Investment of Industry: ಮೈಸೂರಲ್ಲಿ ಸರ್ವರ್ ಉತ್ಪಾದನಾ ಘಟಕ, ಭಾರೀ ವಹೀವಾಟು ಸಾಧ್ಯತೆ
ಬೆಂಗಳೂರು, ಜನವರಿ 18: ಸ್ವಿಟ್ಜರ್ಲೆಂಡಿನ ದಾವೋಸ್ ನ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಕರ್ನಾಟಕದ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ. ಪ್ರತಿಷ್ಠತಿ ಕಂಪನಿಗಳು ತಮ್ಮ ಉತ್ಪಾದನೆ ವಿಸ್ತರಣೆಗೆ ಹಾಗೂ ಯೋಜನೆಗಳ ಸಂಬಂಧ ಭಾರೀ ಬಂಡವಾಳ ಹೂಡಿಕೆಗೆ ಒಪ್ಪಿಗೆ ಎಂದು ತಿಳಿಸಿದ್ದಾರೆ. ಇದರಿಂದ ರಾಜ್ಯದಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ.
ಸಚಿವ ಎಂಬಿ ಪಾಟೀಲ ನೇತೃತ್ವದ ನಿಯೋಗವು ಎಚ್.ಪಿ., ಆ್ಯಬ್ ಇನ್ಬೇವ್ ಬ್ರೂವರೀಸ್, ಎಚ್.ಸಿ.ಎಲ್, ಗೆನಾತ್ರಿ (ಪೆಟ್ರೋನಾಸ್), ಎನ್.ಟಿ.ಟಿ. ಡೇಟಾ, ಸಿಸ್ಕೋ, ಸ್ವಿಗ್ಗಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳೊಂದಿಗೆ ಮಾತುಕತೆ ನಡೆಸಿ, ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸಿದೆ.

ಈ ಕುರಿತು ಕೈಗಾರಿಕೆ ಕಚೇರಿಯು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಪಾನೀಯಗಳ ತಯಾರಿಕೆಗೆ ಹೆಸರಾಗಿರುವ ಆ್ಯಬ್ ಇನ್ಬೇವ್ ಇಂಡಿಯಾ ಕಂಪನಿಯು ರಾಜ್ಯದಲ್ಲಿ ತನ್ನ ಉತ್ಪಾದನೆ ಹೆಚ್ಚಿಸಲು 400 ಕೋಟಿ ರೂ. ಹೂಡಲು ಒಪ್ಪಿಕೊಂಡಿದೆ.
ಮೈಸೂರಿನಲ್ಲಿ ಸರ್ವರ್ ತಯಾರಿಕಾ ಘಟಕ
ಎಚ್.ಪಿ. (ಹ್ಯೂಲೆಟ್ ಪೆಕಾರ್ಡ್) ಕಂಪನಿಯು ಇನ್ನೂ 4,000 ಉದ್ಯೋಗಗಳನ್ನು ಸೃಷ್ಟಿಸಲು ನಿರ್ಧರಿಸಿದೆ. ಬೆಂಗಳೂರಿನ ಮಹದೇವಪುರದಲ್ಲಿ ಹೊಸದಾಗಿ ಎರಡು ಸುಸಜ್ಜಿತ ಕಚೇರಿಗಳನ್ನು ಆರಂಭಿಸಲಿದೆ. ಜೊತೆಗೆ ಮೈಸೂರಿನಲ್ಲಿ ''ಸರ್ವರ್ ತಯಾರಿಕಾ ಘಟಕ'' ಆರಂಭಿಸಲು ಅದು ಮಾತುಕತೆ ನಡೆಸುತ್ತಿದೆ. ಇದು ಸಾಧ್ಯವಾದರೆ 1 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಸಾಧ್ಯವಾಗಲಿದೆ. ಅಲ್ಲದೆ, ಎಚ್.ಪಿ ಕಂಪನಿಯು ರಾಜ್ಯದಲ್ಲಿ ತನ್ನ ಗ್ಲೋಬಲ್ ಲೀಡರ್ ಶಿಪ್' ಕಚೇರಿ ಹೊಂದಲು ಮನಸ್ಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಈಗಾಗಲೇ 900 ಮಿಲಿಯನ್ ಡಾಲರ್ ಹೂಡಿಕೆ ಮಾಡಿರುವ ಎನ್.