ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಹೆಸರು ಅಂತಿಮ
ಬೆಂಗಳೂರು, ಫೆಬ್ರವರಿ 20 : ವೈ.ಭಾಸ್ಕರರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರನ್ನು ನೇಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಈ ಕುರಿತು ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಮಾಡಲಿದೆ.
ನೂತನ ಲೋಕಾಯುಕ್ತರ ಆಯ್ಕೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಂಜೆ ಸಭೆ ನಡೆಯಿತು. ಸಿದ್ದರಾಮಯ್ಯ ಅವರು ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಸಭೆಯಲ್ಲಿ ಸೂಚಿಸಿದರು. [ನಾಯಕ್ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು]

ಸಭೆಗೆ ಗೈರು ಹಾಜರಾಗಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಪತ್ರದ ಮೂಲಕ ಎಸ್.ಆರ್.ನಾಯಕ್ ಅವರ ಹೆಸರನ್ನು ಸೂಚಿಸಿದ್ದರು. ಸಿದ್ದರಾಮಯ್ಯ ಮತ್ತು ಕಾಗೋಡು ತಿಮ್ಮಪ್ಪ ಹೊರತುಪಡಿಸಿ ಉಳಿದ ಸದಸ್ಯರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರ ಹೆಸರನ್ನು ಸೂಚಿಸಿದರು ಎಂದು ತಿಳಿದುಬಂದಿದೆ. [ಲೋಕಾಯುಕ್ತ ಹುದ್ದೆ ಬೇಡವೆಂದ ವಿಕ್ರಂಜಿತ್ ಸೇನ್]
ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ವಿಕ್ರಂಜಿತ್ ಸೇನ್ ಹೆಸರನ್ನು ಶಿಫಾರಸು ಮಾಡಿದರು. ಸಭೆಗೆ ಗೈರು ಹಾಜರಾಗಿದ್ದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರು ವಿಕ್ರಂಜಿತ್ ಸೇನ್ ಹೆಸರು ಸೂಚಿಸಿ ಪತ್ರ ಬರೆದಿದ್ದರು.[ಕರ್ನಾಟಕ ಲೋಕಾಯುಕ್ತ ಹಗರಣದ Timeline]
ಯಾರ ಹೆಸರು ಶಿಫಾರಸು? : ಸಮಿತಿಯ ನಾಲ್ವರು ಸದಸ್ಯರು ವಿಕ್ರಂಜಿತ್ ಸೇನ್ ಅವರ ಹೆಸರು ಸೂಚಿಸಿರುವುದರಿಂದ ಅವರ ಹೆಸರನ್ನೇ ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು ಎಂದು ಜಗದೀಶ್ ಶೆಟ್ಟರ್ ಸಭೆಯಲ್ಲಿ ತಿಳಿಸಿದರು. 'ವಿಕ್ರಂಜಿತ್ ಸೇನ್ ಅವರ ಬಗ್ಗೆ ನನಗೂ ಅಪಾರವಾದ ಗೌರವವಿದೆ. ಆದರೆ, ನಾಯಕ್ ಅವರು ಕನ್ನಡಿಗರು. ನಮ್ಮವರೇ ಅರ್ಹರು ಇದ್ದಾಗ ಬೇರೆಯವರನ್ನು ಏಕೆ ನೇಮಕ ಮಾಡಬೇಕು?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು ಎಂದು ತಿಳಿದುಬಂದಿದೆ.
ಮುಂದೇನು ? : ರಾಜ್ಯ ಸರ್ಕಾರ ಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ಶಿಫಾರಸು ಮಾಡಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಲಿದೆ. ರಾಜ್ಯಪಾಲರು ಶಿಫಾರಸು ಒಪ್ಪಬಹುದು ಅಥವ ಆಕ್ಷೇಪಣೆ ವ್ಯಕ್ತಪಡಿಸಬಹುದು. ಆಯ್ಕೆ ಸಮಿತಿಯಲ್ಲಿ ಪ್ರತಿಪಕ್ಷಗಳ ಸದಸ್ಯರು ಇರುವುದರಿಂದ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಕಡಿಮೆ ಇದೆ.
ಒಂದು ವೇಳೆ ಪ್ರತಿಪಕ್ಷಗಳು ಸರ್ಕಾರದ ಶಿಫಾರಸನ್ನು ಪರಿಗಣಿಸದಂತೆ ದೂರು ಕೊಟ್ಟರೆ ರಾಜ್ಯಪಾಲರು ಸರ್ಕಾರದಿಂದ ಸ್ಪಷ್ಟನೆ ಕೇಳಬಹುದು. ಹೆಸರನ್ನು ತಿರಸ್ಕಾರ ಮಾಡಿ ಹೊಸ ಹೆಸರನ್ನು ಶಿಫಾರಸು ಮಾಡುವಂತೆ ಸರ್ಕಾರಕ್ಕೆ ಸೂಚನೆಗಳನ್ನು ನೀಡಬಹುದಾಗಿದೆ.
ಎಸ್.ಆರ್.ನಾಯಕ್ ಯಾರು ?: ಎಸ್.ಆರ್.ನಾಯಕ್ ಅವರು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾಗಿದ್ದು, ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications