ಹೊರ ರಾಜ್ಯದವರ ಕ್ವಾರಂಟೈನ್ ನಿಯಮ ಮತ್ತೆ ಬದಲಾವಣೆ
ಬೆಂಗಳೂರು, ಜೂನ್ 25 : ಕರ್ನಾಟಕ ಸರ್ಕಾರ ಹೊರ ರಾಜ್ಯದಿಂದ ಬರುವವರಿಗೆ ಇದ್ದ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ. ಇನ್ನು ಮುಂದೆ ಎಲ್ಲರೂ ಹೋಂ ಕ್ವಾರಂಟೈನ್ನಲ್ಲಿರಬೇಕು. ಆದರೆ ಮಹಾರಾಷ್ಟ್ರದಿಂದ ಬರುವವರಿಗೆ ಇದು ಅನ್ವಯವಾಗುವುದಿಲ್ಲ.
Recommended Video
ಗುರುವಾರ ಕಂದಾಯ ಸಚಿವ ಆರ್. ಅಶೋಕ ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದರು. "ಕ್ವಾರಂಟೈನ್ ಮಾರ್ಗಸೂಚಿಯನ್ನು ಸರ್ಕಾರ ಬದಲಾಯಿಸಿದೆ. ಮಹಾರಾಷ್ಟ್ರದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ" ಎಂದು ಹೇಳಿದರು.
ಕರ್ನಾಟಕ; ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದವರ ಲೆಕ್ಕ!
ಸರ್ಕಾರದ ಹೊಸ ಮಾರ್ಗಸೂಚಿಯ ಅನ್ವಯ ತಮಿಳುನಾಡು ಮತ್ತು ದೆಹಲಿಯಿಂದ ರಾಜ್ಯಕ್ಕೆ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಇರುವುದಿಲ್ಲ. ಅವರು 14 ದಿನದ ಹೋಂ ಕ್ವಾರಂಟೈನ್ನಲ್ಲಿರಬೇಕು.
ಕೊರೊನಾ ಭೀತಿ: ಬಿಜೆಪಿ ಶಾಸಕ ಹಾಗೂ ಕುಟುಂಬಕ್ಕೆ ಕ್ವಾರಂಟೈನ್
ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರು 7 ದಿನದ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನದ ಹೋಂ ಕ್ವಾರಂಟೈನ್ನಲ್ಲಿರಬೇಕು ಎಂದು ನಿಯಮಗಳನ್ನು ಬದಲಾವಣೆ ಮಾಡಲಾಗಿದೆ. ಯಾವುದೇ ರಾಜ್ಯದಿಂದ ಬಂದರೂ ಕ್ವಾರಂಟೈನ್ನಲ್ಲಿರಬೇಕು.
ಬೆಂಗಳೂರು; ಕ್ವಾರಂಟೈನ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ, ವ್ಯಕ್ತಿ ಬಂಧನ
ಬೆಂಗಳೂರು ನಗರದಲ್ಲಿ ಕೋವಿಡ್19 ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು ಕ್ವಾರಂಟೈನ್ ಮಾಡಲು ಸ್ಥಳಾವಕಾಶದ ಕೊರತೆ ಎದುರಾಗಿದೆ. ಆದ್ದರಿಂದ, ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ.
#InterStateTravellers
— Dr. Rohini Katoch Sepat. IPS (@DCPSouthBCP) June 28, 2020
Fresh guidelines by the Karnataka state govt to travellers those come to Karnataka and Travel to other states from karnataka.#COVID-19 #letsfightcoronatogether pic.twitter.com/DCi4GlAeDG
ಹೋಂ ಕ್ವಾರಂಟೈನ್ನಲ್ಲಿ ಇರುವವರು ಕಟ್ಟುನಿಟ್ಟಿನ ಗೃಹ ಕ್ವಾರಂಟೈನ್ ನಿಯಮಗಳನ್ನು ಪಾಲಿಸಬೇಕು. ಸೂಕ್ತ ಚಿಕಿತ್ಸೆ ಸೇರಿದಂತೆ ಎಲ್ಲ ಮಾರ್ಗಸೂಚಿಗಳ ಪಾಲನೆಗೆ ಸೂಚನೆ ನೀಡಲಾಗಿದೆ.