PSI recruitment: ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಕರ್ನಾಟಕ ಸರ್ಕಾರ ಸಿದ್ದತೆ- ಮಾಹಿತಿ, ವಿವರ
ಬೆಂಗಳೂರು, ಅಕ್ಟೋಬರ್ 01: ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಹೊಸದಾಗಿ ಪರೀಕ್ಷೆ ನಡೆಸಲು ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅನುಮತಿ ಕೋರಿ ಸರ್ಕಾರ ತನ್ನ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಅವರು ಖಚಿತಪಡಿಸಿದ್ದಾರೆ. ಆದರೆ, ಸದ್ಯಕ್ಕೆ ನ್ಯಾಯಾಲಯದ ತೀರ್ಪು ಬಾಕಿ ಇದೆ ಎಂದು ಅವರು ತಿಳಿಸಿದ್ದಾರೆ.

'ನಾವು ಸರ್ಕಾರ ಮೂಲಕ ನಮ್ಮ ನಿಲುವನ್ನು ನ್ಯಾಯಾಲಯಕ್ಕೆ ತಿಳಿಸಿದ್ದೇವೆ. ಪರೀಕ್ಷೆಯನ್ನು (ಮತ್ತೆ) ನಡೆಸಲು ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಮಗೆ ಅನುಮತಿ ನೀಡುವಂತೆ ನಾವು ಕೇಳಿಕೊಂಡಿದ್ದೇವೆ. ನ್ಯಾಯಾಲಯದ ಕಡೆಯಿಂದ ತೀರ್ಪು ಹೊರಬರಬೇಕಿದೆ. ಇದಕ್ಕಾಗಿ ನಾವು ಕಾಯುತ್ತಲೇ ಇದ್ದೇವೆ. ಆದೇಶ ಬಂದ ದಿನವೇ ಪ್ರಕ್ರಿಯೆ ಆರಂಭಿಸುತ್ತೇವೆ' ಎಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪರಮೇಶ್ವರ ತಿಳಿಸಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಆಯ್ಕೆಯಲ್ಲಿ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿತ್ತು. ಪಿಎಸ್ಐ ನೇಮಕಾತಿ ಹಗರಣವು ರಾಜ್ಯದಲ್ಲಿ ರಾಜಕೀಯ ಗದ್ದಲವನ್ನು ಹುಟ್ಟುಹಾಕಿತ್ತು.
ಕಳೆದ ವರ್ಷ ಜುಲೈನಲ್ಲಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪಾಲ್, ಪೊಲೀಸ್ ಉಪ ಅಧೀಕ್ಷಕರು (ಡಿಎಸ್ಪಿ), ಇನ್ಸ್ಪೆಕ್ಟರ್ಗಳು, ವಿವಿಧ ಪೊಲೀಸ್ ಸಿಬ್ಬಂದಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಒಟ್ಟು 65 ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಕಾಂಗ್ರೆಸ್ ಶಾಸಕರ ಗನ್ಮ್ಯಾನ್ನನ್ನು ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.
ಹಗರಣದ ರೂವಾರಿ ಎನ್ನಲಾದ ಮತ್ತೊಬ್ಬ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ಗೆ ಹೈಕೋರ್ಟ್ ಆದೇಶದ ಮೇರೆಗೆ ಜಾಮೀನು ಮಂಜೂರಾಗಿದ್ದು, ಡಿ.18ರಂದು ಬಿಡುಗಡೆಯಾಗಿದ್ದಾರೆ.
ಈಗ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸರ್ಕಾರವು ಈ ಹುದ್ದೆಗಳಿಗೆ ನೇಮಕಾತಿಯನ್ನು ಸ್ಥಗಿತಗೊಳಿಸಿದ್ದರಿಂದ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಿಗಳ ಕೊರತೆ ಉಂಟಾಗಿದೆ.
'ನೇಮಕಾತಿ ಸ್ಥಗಿತಗೊಂಡಿದ್ದರಿಂದ ಕೊರತೆಯ ಪರಿಣಾಮ ಇಲಾಖೆಯಲ್ಲಿ ಕಂಡುಬರುತ್ತಿದೆ. ನೇಮಕಾತಿ ಇನ್ನೂ ವಿಳಂಬವಾದರೆ, ಅದು ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗಬಹುದು. ನಾವು ಇದನ್ನು ಸರ್ಕಾರಕ್ಕೆ ತಿಳಿಸಿದ್ದೇವೆ' ಎಂದು ಹೆಸರು ಹೇಳಲಿಚ್ಛಿಸದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಕಾಂಕ್ಷಿ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಈ ವಿಷಯವನ್ನು ಸಕ್ರಿಯವಾಗಿ ತೆರೆದಿಟ್ಟಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯ ಹಗರಣಕ್ಕೆ ಎರಡ್ಮೂರು ವಾರಗಳಲ್ಲಿ ಪರಿಹಾರ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತನಿಖೆಯ ವೇಳೆ ಕಲಬುರಗಿಯಲ್ಲಿ ಎರಡು ಪ್ರತ್ಯೇಕ ಗ್ಯಾಂಗ್ಗಳು ಕಾರ್ಯಾಚರಣೆ ನಡೆಸುತ್ತಿರುವುದು ಪೊಲೀಸರಿಗೆ ಬೆಳಕಿಗೆ ಬಂದಿದೆ. ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಮೊದಲ ತಂಡವು ಇನ್ವಿಜಿಲೇಟರ್ಗಳ ನೆರವಿನೊಂದಿಗೆ ಉತ್ತರ ಪತ್ರಿಕೆ ತಿದ್ದುವ ದಂಧೆಯಲ್ಲಿ ತೊಡಗಿತ್ತು. ರುದ್ರಗೌಡ ಪಾಟೀಲ ನೇತೃತ್ವದ ಎರಡನೇ ಗ್ಯಾಂಗ್ ಸಂಪರ್ಕಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸುತ್ತಿತ್ತು ಎಂದು ತಿಳಿದುಬಂದಿದೆ.
ಈ ಬ್ಲೂಟೂತ್ ಸಾಧನಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ಸಾಮಾನ್ಯ ಆಡಿಯೊ ಸಾಧನಗಳಿಗಿಂತ ಭಿನ್ನವಾಗಿವೆ. ನಕಲು ಉದ್ದೇಶಕ್ಕಾಗಿ ವಿಶೇಷವಾಗಿ ತಯಾರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಸಾಧನಗಳು ಸಿಮ್ ಕಾರ್ಡ್ನೊಂದಿಗೆ ಟ್ರಾನ್ಸ್ಮಿಟರ್ ಅನ್ನು ಒಳಗೊಂಡಿವೆ. ಅದನ್ನು ಅಭ್ಯರ್ಥಿಗಳ ಶರ್ಟ್ಗಳಲ್ಲಿ ಮರೆಮಾಡಲಾಗಿತ್ತು ಎಂದು ತಿಳಿದುಬಂದಿದೆ.
ಹಗರಣದಲ್ಲಿ ಭಾಗಿಯಾಗಿರುವ 52 ಅಭ್ಯರ್ಥಿಗಳನ್ನು ಸಿಐಡಿ ಗುರುತಿಸಿದೆ. ಸರ್ಕಾರವು ಅವರನ್ನು ಪಿಎಸ್ಐ ಪರೀಕ್ಷೆಗಳಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಿದೆ. ಇಲ್ಲಿಯವರೆಗೆ, ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 110 ವ್ಯಕ್ತಿಗಳನ್ನು ಬಂಧಿಸಲಾಗಿದೆ.
-
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications