Water Bell : ಶಾಲೆಗಳಲ್ಲಿ ಮಕ್ಕಳಿಗೆ ನಿಯಮಿತ ನೀರು ಸೇವನೆಗಾಗಿ 3 ಬಾರಿ ಗಂಟೆ ಮೊಳಗಲಿದೆ
ಬೆಂಗಳೂರು, ನವೆಂಬರ್ 11: ಮಕ್ಕಳಲ್ಲಿ ನೀರಿನ ಅಂಶದ ಕೊರತೆ ದೂರ ಮಾಡಲು ಹಾಗೂ ನಿಯಮಿತವಾಗಿ ವಿದ್ಯಾರ್ಥಿಗಳಿಗೆ ನೀರು ಕುಡಿಯುವಂತೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶಾಲೆಗಳಲ್ಲಿ ದಿನಕ್ಕೆ ಮೂರು ಬಾರಿ ನೀರಿನ ಗಂಟೆ ಬಾರಿಸಲು ಸೂಚಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯಾದ್ಯಂತ ಎಲ್ಲಾ ಮಂಡಳಿಗಳಿಗೆ ಸಂಯೋಜಿತವಾದ ಶಾಲೆಗಳಲ್ಲಿ ಈ ಹೊಸ ವ್ಯವಸ್ಥೆ ತರಲು ತೀರ್ಮಾನಿಸಿದೆ. ಈ ಪ್ರಯುಕ್ತ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಮಕ್ಕಳು ಶಾಲೆಗಳಲ್ಲಿ ಪಾಠ ಕೇಳುವಾಗಿ ಆಗಾಗ ಎದ್ದು ಹೋಗಿ ನೀರು ಕುಡಿಯುವುದು ತೀರಾ ಕಡಿಮೆ. ಆಟಕ್ಕೆ ಬಿಟ್ಟಾಗ, ಊಟದ ಸಮಯದಲ್ಲಿ ನೀರು ಕುಡಿಯುತ್ತಾರೆ. ವಿದ್ಯಾರ್ಥಿಗಳ ದೇಹದಲ್ಲಿ ನೀರಿನ ಕೊರತೆಯಿಂದ ನಿರ್ಜಲೀಕರಣ, ಹೊಟ್ಟೆ ನೋವು, ಒಣ ಗಂಟಲು ಮತ್ತು ತಲೆನೋವಿನಂಥ ಅನಾರೋಗ್ಯ ಸಮಸ್ಯೆಗಳು ಕಂಡು ಬರುತ್ತವೆ. ಈ ಸಮಸ್ಯೆ ಮಕ್ಕಳಿಗೆ ಬರದಂತೆ ತಡೆಯಲು ಈ ಹೊಸ ವ್ಯವಸ್ಥೆ ತರಲು ಸರ್ಕಾರ ಸಜ್ಜಾಗಿದೆ. ಈ ಹೊಸ ವ್ಯವಸ್ಥೆಯಡಿ 'ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ದಿನಕ್ಕೆ ಮೂರು ಬಾರಿ ನೀರಿನ ಗಂಟೆ ಬಾರಿಸಲಿದೆ.

ನೆರೆಯ ಕೇರಳ ರಾಜ್ಯದ ಮಾದರಿಯಲ್ಲಿ ಕರ್ನಾಟಕದಲ್ಲಿ ಈ ವ್ಯವಸ್ಥೆ ಜಾರಿಗೆ ತರಲು ಅಂದಿನ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಅವರ ಸಲಹೆಯನ್ನು ಅನುಸರಿಸಿ, 2019ರಲ್ಲಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರಿಚಯಿಸಿದ್ದರು. ಆದರೆ ಕೋವಿಡ್ ಹಿನ್ನೆಲೆ ಈ ಪರಿಕಲ್ಪನೆ ಅನುಷ್ಠಾನ ಸಾಧ್ಯವಾಗಲಿಲ್ಲ ಎಂದು ಹೇಳಲಾಗುತ್ತಿದೆ.
ಮೂರು ಗಂಟೆಯ ಸಮಯ ಏನು?
ಶಾಲೆಗಳಲ್ಲಿ ಬೆಳಗ್ಗೆ 10.35ಕ್ಕೆ ಮೊದಲ ಗಂಟೆ, ಎರಡನೆಯದ್ದು ಮಧ್ಯಾಹ್ನ 12ಕ್ಕೆ ಮತ್ತು ಮಧ್ಯಾಹ್ನ 2 ಗಂಟೆಗೆ ಮೂರನೇ ಗಂಟೆಗೆ ಬಾರಿಸಲು ವೇಳಾಪಟ್ಟಿ ಮಾಡಿಕೊಳ್ಳಲಾಗಿದೆ. ಸಚಿವ ಬಿ.ಸಿ.ನಾಗೇಶ್ ರಾಜ್ಯದ ಕೆಲ ಶಾಲೆಗಳಿಗೆ ಭೇಟಿ ನೀಡಿದ್ದ ವೇಳೆ ಶಿಕ್ಷಕರು ಮಕ್ಕಳಿಗೆ ನೀರು ಕುಡಿಯಲು ಬಿಡುತ್ತಿಲ್ಲ ಎಂದು ಪೋಷಕರು ಸಚಿವರಿಗೆ ತಿಳಿಸಿದ್ದರು. ಮಕ್ಕಳಿಗೆ ನೀರಿನ ಬಾಟಲಿಯಲ್ಲಿ ನೀರು ತುಂಬಿ ಕಳುಹಿಸಿದರೂ ಮರಳಿ ಮನೆಗೆ ಬಂದಾಗ ಅಷ್ಟೇ ಪ್ರಮಾಣ ನೀರು ಉಳಿದಿರುತ್ತವೆ ಎಂದು ಕೆಲವು ಪೋಷಕರು ಹೇಳಿದ್ದರು.

ಶಾಲೆಯಲ್ಲಿ ಶಿಕ್ಷಕರು ನೀರು ಕುಡಿಯಲು ಬಿಡದಿರುವುದು, ಶಿಸ್ತು, ಇನ್ನಿತರ ಕಾರಣದಿಂದಾಗಿ ಮಕ್ಕಳ ದೇಹದಲ್ಲಿ ನೀರಿನ ಕೊರತೆ ಕಂಡು ಬರುತ್ತಿದೆ. ಅಲ್ಲದೇ ಬೇಸಿಗೆ ವೇಳೆ ಮಕ್ಕಳು ಆಟವಾಡಿ ಹೆಚ್ಚು ದಣಿಯುತ್ತಾರೆ. ಆಗ ಅವರಿಗೆ ಹೆಚ್ಚು ನೀರಿನ ಅಗತ್ಯವಿರುತ್ತದೆ. ಆದರೆ ನಿಯಮಿತವಾಗಿ ನೀರು ಕುಡಿಯುವಲ್ಲಿ ಗಮನ ಹರಿಸುವುದಿಲ್ಲ. ಇದು ಹೀಗೆ ಮುಂದುವರಿದರೆ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಹೊಸ ವ್ಯವಸ್ಥೆ ತರಲು ಶಿಕ್ಷಣ ಇಲಾಖೆ ಮುಂದಾಗಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications