Get Updates
Get notified of breaking news, exclusive insights, and must-see stories!

ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಸಾವು: ಪ್ರಕರಣದ ಮರು ತನಿಖೆಗೆ ಸಿದ್ದವಾಯ್ತು ಸಿದ್ದು ಸರ್ಕಾರ

ಚಾಮರಾಜನಗರ, ಜೂನ್‌ 09: ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 2021ರ ಮೇ 2 ಮತ್ತು 3ರಂದು ರಾತ್ರಿ ಆಮ್ಲಜನಕ ಕೊರತೆಯಿಂದ 24 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದ ಕುರಿತು ಕಾಂಗ್ರೆಸ್ ನೇತೃತ್ವದ ಸರ್ಕಾರ ಮರು ತನಿಖೆ ನಡೆಸಲಿದೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್‌ ಗುಂಡೂರಾವ್, ಹಿಂದಿನ ಸರ್ಕಾರ ಸಮಿತಿ ರಚಿಸಿದ್ದರೂ ಇನ್ನೂ ತನಿಖೆ ಪೂರ್ಣಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Karnataka govt to re-investigate Incident of 24 deaths due to oxygen shortage in Chamarajanagara

'ಹಿಂದಿನ ಸರ್ಕಾರವು ತನಿಖೆಗಾಗಿ ಕೆಲವರನ್ನು ನೇಮಿಸಿತ್ತು. ಆದರೆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೊಸ ಸರ್ಕಾರ ಬಂದಿದ್ದು, ಮರು ತನಿಖೆಗೆ ನಿರ್ಧರಿಸಿದ್ದೇವೆ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ' ಎಂದು ಸಚಿವರು ತಿಳಿಸಿದರು.

2021 ರ ಮೇ 2 ಮತ್ತು 3 ರ ಮಧ್ಯರಾತ್ರಿಯಲ್ಲಿ, ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ 24 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. 24 ರೋಗಿಗಳಲ್ಲಿ, 23 ಜನರು ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿತ್ತು.

ನ್ಯಾಯಮೂರ್ತಿ ಎ.ಎಸ್.ವೇಣುಗೋಪಾಲಗೌಡ (ನಿವೃತ್ತ) ನೇತೃತ್ವದ ಸಮಿತಿ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ನಾಲ್ಕು ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿದೆ ಎಂದು ದೃಢವಾಗಿತ್ತು.

ಆಕ್ಸಿಜನ್ ಸಿಲಿಂಡರ್‌ಗಳು ಮುಂಜಾನೆ 2 ಗಂಟೆಗೆ ಆಸ್ಪತ್ರೆಗೆ ತಲುಪಬೇಕಿತ್ತು. ಆದರೆ ಹೆಚ್ಚುವರಿ 30 ಸಿಲಿಂಡರ್‌ಗಳನ್ನು ಪಡೆಯಲು ಟ್ರಕ್ ಮರುಪೂರಣ ಕೇಂದ್ರದಲ್ಲಿ ನಿಂತಿತ್ತು ಎಂದು ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

ಹಿಂದಿನ ಬಿಜೆಪಿ ಸರಕಾರ ಮಾಡಿರುವ ಹಲವಾರು ಕಾಮಗಾರಿಗಳ ಬಗ್ಗೆ ಈಗಿನ ಸರಕಾರ ತನಿಖೆ ನಡೆಸುತ್ತಿದೆ.

ಇದೇ ವೇಳೆ ಆರ್‌ಎಸ್‌ಎಸ್‌ಗೆ ಹಿಂದಿನ ಸರ್ಕಾರ ನೀಡಿದ್ದ ಭೂಮಿಯ ಬಗ್ಗೆಯೂ ದಿನೇಶ್‌ ಗುಂಡೂರಾವ್‌ ಮಾತನಾಡಿದರು.

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಅದರ ಅಂಗಸಂಸ್ಥೆಗಳಿಗೆ ನೀಡಿರುವ ನೂರಾರು ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಪರಿಶೀಲಿಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಆರ್‌ಎಸ್‌ಎಸ್, ಅದರ ಅಂಗಸಂಸ್ಥೆಗಳು ಮತ್ತು ಅದರ ನಿಕಟ ಸಂಸ್ಥೆಗಳ ಹೆಸರಿಗೆ ವರ್ಗಾಯಿಸಲಾಗಿದೆ. ತನ್ನ ಸಂಘಟನೆಯನ್ನು ಬೆಳೆಸಲು ಮತ್ತು ಅದು ನಂಬಿದ ಸಿದ್ಧಾಂತವನ್ನು ಹರಡಲು ಇದನ್ನು ಮಾಡಲಾಗಿದೆ. ನಾವು ನಮ್ಮ ಕೆಲಸದಲ್ಲಿ ಪಾರದರ್ಶಕವಾಗಿರಬೇಕು. ಅದರ ಬಗ್ಗೆ ಜನರು ತಿಳಿದುಕೊಳ್ಳಬೇಕು. ನಾವು ಮಕ್ಕಳ ಮನಸ್ಸಿಗೆ ವಿಷಕಾರಿ ಮಾಹಿತಿಯನ್ನು ನೀಡಿದರೆ, ಅದು ಅಪಾಯಕಾರಿಯಾಗುತ್ತದೆ. ಇದರ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+