ಉತ್ತರ ಕರ್ನಾಟಕಕ್ಕೆ ಸಿಹಿ ಸುದ್ದಿ ಕೊಟ್ಟ ಕರ್ನಾಟಕ ಸರ್ಕಾರ
ಬೆಂಗಳೂರು, ಫೆಬ್ರವರಿ 16 : ಉತ್ತರ ಕರ್ನಾಟಕ ಭಾಗದ ಹಲವಾರು ವರ್ಷಗಳ ಬೇಡಿಕೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಕೃಷ್ಣಭಾಗ್ಯ ಜಲ ನಿಗಮ ಸೇರಿದಂತೆ 10 ಕಚೇರಿಗಳನ್ನು ಸ್ಥಳಾಂತರ ಮಾಡಲು ಅಧಿಸೂಚನೆ ಹೊರಡಿಸಿದೆ.
ಪ್ರಾದೇಶಿಕವಾಗಿ ಹೊಂದಿಕೆಯಾಗುವ ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರ ಮಾಡಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಈಗ ಸರ್ಕಾರ ಈ ಕುರಿತು ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಕಚೇರಿಗಳ ಸ್ಥಳಾಂತರದ ಬಗ್ಗೆ ಚರ್ಚೆ ನಡೆದಿತ್ತು. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ, ಕಚೇರಿ ಮಾತ್ರ ಸ್ಥಳಾಂತರವಾಗಿರಲಿಲ್ಲ.

ಈಗ ಕರ್ನಾಟಕ ಸರ್ಕಾರ ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್ಎಲ್) ಸೇರಿದಂತೆ 10 ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ.
ಸ್ಥಳಾಂತರವಾಗುವ ಕಚೇರಿಗಳ ಪಟ್ಟಿ
* ಕೃಷ್ಣ ಭಾಗ್ಯ ಜಲ ನಿಗಮ : ಆಲಮಟ್ಟಿ
* ಕರ್ನಾಟಕ ನೀರಾವರಿ ನಿಗಮ : ದಾವಣಗೆರೆ
* ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ (ವಿದ್ಯುತ್ ಮಗ್ಗಗಳ ಅಭಿವೃದ್ಧಿ ನಿಗಮ) : ಬೆಳಗಾವಿ
* ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿ : ಬೆಳಗಾವಿ
* ಪುರಾತತ್ವ ಸಂಗ್ರಹಾಲಯಗಳ ನಿರ್ದೇಶಕರು, ಪರಂಪರೆ ಇಲಾಖೆ : ಹಂಪಿ
* ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಇದನ್ನು ವಿಭಾಗಿಸಲಾಗಿದ್ದು ಬೆಂಗಳೂರಲ್ಲೂ ಕಚೇರಿ ಇರಲಿದೆ : ಹುಬ್ಬಳ್ಳಿ
* ರಾಜ್ಯ ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿ : ಧಾರವಾಡ
* ರಾಜ್ಯ ಮಾಹಿತಿ ಆಯೋಗದ ಆಯುಕ್ತರಲ್ಲಿ ಒಬ್ಬರು : ಬೆಳಗಾವಿ
* ರಾಜ್ಯ ಮಾಹಿತಿ ಆಯೋಗದ ಆಯುಕ್ತರಲ್ಲಿ ಒಬ್ಬರು : ಕಲಬುರಗಿ
* ಲೋಕಾಯುಕ್ತ ಕಚೇರಿಯ ಒಬ್ಬರು ಉಪ ಲೋಕಾಯುಕ್ತರ ಕಚೇರಿ : ಧಾರವಾಡ
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications