ಶಾಲಾ ಕಾಲೇಜಿನಲ್ಲಿ ರಾಷ್ಟ್ರಗೀತೆ ಕಡ್ಡಾಯ ಆದೇಶ, ಏಕೆ?
ಬೆಂಗಳೂರು, ಆಗಸ್ಟ್ 18: ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಖಾಸಗಿ ಶಾಲೆಗಳಲ್ಲಿಯು ಪ್ರತಿದಿನ ತಪ್ಪದೇ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ರಾಷ್ಟ್ರಾಭಿಮಾನವನ್ನು ಬೆಳೆಯುವಂತೆ ಮಾಡುವ ಉದ್ದೇಶದಿಂದ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಆದೇಶವೇನು?
ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಅನ್ವಯ ಸಂವಿಧಾನದಲ್ಲಿ ಹೇಳಿರುವ ನಾಗರೀಕ ಪ್ರಜ್ಞೆಯನ್ನು ಬೋಧಿಸುವುದು, ಸಂವಿಧಾನವನ್ನು ಅನುಸರಿಸುವುದು ಹಾಗೂ ಸಂವಿಧಾನದ ಆದರ್ಶಗಳನ್ನು ಮತ್ತು ಸಂವಿಧಾನ ಸಂಸ್ಥೆಗಳನ್ನು ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜವನ್ನು ಗೌರವಿಸುವ ಸಂಸ್ಕೃತಿಯನ್ನು ಬೆಳೆಸುವ ದೃಷ್ಟಿಯಿಂದ ರಾಜ್ಯದ ಎಲ್ಲ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಖಾಸಗಿ ಶಾಲೆಗಳಲ್ಲಿಯು ಹಾಗೂ ಪದವು ಪೂರ್ವ ಕಾಲೇಜುಗಳಲ್ಲಿಯೂ ಪ್ರತಿದಿನ ಮುಂಜಾನೆ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ಕೇಂದ್ರ ಗೃಹ ಇಲಾಖೆ ಹೇಳಿರುವುದು ಏನು?
ಭಾರತದ ಗೃಹ ಇಲಾಖೆಯ ಆದೇಶ 2016ರ ಅನ್ವಯದಲ್ಲಿ ಶಾಲೆಗಳಲ್ಲಿ ಸಾಮೂಹಿಕ ಪ್ರಾರ್ಥನೆಯ ವೇಳೆಯಲ್ಲಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆಯನ್ನು ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನವನ್ನು ಮತ್ತು ರಾಷ್ಟ್ರದ ಬಗ್ಗೆ ಗೌರವಭಾವವನ್ನು ಮೂಡಿಸಬೇಕಿದೆ ಎಂದು ಆದೇಶಿಸಿದೆ.

ಚಿತ್ರಮಂದಿರದಲ್ಲೂ ರಾಷ್ಟ್ರಗೀತೆ ಕಡ್ಡಾಯ ಮಾಡಲಾಗಿತ್ತು
2016ರ ನವೆಂಬರ್ 30ರಂದು ಚಿತ್ರ ಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು. ಈ ವೇಳೆ ಎಲ್ಲರೂ ಎದ್ದು ನಿಲ್ಲಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿತ್ತು. ನಂತರ ವಿಚಾರಣೆಯೊಂದರ ವೇಳೆ ದೇಶಪ್ರೇಮದ ಹೆಸರಿನಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನೈತಿಕ ಪೊಲೀಸ್ ಗಿರಿ ಆಗುತ್ತದೆ. ಹಾಗಾಗಿ ತನ್ನ ಆದೇಶ ಮಾರ್ಪಾಡಿಗೆ ಸಿದ್ದವೆಂಬ ಸುಳಿವನ್ನು ಸುಪ್ರಿಂಕೋರ್ಟ್ ನೀಡಿತ್ತು. ಈ ಸಂಬಂಧ ಮಾರ್ಗದರ್ಶಿ ಸೂತ್ರ ರಚಿಸುವಂತೆಯೂ ಅದು ಕೇಂದ್ರಕ್ಕೆ ಸಲಹೆ ನೀಡಿತ್ತು.

ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡಲಾಗಿತ್ತಿದೆ
"ರಾಜ್ಯ ಸರ್ಕಾರ ಹೊಸದಾಗಿ ಆದೇಶವನ್ನು ಮಾಡಿ ಶಾಲಾ- ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸಬೇಕು ಎಂದಿದೆ. ಆದರೆ ಶಾಲೆಗಳಲ್ಲಿ ನಿತ್ಯ ಪ್ರಾರ್ಥನೆಯ ವೇಳೆಯಲ್ಲಿ ರಾಷ್ಟ್ರಗೀತೆಯನ್ನು ಸಾಮೂಹಿಕವಾಗಿ ಹಾಡಿಸಲಾಗುತ್ತದೆ. ಹೊಸ ಆದೇಶಕ್ಕೂ ಪೂರ್ವದಿಂದಲೂ ಜಾತಿ, ಧರ್ಮ ಬೇಧವಿಲ್ಲದೇ ರಾಷ್ಟ್ರಗೀತೆಯನ್ನು ಹಾಡಿಸಲಾಗುತ್ತಿದೆ" ಎಂದು ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications