಬಸ್ಸುಗಳು ಲಭ್ಯವಿರುತ್ತವೆ ಎಂದು ಹೇಳಿದರು.
ರಾಯಚೂರು ವಿಭಾಗದ ಸಿಂಧನೂರಿನಿಂದ ಬೆಂಗಳೂರಿಗೆ ಸಂಚರಿಸುವ ನೂತನ 'ಕಲ್ಯಾಣ ರಥ' ಮಲ್ಟಿ ಆಕ್ಸಲ್ ಎಸಿ ಸ್ಲೀಪರ್ ಬಸ್ಗೆ ಬೆಂಗಳೂರು ನಗರದ ಮೆಜೆಸ್ಟಿಕ್ ( ಕೆಎಸ್ಆರ್ಟಿಸಿ ) ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ ಎಂದು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಲಾಗಿದೆ.

ಕಲ್ಯಾಣ ರಥದ ಪ್ರತಿ ಬಸ್ನ ಬೆಲೆ ₹ 1.77 ಕೋಟಿ ಆಗಿದೆ. ಇದರ ಟಿಕೆಟ್ ದರ ( ಬೆಂಗಳೂರಿನಿಂದ ಸಿಂದನೂರಿಗೆ ) ₹ 1250 ರೂಪಾಯಿ ಆಗಿದೆ.
ಪ್ರತಿ ಬಸ್ ಅನ್ನು ₹ 1.77 ಕೋಟಿ ವೆಚ್ಚದಲ್ಲಿ ತಯಾರಿಸಲಾಗಿದೆ. ಬೆಂಗಳೂರಿನಿಂದ ಸಿಂದನೂರಿಗೆ ₹ 1250 ಬಸ್ ದರವನ್ನು ನಿಗದಿಪಡಿಸಲಾಗಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು. ಕಲ್ಯಾಣ ಕರ್ನಾಟಕದ ಹೊಸಪೇಟೆ, ಗಂಗಾವತಿ, ಸಿಂಧನೂರು ಮತ್ತು ರಾಯಚೂರು ಪ್ರದೇಶಗಳಿಗೆ ಈ ಬಸ್ಗಳು ಸಂಚರಿಸುತ್ತವೆ.
ಈ ವರ್ಷದ ಫೆಬ್ರುವರಿಯಲ್ಲಿ ಕೆಎಸ್ಆರ್ಟಿಸಿ ಒಟ್ಟು 50 ಅಂಬಾರಿ ಉತ್ಸವ ಬಸ್ಗಳಿಗೆ ಚಾಲನೆ ನೀಡಿದೆ. ಬೆಂಗಳೂರು ಸೆಂಟ್ರಲ್ನಿಂದ ಎರ್ನಾಕುಲಂ, ಹೈದರಾಬಾದ್, ಪಣಜಿ, ತ್ರಿಶೂರ್ ಮತ್ತು ತಿರುವನಂತಪುರಕ್ಕೆ ಈ ಬಸ್ಗಳು ಸಂಚರಿಸುತ್ತವೆ. ಮಂಗಳೂರಿನಿಂದ ಪುಣೆ ಕಡೆಗೆ ಮತ್ತು ಕುಂದಾಪುರದಿಂದ ಬೆಂಗಳೂರಿಗೆ ಬಸ್ಗಳು ಕಾರ್ಯನಿರ್ವಹಿಸುತ್ತಿವೆ.
ಈ ವೋಲ್ವೋ 9600 ಸ್ಲೀಪರ್ ಕೋಚ್ಗಳು ವಿಶೇಷ ಸ್ಕ್ಯಾಂಡಿನೇವಿಯನ್ ವಿನ್ಯಾಸವನ್ನು ಹೊಂದಿವೆ. ಪ್ರತಿ ಬಸ್ನಲ್ಲಿ ಪ್ರಯಾಣಿಕರಿಗೆ 40 ಸ್ಲೀಪಿಂಗ್ ಬರ್ತ್ಗಳಿವೆ. ಕಿಟಕಿಗಳು ಅಗಲವಾಗಿದ್ದು, ಈ ಮೂಲಕ ಹೊರಗಿನ ವಿಹಂಗಮ ಪ್ರಕೃತಿಯನ್ನು ಪ್ರಯಾಣಿಕರು ಅನುಭವಿಸಬಹುದಾಗಿದೆ.
ಕಿತ್ತೂರು ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಬಸ್ಗಳು
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ( NWKRTC ) ಶೀಘ್ರದಲ್ಲೇ ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲಿದೆ. ಇದಕ್ಕಾಗಿ 150 ಕೋಟಿ ರೂಪಾಯಿಗಳನ್ನು ವ್ಯಯಿಸಲು ಸಂಸ್ಥೆ ಮುಂದಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 'ಅಂಬಾರಿ ಉತ್ಸವ' ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 'ಕಲ್ಯಾಣ ರಥ' ದಂತಹ ಅಲ್ಟ್ರಾ ಐಷಾರಾಮಿ ಬಸ್ಗಳಿಗೆ ಸರಿಸಮನಾಗಿ ಎಲೆಕ್ಟ್ರಿಕ್ ಬಸ್ಗಳು ಓಡಿಸಲು NWKRTC ಮುಂದಾಗಿದೆ.
ಗುತ್ತಿಗೆ (ಜಿಸಿಸಿ) ಮಾದರಿಯಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ಸೇರಿಸುವ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿದೆ. 450 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು NWKRTC ಮುಂದಾಗಿದೆ. ಎಲೆಕ್ಟ್ರಿಕ್ ಬಸ್ಗಳು 200 ಮೊಫುಸಿಲ್ ಮಾದರಿಯ ಬಸ್ಗಳಾಗಿವೆ. 150 ಸಿಟಿ ಬಸ್ಗಳು ಮತ್ತು 100 BRTS ಮಾದರಿಯ ಬಸ್ಗಳನ್ನು ಒಳಗೊಂಡಿರುತ್ತವೆ.
ಈ ಎಲೆಕ್ಟ್ರಿಕ್ ಬಸ್ಗಳನ್ನು ಬೆಳಗಾವಿ, ಧಾರವಾಡ ಮತ್ತು ಹುಬ್ಬಳ್ಳಿ ವಿಭಾಗಗಳಿಂದ ಓಡಿಸಲು ಯೋಜಿಸಲಾಗಿದೆ. ಇದೀಗ, NWKRTC ಜಿಲ್ಲೆಗಳಲ್ಲಿ 4,830 ಬಸ್ಗಳನ್ನು ನಿರ್ವಹಿಸುತ್ತಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications