ಸರ್ಕಾರಿ ಶಾಲಾ-ಕಾಲೇಜುಗಳಿಗೆ ಹೊಸ ರೂಲ್ಸ್: ಶಿಕ್ಷಕರು, ವಿದ್ಯಾರ್ಥಿಗಳಿಗೆ ಎಐ ಆಧಾರಿತ ಇ-ಹಾಜರಾತಿ ಕಡ್ಡಾಯ
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ 'ಇ-ಹಾಜರಾತಿ' (E-Attendance) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮರು ಆದೇಶ ಹೊರಡಿಸಿದೆ. ತಂತ್ರಜ್ಞಾನದ ಬಳಕೆಯೊಂದಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಈ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.
ವಿದ್ಯಾರ್ಥಿಗಳಿಗೆ 'ನಿರಂತರ' ಮುಖ ಗುರುತಿಸುವಿಕೆ ವ್ಯವಸ್ಥೆ
ಮಕ್ಕಳ ಹಾಜರಾತಿಯನ್ನು ನಿಖರವಾಗಿ ದಾಖಲಿಸುವ ಉದ್ದೇಶದಿಂದ, ಎಐ ತಂತ್ರಜ್ಞಾನ ಆಧಾರಿತ ಮುಖಚರ್ಯೆ ಗುರುತಿಸುವಿಕೆ ( ಫೇಸ್ ರೆಕಗ್ನಿಷನ್ ) ಅಳವಡಿಸಲಾಗುತ್ತಿದೆ. ಈ ಯೋಜನೆಗೆ 'ನಿರಂತರ' ಎಂದು ಹೆಸರಿಡಲಾಗಿದ್ದು, ಕಳೆದ ರಾಜ್ಯ ಬಜೆಟ್ನಲ್ಲಿಯೇ ಇದರ ಘೋಷಣೆಯಾಗಿತ್ತು. ರಾಜ್ಯದ ಒಟ್ಟು 52,686 ಶಾಲೆಗಳಲ್ಲಿ ಈ ನೂತನ ವ್ಯವಸ್ಥೆಯನ್ನು ಅಳವಡಿಸಲು ಆರಂಭದಲ್ಲಿ 5 ಕೋಟಿ ರೂ ಅನುದಾನವನ್ನು ಮೀಸಲಿಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ 2025-26ನೇ ಸಾಲಿನಲ್ಲಿ ಇದನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಹಿಂದಿನ ಆದೇಶವನ್ನು ಹಿಂಪಡೆದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ಕೇಂದ್ರದ ಸಹಯೋಗದೊಂದಿಗೆ 2.16 ಕೋಟಿ ರೂ. ವೆಚ್ಚದಲ್ಲಿ ಮುಂಬರುವ 2026-27ನೇ ಸಾಲಿನಿಂದ ಕಡ್ಡಾಯವಾಗಿ ಜಾರಿಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಶಿಕ್ಷಕರು ಹಾಗೂ ಸಿಬ್ಬಂದಿಗೆ 'ಕಾಮ್ಸ್' (KAMS) ಕಡ್ಡಾಯ
ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಮುಖ್ಯಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೂ ಹಾಜರಾತಿ ನಿಯಮಗಳು ಬದಲಾಗಿವೆ. ಈವರೆಗೆ ಇಲಾಖೆಯ ಕಚೇರಿಗಳಲ್ಲಿ ಹಾಗೂ ಶಾಲೆಗಳಲ್ಲಿ ಬಳಸಲಾಗುತ್ತಿದ್ದ ಸಾಂಪ್ರದಾಯಿಕ ಬಯೋಮೆಟ್ರಿಕ್ (Biometric) ಹಾಜರಾತಿ ಯಂತ್ರಗಳನ್ನು ಕೈಬಿಡಲು ನಿರ್ಧರಿಸಲಾಗಿದೆ. ಇದರ ಬದಲಾಗಿ, ಸಂಪೂರ್ಣವಾಗಿ ಮೊಬೈಲ್ ಆಧಾರಿತ 'ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ' (KAMS - Karnataka Attendance Management System) ಅಪ್ಲಿಕೇಷನ್ ಮೂಲಕವೇ ಹಾಜರಾತಿಯನ್ನು ದೃಢೀಕರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಮತ್ತೊಂದು ಆದೇಶ ಹೊರಡಿಸಿದೆ.
ಈಗಾಗಲೇ ಕೆಲವು ಆಯ್ದ ಪಿಯು ಕಾಲೇಜುಗಳು ಹಾಗೂ ಶಾಲೆಗಳಲ್ಲಿ 'ಕಾಮ್ಸ್' ಆ್ಯಪ್ ಅನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, ಇದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ, ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯದ ಮೂಲೆ ಮೂಲೆಯಲ್ಲಿರುವ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೂ ಈ ನಿಯಮ ಕಡ್ಡಾಯವಾಗಿ ಅನ್ವಯವಾಗಲಿದೆ.
ಪರೀಕ್ಷಾ ಕರ್ತವ್ಯಕ್ಕೂ ಇದೇ ನಿಯಮ
ಈ ಇ-ಹಾಜರಾತಿ ವ್ಯವಸ್ಥೆಯು ಕೇವಲ ದೈನಂದಿನ ತರಗತಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಮುಂಬರುವ ದಿನಗಳಲ್ಲಿ ಪರೀಕ್ಷಾ ಕಾರ್ಯಗಳು ಹಾಗೂ ಮೌಲ್ಯಮಾಪನ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೂ ಈ ಫೇಸ್ ರೆಕಗ್ನಿಷನ್ ಅಥವಾ ಎಐ ಆಧಾರಿತ ಇ-ಹಾಜರಾತಿಯೇ ಕಡ್ಡಾಯವಾಗಿರಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.
-
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
NCERT 8ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪರಿಷ್ಕರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ಕೇಂದ್ರ -
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ













Click it and Unblock the Notifications