Milk Price Hike: ಮೆಟ್ರೋ, ಬಸ್, ವಿದ್ಯುತ್ ಆಯ್ತು ಇದೀಗ 'ಹಾಲಿನ ದರ' ಏರಿಕೆ ಶಾಕ್: ₹5 ಹೆಚ್ಚಳ..?
ಬೆಂಗಳೂರು, ಮಾರ್ಚ್ 24: ಕರ್ನಾಟಕ ರಾಜ್ಯದಲ್ಲಿ ಸರ್ಕಾರ ಜನರಿಗೆ ಮೇಲಿಂದ ಮೇಲೆ ಶಾಕ್ ನೀಡುತ್ತಿದೆ. ಸಾರಿಗೆ ಬಸ್, ಮೆಟ್ರೋ, ವಿದ್ಯುತ್ ಬೆಲೆ ಹೆಚ್ಚಿಸಿದ್ದ ಸರ್ಕಾರ ಇದೀಗ ಪ್ರತಿ ಲೀಟರ್ ಹಾಲಿನ ಬೆಲೆ ಹೆಚ್ಚಳದ ಪ್ರಸ್ತಾವ ಸ್ವೀಕರಿಸಿದೆ. ಇಂದಿನ ಸಭೆಯಲ್ಲಿ ಮನವಿ ಪುರಸ್ಕಾರಗೊಂಡರೆ, ಹಾಲಿನ ದರ ಮತ್ತಷ್ಟು ದುಬಾರಿಯಾಗಲಿದೆ. ಉಚಿತ ಯೋಜನೆಗಳ ಮಧ್ಯೆ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ.
ಈ ಹಿಂದೆಯು ಹಾಲಿನ ದರ ಏರಿಕೆ ಮಾಡಿ ಅದಕ್ಕೆ ತಕ್ಕಂತೆ ಹೆಚ್ಚುವರಿ ಹಾಲನ್ನು ಸೇರಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು. ಇಂದು ಬೆಂಗಳೂರಿನಲ್ಲಿ ರಾಜ್ಯ ಹಾಲು ಉತ್ಪಾದಕರ ಮಂಡಳಿ, ಹಾಲು ಉತ್ಪಾದಕರ ಒಕ್ಕೂಟದ ಸದಸ್ಯರು ಜೊತೆಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ.

ಪ್ರತಿ ಲೀಟರ್ ಹಾಲಿನ ಬೆಲೆಯಲ್ಲಿ 5 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ವಿವಿಧ ಕಾರಣಗಳನ್ನು ನೀಡಿ ಹೆಚ್ಚಳಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ. ಸದ್ಯ ಹಾಲಿನ ದರ ಏರಿಕೆ ಮಾಡಿದರೆ ಜನರಿಗೆ ಆಗುವ ಹೊರೆ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಬಸ್, ಮೆಟ್ರೋ, ವಿದ್ಯುತ್ ದರ ಏರಿಕೆಗೆ ವ್ಯಕ್ತವಾದ ಆಕ್ರೋಶ ಇದೆಲ್ಲ ಪರಿಗಣಿಸಿ ಹಾಲಿನ ದರ ಏರಿಕೆ ಮಾಡಬೇಕೋ ಬೇಡವೋ ಎಂದು ಸರ್ಕಾರ ನಿರ್ಧರಿಸಲಿದೆ.
ಇಂದೇ ಹಾಲಿನ ದರ ಏರಿಕೆ ಅಧಿಕೃತ ಘೋಷಣೆ?
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಕೆಲವು ತಿಂಗಳುಗಳ ಹಿಂದಿನಿಂದಲೂ ರಾಜ್ಯ ಸರ್ಕಾರಕ್ಕೆ ನಂದಿನ ಹಾಲಿನ ದರ ಪ್ರತಿ ಲೀಟರ್ಗೆ ಐದು ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡುತ್ತಲೇ ಬಂದಿತ್ತು. ಆದರೆ ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳದ ಸರ್ಕಾರ. ಇದೀಗ ಹಾಲು ಉತ್ಪಾದಕರ ಮಂಡಳಿ ಸದಸ್ಯರ ಜೊತೆಗೆ ಮಹತ್ವದ ಸಭೆಗೆ ಮುಂದಾಗಿರುವುದು ದರ ಹೆಚ್ಚಳದ ಕುತೂಹಲಕ್ಕೆ ಕಾರಣವಾಗಿದೆ.
ಇಂದಿನ ಸಭೆ ಸೇರಿರುವುದು ನೋಡಿದರೆ, ರಾಜ್ಯ ಸರ್ಕಾರ ಹಾಲಿನ ದರ ಏರಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಇದರಿಂದ ಜನರಿಗೆ ಆರ್ಥಿಕ ಹೊರೆ ಆಗುವ ಸಾಧ್ಯತೆ ಇದೆ. ಜೊತೆಗೆ ಸರ್ಕಾರದ ಬೆಲೆ ಏರಿಕೆ ನಿರ್ಧಾರ, ಘೋಷಣೆ ವಿರುದ್ಧ ಜನರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಸಾರಿಗೆ ಬಸ್, ಮೆಟ್ರೋ, ವಿದ್ಯುತ್ ದರ ಏರಿಕೆ
ಜನವರಿಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ಬಸ್ ದರವನ್ನು ಶೇಕಡಾ 15ರಷ್ಟು ಹಚ್ಚಳ ಮಾಡಿತ್ತು. ಇದಾದ ಬಳಿಕ ಬೆಂಗಳೂರು ನಮ್ಮ ಮೆಟ್ರೋ ಗರಿಷ್ಠ ದರ 60ರಿಂದ 100 ರೂಪಾಯಿವರೆಗೆ ಹೆಚ್ಚಿಸಿ ಜನರಿಗೆ ಬರೆ ನೀಡಿತು. ಮೊನ್ನೆಯಷ್ಟೇ ಪ್ರತಿ ಯೂನಿಟ್ ವಿದ್ಯುತ್ ದರದ ಮೇಲೆ ರೂ.36 ಪೈಸೆ ಹೆಚ್ಚಿಸಿ, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಇದರ ಬೆನ್ನಲ್ಲೆ ಹಾಲಿನ ದರ ಏರಿಕೆಗೆ ಮುಂದಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications