Investment of Industry: ಮೈಸೂರಲ್ಲಿ ಸರ್ವರ್ ಉತ್ಪಾದನಾ ಘಟಕ, ಭಾರೀ ವಹೀವಾಟು ಸಾಧ್ಯತೆ
ಬೆಂಗಳೂರು, ಜನವರಿ 18: ಸ್ವಿಟ್ಜರ್ಲೆಂಡಿನ ದಾವೋಸ್ ನ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ. ಪ್ರತಿಷ್ಠತಿ ಕಂಪನಿಗಳು ತಮ್ಮ ಉತ್ಪಾದನೆ ವಿಸ್ತರಣೆಗೆ ಹಾಗೂ ಯೋಜನೆಗಳ ಸಂಬಂಧ ಭಾರೀ ಬಂಡವಾಳ ಹೂಡಿಕೆಗೆ ಒಪ್ಪಿಗೆ ಎಂದು ತಿಳಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ.
ಸಚಿವ ಎಂಬಿ ಪಾಟೀಲ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್, ಗೆನಾತ್ರಿ (ಪೆಟ್ರೋನಾಸ್), ಎನ್.ಟಿ.ಟಿ. ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದೆ.

ಈ ಕುರಿತು ಕೈಗಾರಿಕೆ ಕಚೇರಿಯು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಪಾನೀಯಗಳ ತಯಾರಿಕೆಗೆ ಹೆಸರಾಗಿರುವ ಆ್ಯಬ್ ಇನ್ಬೇವ್ ಇಂಡಿಯಾ ಕಂಪನಿಯು ರಾಜ್ಯದಲ್ಲಿ ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ.
ಮೈಸೂರಿನಲ್ಲಿ ಸರ್ವರ್ ತಯಾರಿಕಾ ಘಟಕ
ಎಚ್.ಪಿ. (ಹ್ಯೂಲೆಟ್ ಪೆಕಾರ್ಡ್) ಕಂಪನಿಯು ಇನ್ನೂ 4,000 ಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದೆ. ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ ಎರಡು ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ. ಜೊತೆಗೆ ಮೈಸೂರಿನಲ್ಲಿ ''ಸರ್ವರ್ ತಯಾರಿಕಾ ಘಟಕ'' ಆರಂಭಿಸಲು ಅದು ಮಾತುಕತೆ ನಡೆಸುತ್ತಿದೆ. ಇದು ಸಾಧ್ಯವಾದರೆ 1 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಸಾಧ್ಯವಾಗಲಿದೆ. ಅಲ್ಲದೆ, ಎಚ್.ಪಿ ಕಂಪನಿಯು ರಾಜ್ಯದಲ್ಲಿ ತನ್ನ ಗ್ಲೋಬಲ್ ಲೀಡರ್ ಶಿಪ್' ಕಚೇರಿ ಹೊಂದಲು ಮನಸ್ಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್.ಟಿ.ಟಿ. ಡೇಟಾ ಕಂಪನಿಯು ಮುಂಬರುವ ವರ್ಷಗಳಲ್ಲಿ ನಮ್ಮಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇಂಧನ ತಯಾರಿಕೆ ಗುರಿ
ಪೆಟ್ರೋನಾಸ್ (ಗೆನಾತ್ರಿ) ಕಂಪನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯ ಹೊತ್ತಿಗೆ 30 ಗಿಗಾವ್ಯಾಟ್ ಮರುಬಳಕೆ ಮಾಡಹುದಾದ ಇಂಧನ ತಯಾರಿಸುವ ಗುರಿ ಹೊಂದಿದೆ. ಅಲ್ಲದೆ, ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ತ್ಯಾಜ್ಯ ನಿರ್ವಹಣೆಯನ್ನು ಅದು ವೈಜ್ಞಾನಿಕವಾಗಿ ಮಾಡಲು ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಅದು ರಾಜ್ಯ ಸರ್ಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದರು.
ಇದೇ ರೀತಿಯಲ್ಲಿ ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ. ಇವುಗಳ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲ ಬಗೆಹ ಸಹಕಾರ ಕೊಡುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಈ ಹೂಡಿಕೆಗಳ ಸಂಬಂಧವಾಗಿ ಎಚ್.ಸಿಎಲ್ ಕಂಪನಿಯ ಮುಖ್ಯಸ್ಥ ಬಾಲಸುಬ್ರಮಣಿಯನ್, ಪೆಟ್ರೋನಾಸ್ ಕಂಪನಿಯ ಸಿಇಒ ಸುಶೀಲ್ ಪುರೋಹಿತ್, ಸಿಸ್ಕೋದ ಪ್ರಧಾನ ವ್ಯವಸ್ಥಾಪಕ ಜೀತು ಪಟೇಲ್ ಮುಂತಾದವರ ಜತೆ ವಿಸ್ತೃತ ಚರ್ಚೆ ನಡೆಸಲಾಗಿದೆ.
ದಾವೋಸ್ ಶೃಂಗಸಭೆಗೆ ಸಚಿವರ ಜೊತೆಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್ ಇರುವ ನಿಯೋಗವು ಪಾಲ್ಗೊಂಡಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications