KIADB Scam: ಡಿಸಿಎಂ ಕ್ಷೇತ್ರದಲ್ಲಿ ಭೂ ಮಂಜೂರಾತಿಯಲ್ಲಿ ಸರ್ಕಾರ ಕೋಟಿ ಹಣ ಲೂಟಿ: ಬಿಜೆಪಿ ಆರೋಪ
ಬೆಂಗಳೂರು, ಡಿಸೆಂಬರ್ 12: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಅಧಿಕಾರಿಗಳು ಭೂ ಮಂಜೂರಾತಿ ನೆಪದಲ್ಲಿ ಎರಡೆರಡು ಬಾರಿ ಖಾತೆಗೆ ಹಣ ಹಾಕಿ ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಆರೋಪಿಸಿದೆ.
ಕರ್ನಾಟಕ ರಾಜ್ಯ ಕೈಗಾರಿಕೆ ಪ್ರದೇಶ ಮಂಡಳಿಯಿಂದ ಹಣ ಬಿಡುಗಡೆ ವಿಚಾರವಾಗಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಇದು ಎಟಿಎಂ ಸರ್ಕಾರ ಎಂದು ಜರಿದಿದೆ. ಕಲೆಕ್ಷನ್, ಕಮಿಷನ್ ದಂಧೆಯನ್ನು ಹುಟ್ಟು ಹಾಕಿರುವ ಕರ್ನಾಟಕ ಸರ್ಕಾರವು ಇದೀಗ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಪಾದಿಸಿದೆ.

ಕೆಐಎಡಿಬಿ ಉಪ ಮುಖ್ಯಮಂತ್ರಿ ಅವರ ಕ್ಷೇತ್ರದಲ್ಲಿ ಅಧಿಕಾರಿಗಳು ಭೂ ಮಂಜೂರಾತಿ ನೆಪದಲ್ಲಿ ಎರಡೆರಡು ಬಾರಿ ಖಾತೆಗೆ ಹಣ ಹಾಕಿ ಅವ್ಯವಹಾರ ನಡೆಸುತ್ತಿದ್ದಾರೆ. ಅಧಿಕಾರಿಗಳನ್ನು ಕೋಟಿ ಕೋಟಿ ಲೂಟಿ ಹೊಡೆಯಲು ಬಿಟ್ಟು, ಅವರಿಂದಲೂ ಕಲೆಕ್ಷನ್ ಪಡೆದು ಕ್ರಮ ಕೈಗೊಳ್ಳದೆ ಎಟಿಎಂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದೆ.
ಕಲೆಕ್ಷನ್, ಕಮಿಷನ್ ದಂಧೆಯನ್ನು ಹುಟ್ಟು ಹಾಕಿರುವ @INCKarnataka ಸರ್ಕಾರ ಇದೀಗ ಅಧಿಕಾರಿಗಳನ್ನು ಬಳಸಿಕೊಂಡು ಸರ್ಕಾರಿ ಹಣವನ್ನು ಲೂಟಿ ಮಾಡುತ್ತಿದೆ.
— BJP Karnataka (@BJP4Karnataka) December 12, 2023
ಉಪ ಮುಖ್ಯಮಂತ್ರಿ @DKShivakumar ಅವರ ಕ್ಷೇತ್ರದಲ್ಲಿ ಕೆಐಎಡಿಬಿ ಅಧಿಕಾರಿಗಳು ಭೂ ಮಂಜೂರಾತಿ ನೆಪದಲ್ಲಿ ಎರಡೆರಡು ಬಾರಿ ಖಾತೆಗೆ ಹಣ ಹಾಕಿ ಅವ್ಯವಹಾರ ನಡೆಸುತ್ತಿದ್ದಾರೆ.… pic.twitter.com/joApp5gU2e
ಕೆಐಎಡಿಬಿ ಯಡವಟ್ಟು
ಕೈಗಾರಿಕೆ ಅಭಿವೃದ್ಧಿ ಮಂಡಳಿ ಯಡವಟ್ಟಿನಿಂದಾಗಿ ಅಧಿಕಾರಿಗಳು ಎರಡೆರಡು ಬಾರಿ ಅಕ್ರಮವಾಗಿ ಭೂ ಮಂಜುರಾತಿಗೆ ಹಣ ಬಿಡುಗಡೆ ಮಾಡಿ ಕರ್ನಾಟಕ ಸರ್ಕಾರದ ಭೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟು ಉಂಟು ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹರಳೂರು ಗ್ರಾಮದ ಸರ್ವೇ ನಂಬರ್ 37ರ ಪೈಕಿ 37/ಬಿ5 ಎರಡು ಎಕರೆ 32 ಗುಂಟೆ ಎಕರೆ ಜಮೀನು ಪಡೆಯಲು ಸರ್ಕಾರಕ್ಕೆ ನಕಲಿ ದಾಖಲೆ ಸಲ್ಲಿಸಲಾಗಿತ್ತು. ಇದರ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿ, ಭೂಮಾಲೀಕರು ಶಾಮೀಲಾಗಿದ್ದಾರೆ.

ಅಕ್ರಮವಾಗಿ ಹಣ ಬಿಡುಗಡೆ ಆರೋಪ
ಈ ಕಾರಣದಿಂದಲೇ ಭೂಮಿ ಮಂಜೂರಾತಿಗೆ ರಾತ್ರೋ ರಾತ್ರಿ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದು ದಾಖಲೆಗಳಲ್ಲಿ ಬಹಿರಂಗವಾಗಿದೆ. ಎರಡೆರಡು ಬಾರಿ ಅಕ್ರಮವಾಗಿ ಹಣ ಬಿಡುಗಡೆ ಮಾಡಲಾಗಿದೆ ಅಂತಲೂ ಆರೋಪ ಕೇಳಿ ಬಂದಿದೆ.
ಸದ್ಯ ಈ ವಿಚಾರ ಇಟ್ಟುಕೊಂಡು ಕರ್ನಾಟಕ ಬಿಜೆಪಿಯು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಎಟಿಎಂ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದು, ಕೋಟ್ಯಂತರ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿದೆ.
ಯಾವುದೇ ರೀತಿಯ ಹಕ್ಕು ಇಲ್ಲದಿದ್ದರೂ ಸಹಿತ ಭೂಮಿ ಮಾಲೀಕರು ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿಕೊಂಡು ಕೆಐಎಡಿಬಿ ಎರಡನೇ ಬಾರಿ ಭೂಮಿ ಮಂಜುರಾತಿಗೆ ಹಣ ಬಿಡಗಡೆ ಮಾಡಿದ್ದಾರೆ. ಈ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯ ಕೇಳಿ ಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications