ಸುಧಾಕರ್ಗೆ ಸಂಕಷ್ಟ: ಚಾಮರಾಜನಗರ ಆಸ್ಪತ್ರೆ ದುರಂತದ ಬಗ್ಗೆ ಹೊಸದಾಗಿ ತನಿಖೆಗೆ ದಿನೇಶ್ ಗುಂಡೂರಾವ್ ಸೂಚನೆ
ಬೆಂಗಳೂರು,ಮೇ 31: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯ ಬೆನ್ನಲೇ ಬಿಜೆಪಿ ನಾಯಕರನ್ನ ನಿದ್ದೆಗೆಡಿಸುವಂತೆ ಮಾಡಿದೆ. ಈ ಹಿಂದೆ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿಯ ಹಗರಣಗಳು ಹಾಗೂ ಭ್ರಷ್ಟಚಾರಗಳ ವಿರುದ್ದ ಕಾಂಗ್ರೆಸ್ ಸರ್ಕಾರ ತನಿಖೆಯ ಅಸ್ತ್ರವನ್ನ ಪ್ರಯೋಗಿಸಿದೆ.
ಈಗಾಗಲೇ ಹಲವು ಹಗರಣಗಳ ವಿರುದ್ದ ತನಿಖೆಗೆ ಚಿಂತನೆ ನಡೆಸಿದ್ದ ಸರ್ಕಾರ, ಇದೀಗ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿರುವ ವಿವಿಧ ಹಗರಣಗಳ ಆರೋಪಗಳ ಬಗ್ಗೆ ಹೊಸದಾಗಿ ತನಿಖೆ ಪ್ರಾರಂಭಿಸಲು ಮುಂದಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 36 ರೋಗಿಗಳು ಮೃತಪಟ್ಟಿದ್ದಕ್ಕೆ ಸಂಬಂಧಿಸಿದ ಆರೋಪ ಮತ್ತು ಇತರ ಹಗರಣಗಳ ಬಗ್ಗೆ ತನಿಖೆ ನಡೆಸುವಂತೆ ಇಲಾಖೆಯ ಅಧಿಕಾರಿಗಳಿಗೆ ಕಾಂಗ್ರೆಸ್ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸೂಚಿಸಿದರು.
ಇನ್ನೂ ಈ ದುರಂತ ಸಂಭವಿಸಿದ್ದ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಆರೋಗ್ಯ ಸಚಿವರಾಗಿ ಡಾ. ಕೆ ಸುಧಾಕರ್ ಆರೋಗ್ಯ ಸಚಿವರಾಗಿದ್ದರು. ಘಟನೆ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕೋವಿಡ್ ನಿರ್ವಹಣಾ ಸಮಿತಿಯು ಹೈಕೋರ್ಟ್ಗೆ ಈಗಾಗಲೇ ವರದಿ ಸಲ್ಲಿಸಿದ್ದು, ಮೇ 2-3, 2021 ರ ರಾತ್ರಿ 36 ಒಳರೋಗಿಗಳ ಸಾವಿಗೆ ಆಮ್ಲಜನಕದ ಲಭ್ಯತೆ ಕೊರತೆಯೇ ಕಾರಣ ಎಂದು ಉಲ್ಲೇಖಿಸಿದೆ.
ಚಾಮರಾಜನಗರದ ಸರ್ಕಾರಿ ಆಸ್ಪತ್ರೆ ದುರಂತದ ಕುರಿತು ವಿಧಾನಸೌಧದಲ್ಲಿ ತಮ್ಮ ಇಲಾಖೆಯ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚವ ದಿನೇಶ್ ಗುಂಡೂರಾವ್, ಸಾವಿಗೆ ಯಾರು ಹೊಣೆ ಮತ್ತು ತಪ್ಪಿತಸ್ಥರು ಯಾರು ಎಂಬುದರ ಪತ್ತೆಗೆ ಯಾವುದೇ ತನಿಖೆ ನಡೆದಿಲ್ಲ. ಹೀಗಾಗಿ ತಕ್ಷಣ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications