ಚಲನಚಿತ್ರ, ಟಿವಿ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಇನ್ಮುಂದೆ ನಟಿಸುವಂತಿಲ್ಲ!
ಬೆಂಗಳೂರು, ಅ. 30: ಸರ್ಕಾರಿ ನೌಕರರು ಚಲನಚಿತ್ರಗಳು ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಸುವುದನ್ನು ನಿಷೇಧಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಳೆದ ಅಕ್ಟೋಬರ್ 27 ರಂದು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2020ರ ಕರಡು ಪ್ರತಿಯನ್ನು ಪ್ರಕಟಿಸಿದೆ. ಈ ಕರಡು ಪ್ರತಿಯಲ್ಲಿ ಸರ್ಕಾರಿ ನೌಕರರು ಯಾವುದನ್ನು ಮಾಡಬೇಕು? ಯಾವುದನ್ನು ಮಾಡಬಾರದು ಎಂಬುದರ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟ ಮಾಡಿದ್ದು, ಸಾರ್ವಜನಿಕರು ತಮ್ಮ ಅಭಿಪ್ರಾಯ ತಿಳಿಸುವಂತೆ ಮನವಿ ಮಾಡಿದೆ.
ಕರಡು ಗೆಜೆಟ್ ಅಧಿಸೂಚನೆಯಲ್ಲಿ ಜನರು ತಮ್ಮ ಸಲಹೆಗಳನ್ನು ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಸರ್ಕಾರ 15 ದಿನಗಳ ಕಾಲಾವಕಾಶ ನೀಡಿದೆ. ಸರ್ಕಾರಿ ನೌಕರರು ಪತ್ರಿಕೆ, ರೇಡಿಯೋ, ದೂರದರ್ಶನ ಅಥವಾ ಯಾವುದೇ ರೀತಿಯ ಪ್ರದರ್ಶನ ಕಲೆಗಳು, ಸಮೂಹ ಮಾಧ್ಯಮಗಳ ಚರ್ಚೆಯಲ್ಲಿ ಭಾಗವಹಿಸುವುದು ಅಥವಾ ಪುಸ್ತಕಗಳನ್ನು ಬರೆಯುವುದು, ಲೇಖನಗಳು ಪ್ರಕಟಿಸುವುದು ಸೆರಿದಂತೆ ಹಲವು ನಿಯಮಗಳನ್ನು ಹೊರಡಿಸಿದೆ. ಸಾರ್ವಜನಿಕರ ಅಭಿಪ್ರಾಯ ಪಡೆದ ಬಳಿಕ ನಿಯಮಾವಳಿಗಳನ್ನು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಂತಿಗೊಳಿಸಲಿದೆ.
ಸರ್ಕಾರಿ ನೌಕರರು ಪೂರ್ವಾನುಮತಿ ಪಡೆಯದೇ ಯಾವುದೇ ಪತ್ರಿಕೆ ಅಥವಾ ನಿಯತಕಾಲಿಕದಲ್ಲಿ ಬರೆಯುವುದು, ಲೇಖನ ಪ್ರಕಟಿಸುವುದಕ್ಕೆ ನಿಯಂತ್ರಣ ಹೇರುತ್ತದೆ. ಜೊತೆಗೆ ಯಾವುದೇ ಸರ್ಕಾರಿ ನೌಕರರು ಅನುಮತಿ ಪಡೆಯದೇ ಚಲನಚಿತ್ರಗಳು ಮತ್ತು ಟೆಲಿವಿಷನ್ ಧಾರಾವಾಹಿಗಳಲ್ಲಿ ಕಾರ್ಯನಿರ್ವಹಿಸುವಂತಿಲ್ಲ. ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಯೊಂದಿಗೆ ತಮ್ಮನ್ನು ತೊಡಗಿಸಿಕೊಳ್ಳಬಾರದು ಎಂಬುದು ಕರಡು ನಿಯಮದಲ್ಲಿದೆ.

ಸರ್ಕಾರಿ ನೌಕರರರು ರೇಡಿಯೋ, ಟೆಲಿವಿಷನ್ ಸೇರಿದಂತೆ ಪ್ರಾಯೋಜಿತ ಮಾಧ್ಯಮ ಕಾರ್ಯಕ್ರಮದಲ್ಲಿ ಅಥವಾ ಸರ್ಕಾರದ ಮಾಧ್ಯಮದ ಕಾರ್ಯಕ್ರಮದಲ್ಲಿಯೂ ಭಾಗವಹಿಸುವಂತಿಲ್ಲ. ಕರಡು ನಿಯಮ ಕಾಯ್ದೆಯಾಗಿ ಜಾರಿಯಾದ ಬಳಿಕ ಸರ್ಕಾರಿ ನೌಕರರು ಯಾವುದೇ ಪುಸ್ತಕವನ್ನು ಪ್ರಕಟಿಸುವುದು ಅಥವಾ ಯಾವುದೇ ರೀತಿಯ ಸಾಹಿತ್ಯಿಕ ಅಥವಾ ಕಲಾತ್ಮಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದನ್ನು ನಿಯಮಾವಳಿ ನಿಷೇಧಿಸಿದೆ.
Recommended Video
ಆದಾಗ್ಯೂ, ಸಾಹಿತ್ಯ, ನಾಟಕ, ಪ್ರಬಂಧಗಳು, ಕವನ, ಸಣ್ಣ ಕಥೆಗಳು, ಕಾದಂಬರಿಗಳು ಅಥವಾ ಕಾದಂಬರಿಗಳ ಪುಸ್ತಕಗಳನ್ನು ಪ್ರಕಟಿಸಲು ಸರ್ಕಾರಿ ನೌಕರನಿಗೆ ಅವಕಾಶವಿದೆ. ಆದರೆ ಅಂತಹ ಸಾಹಿತ್ಯ ಕೃತಿಗಳನ್ನು ಪ್ರಕಟಿಸುವಾಗ ಆ ಅಧಿಕಾರಿ ತನ್ನ ಸಮಯ ಮತ್ತು ತಾನು ಹೊಂದಿರುವ ಹುದ್ದೆಯ ಪ್ರಭಾವವನ್ನು ತನ್ನ ಪುಸ್ತಕಗಳ ಮಾರಾಟದ ಪ್ರಚಾರದ ಮೇಲೆ ಪ್ರಭಾವ ಬೀರಲು ಬಳಸಬಾರದು ಎಂಬುದನ್ನು ಉಲ್ಲೇಖಿಸಲಾಗಿದೆ. ಜೊತೆಗೆ ಅಂತಹ ಪ್ರಕಟಣೆಯಲ್ಲಿ ಯಾವುದೇ ಆಕ್ಷೇಪಾರ್ಹ ವಿಷಯ ಮತ್ತು ನೀತಿಗಳನ್ನು ಟೀಕಿಸುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications