ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಮಂಡ್ಯಕ್ಕೆ ಹೊಸ ಎಸ್ಪಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30; ಕರ್ನಾಟಕ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ, ಉತ್ತರ ಕನ್ನಡ, ಕಲಬುರಗಿ, ಗದಗಕ್ಕೆ ಹೊಸ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇಮಕವಾಗಿದೆ.

ಶನಿವಾರ ಕರ್ನಾಟಕ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಎಸ್‌ಪಿಯಾಗಿ ಯತೀಶ್ ಎನ್. ನೇಮಕ ಮಾಡಲಾಗಿದೆ. ಮಂಡ್ಯ ಎಸ್‌ಪಿ ನೇಮಕ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಐಪಿಎಸ್ ವರ್ಗಾವಣೆ; ಉತ್ತರಕನ್ನಡ, ಮಂಡ್ಯದ ಊಹಾಪೋಹಕ್ಕೆ ಬ್ರೇಕ್! ಐಪಿಎಸ್ ವರ್ಗಾವಣೆ; ಉತ್ತರಕನ್ನಡ, ಮಂಡ್ಯದ ಊಹಾಪೋಹಕ್ಕೆ ಬ್ರೇಕ್!

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎನ್. ಯತೀಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಡ್ಯ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು ಯಾಕೆ? ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರರಾವ್ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದು ಯಾಕೆ?

IPS

ವರ್ಗಾವಣೆಗೊಂಡ ಅಧಿಕಾರಿಗಳು

* ಬೆಂಗಳೂರಿನ ಕಮಾಂಡ್ ಸೆಂಟರ್ ಡೆಪ್ಯೂಟಿ ಕಮೀಷನರ್ ಆಗಿದ್ದ ಇಶಾ ಪಂತ್ ವರ್ಗಾವಣೆಗೊಂಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಕಲಬುರಗಿ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

* ಮಂಡ್ಯ ಎಸ್ಪಿಯಾಗಿದ್ದ ಡಾ. ಸುಮನ್ ಡಿ. ಪನ್ನೇಕರ್ ವರ್ಗಾವಣೆಗೊಂಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಕನ್ನಡ ಎಸ್ಪಿಯಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ.

* ಉತ್ತರ ಕನ್ನಡ ಎಸ್ಪಿಯಾಗಿದ್ದ ಶಿವ ಪ್ರಕಾಶ್ ದೇವರಾಜು ವರ್ಗಾವಣೆಗೊಂಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಗದಗ ಎಸ್ಪಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

* ಕಲಬುರಗಿ ಎಸ್ಪಿಯಾಗಿದ್ದ ಸಿಮಿ ಮರಿಯಮ್ ಜಾರ್ಜ್ ವರ್ಗಾಗೊಂಡಿದ್ದಾರೆ. ಮೈಸೂರಿನಲ್ಲಿ ಕರ್ನಾಟಕ ಪೊಲೀಸ್ ಅಕಾಡಮೆ ನಿರ್ದೇಶಕರಾಗಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

* ಗದಗ ಎಸ್ಪಿಯಾಗಿದ್ದ ಯತೀಶ್ ಎನ್. ವರ್ಗಾವಣೆಗೊಂಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ.

English summary
The Karnataka government transferred IPS officers on October 30. New superintendent of police appointed to Mandya district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X