ಟಿ.ಟಿ. ಡೇಟಾ ಕಂಪನಿಯು ಮುಂಬರುವ ವರ್ಷಗಳಲ್ಲಿ ನಮ್ಮಲ್ಲಿ ಇನ್ನೂ 2 ಬಿಲಿಯನ್ ಡಾಲರ್ ಬಂಡವಾಳ ತೊಡಗಿಸಲು ತೀರ್ಮಾನಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇಂಧನ ತಯಾರಿಕೆ ಗುರಿ
ಪೆಟ್ರೋನಾಸ್ (ಗೆನಾತ್ರಿ) ಕಂಪನಿಯು ಶುದ್ಧ ಇಂಧನ ಕ್ಷೇತ್ರದಲ್ಲಿ ತೊಡಗಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯ ಹೊತ್ತಿಗೆ 30 ಗಿಗಾವ್ಯಾಟ್ ಮರುಬಳಕೆ ಮಾಡಹುದಾದ ಇಂಧನ ತಯಾರಿಸುವ ಗುರಿ ಹೊಂದಿದೆ. ಅಲ್ಲದೆ, ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ತ್ಯಾಜ್ಯ ನಿರ್ವಹಣೆಯನ್ನು ಅದು ವೈಜ್ಞಾನಿಕವಾಗಿ ಮಾಡಲು ಆಸಕ್ತಿ ಹೊಂದಿದೆ. ಈ ನಿಟ್ಟಿನಲ್ಲಿ ಅದು ರಾಜ್ಯ ಸರ್ಕಾರದೊಂದಿಗೆ ಸಹಭಾಗಿತ್ವ ಹೊಂದಲು ಬಯಸಿದೆ ಎಂದರು.
ಇದೇ ರೀತಿಯಲ್ಲಿ ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಸಿಸ್ಕೋ, ನಗರ ಸಂಚಾರ ವ್ಯವಸ್ಥೆಯೊಂದಿಗೆ ಸ್ವಿಗ್ಗಿ ವಿದ್ಯುತ್ ಚಾಲಿತ ವಾಹನ ಕ್ಷೇತ್ರದಲ್ಲಿ ವೋಲ್ವೋ ಕಂಪನಿಗಳು ಹೆಚ್ಚಿನ ಬಂಡವಾಳ ಹೂಡಲು ಮುಂದೆ ಬಂದಿವೆ. ಇವುಗಳ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಎಲ್ಲ ಬಗೆಹ ಸಹಕಾರ ಕೊಡುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಈ ಹೂಡಿಕೆಗಳ ಸಂಬಂಧವಾಗಿ ಎಚ್.ಸಿಎಲ್ ಕಂಪನಿಯ ಮುಖ್ಯಸ್ಥ ಬಾಲಸುಬ್ರಮಣಿಯನ್, ಪೆಟ್ರೋನಾಸ್ ಕಂಪನಿಯ ಸಿಇಒ ಸುಶೀಲ್ ಪುರೋಹಿತ್, ಸಿಸ್ಕೋದ ಪ್ರಧಾನ ವ್ಯವಸ್ಥಾಪಕ ಜೀತು ಪಟೇಲ್ ಮುಂತಾದವರ ಜತೆ ವಿಸ್ತೃತ ಚರ್ಚೆ ನಡೆಸಲಾಗಿದೆ.
ದಾವೋಸ್ ಶೃಂಗಸಭೆಗೆ ಸಚಿವರ ಜೊತೆಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಐಟಿಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಮಹೇಶ್ ಇರುವ ನಿಯೋಗವು ಪಾಲ್ಗೊಂಡಿದೆ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications