ಒಂದಂಕಿ ಹಗರಣ : ಅಲೋಕ್ ಕುಮಾರ್ ಅಮಾನತು ರದ್ದು
ಬೆಂಗಳೂರು, ಅಕ್ಟೋಬರ್ 15 : ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ನಂಟು ಹೊಂದಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ಅಮಾನತು ಆದೇಶವನ್ನು ಗುರುವಾರ ಹಿಂಪಡೆದಿದೆ.
ಒಂದಂಕಿ ಲಾಟರಿ ಹಗರಣದ ತನಿಖೆ ನಡೆಸುತ್ತಿದ್ದ ಸಿಐಡಿ ಹಗರಣದಲ್ಲಿ ಅಲೋಕ್ ಕುಮಾರ್ ಭಾಗಿಯಾಗಿದ್ದಾರೆ ಎಂದು ಸರ್ಕಾರಕ್ಕೆ ವರದಿ ನೀಡಿತ್ತು. ವರದಿ ಅನ್ವಯ ಸರ್ಕಾರ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು 2015ರ ಮೇ 23ರಂದು ಅಮಾನತು ಮಾಡಿತ್ತು. [ಅಲೋಕ್ ಕುಮಾರ್ ಅಮಾನತು]

ಗುರುವಾರ ಅಮಾನತು ಆದೇಶ ಹಿಂಪಡೆದಿರುವ ಸರ್ಕಾರ ಅಲೋಕ್ ಕುಮಾರ್ ಅವರ ವಿರುದ್ಧದ ಇಲಾಖಾ ತನಿಖೆಯನ್ನು ