ಕರ್ನಾಟಕದ ಸದೃಢ ಕೈಗಾರಿಕಾ ವಲಯಕ್ಕಾಗಿ ಜರ್ಮನಿ ಜತೆ ಸಹಭಾಗಿತ್ವ: ಎಂಬಿ ಪಾಟೀಲ್
ಬೆಂಗಳೂರು, ಅಕ್ಟೋಬರ್ 13: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ ಯೋಜನೆಗಳ ಕುರಿತು ವಿವರಿಸಿದರು.

ತಯಾರಿಕೆ ಮತ್ತು ತಾಂತ್ರಿಕತೆ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಜರ್ಮನಿ ಸಹಭಾಗಿತ್ವ ಪರಸ್ಪರ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದೆ. ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ. ವಾಹನೋದ್ಯಮ, ಮೂಲಸೌಕರ್ಯ, ಸ್ಮಾರ್ಟ್ ಸಿಟಿ, ಡಿಜಿಟಲ್ ಪರಿಹಾರಗಳಿಗೆ ಸಂಬಂಧಿಸಿದಂತೆ ಗಮನ ಸೆಳೆಯುವಂತಹ ಕೆಲಸ ಮಾಡುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಕರ್ನಾಟಕ 200 ಜರ್ಮನಿ ಕಂಪನಿಗಳ ನೆಲೆ
ದೇಶದಲ್ಲಿ 1600ಕ್ಕೂ ಹೆಚ್ಚು ಜರ್ಮನ್ ಕಂಪನಿಗಳು ಕಾರ್ಯಾಚರಿಸುತ್ತಿದ್ದು ಸುಮಾರು 3 ಲಕ್ಷ ಉದ್ಯೋಗಿಗಳನ್ನು ಸೃಷ್ಟಿಸಿವೆ. ಭಾರತದ ಮಾರುಕಟ್ಟೆಯಲ್ಲಿ ಜರ್ಮನಿ ಜೊತೆ 600ಕ್ಕೂ ಹೆಚ್ಚು ಜಂಟಿ ಸಹಭಾಗಿತ್ವ ಚಾಲ್ತಿಯಲ್ಲಿದೆ. ನಮ್ಮ ಕರ್ನಾಟಕವು ಸುಮಾರು 200 ಜರ್ಮನಿ ಕಂಪನಿಗಳಿಗೆ ನೆಲೆಯಾಗಿದೆ ಎಂದು ಪಾಟೀಲ್ ತಿಳಿಸಿದರು.

ಬೆಳವಣಿಗೆಗೆ ಪೂರಕವಾದ ನಮ್ಮ ಕೈಗಾರಿಕಾ ಕಾರ್ಯ ನೀತಿ, ವಲಯ ನಿರ್ದಿಷ್ಟ ನೀತಿಗಳು, ಸುಗಮ ವ್ಯಾಪಾರಕ್ಕೆ ಒತ್ತು ಮತ್ತು ಕಾರ್ಮಿಕ ಸುಧಾರಣೆ ಕಾನೂನುಗಳು ಕರ್ನಾಟಕ- ಜರ್ಮನಿ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿಯ ಕಾನ್ಸುಲ್ ಜನರಲ್ ಅಕಿಂ ಬುಕಾರ್ಟ್, ವಿಡಿಎಂಎ ಭಾರತ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ನಾಥ, ವಿಡಿಎಂಎ ಅಧ್ಯಕ್ಷ ಕಾರಿ ಹುಸ್ಜೆನ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತಿತರರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications