ಕಲಬುರಗಿಯಲ್ಲಿ ಉರ್ದು ವಿವಿ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ
ಬೆಂಗಳೂರು, ಅಕ್ಟೋಬರ್ 26 : ಕಲಬುರಗಿಯಲ್ಲಿ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ನಿರ್ಧಾರದಿಂದ ಕರ್ನಾಟಕ ಸರ್ಕಾರ ಹಿಂದೆ ಸರಿದಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಪ್ರಸ್ತಾವನೆ ಸಿದ್ಧವಾಗಿತ್ತು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ಗೆ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯಲ್ಲಿ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.
ಈಗ ವಿಶ್ವವಿದ್ಯಾಲಯಗಳಲ್ಲಿರುವ ಉರ್ದು ಕೋರ್ಸ್ಗಳಿಗೆ ಹೆಚ್ಚಿನ ಬೇಡಿಕೆ ಇಲ್ಲ. ಆದ್ದರಿಂದ, ಪ್ರತ್ಯೇಕ ವಾದ ಉರ್ದು ವಿಶ್ವವಿದ್ಯಾಲವನ್ನು ಸ್ಥಾಪನೆ ಮಾಡುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಆದ್ದರಿಂದ, ಪ್ರಸ್ತಾವನೆ ಕೈ ಬಿಡಲಾಗಿದೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಹಿಂದಿನ ಸರ್ಕಾರ ಉರ್ದು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಪ್ರಸ್ತಾವನೆ ಮುಂದಿಟ್ಟಿತ್ತು. ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಈ ಪ್ರಸ್ತಾವನೆ ಕೈ ಬಿಡಲಾಗಿದೆ' ಎಂದರು.
ವಿಶ್ವವಿದ್ಯಾಲಯಗಳಲ್ಲಿ ಈಗಿರುವ ಉರ್ದು ಕೋರ್ಸ್ಗಳಿಗೆ ವರ್ಷದಿಂದ ವರ್ಷಕ್ಕೆ ಪ್ರವೇಶಾತಿ ಕಡಿಮೆಯಾಗುತ್ತಿದೆ. ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡಲು ಬದಲು ಈಗಿರುವ ಕೋರ್ಸ್ಗಳ ಪ್ರವೇಶಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಸೂಚನೆ ನೀಡಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉರ್ದು ವಿಶ್ವವಿದ್ಯಾಲಯವನ್ನು ಕಲಬುರಗಿಯಲ್ಲಿ ಸ್ಥಾಪನೆ ಮಾಡುವ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿತ್ತು. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಸಮಯದಾಯದ ಜನರು ಹೆಚ್ಚಾಗಿ ಇರುವುದಿಂದ ಅಲ್ಲಿ ವಿವಿ ಸ್ಥಾಪಿಸಲು ಯೋಚಿಸಲಾಗಿತ್ತು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ









Click it and Unblock the Notifications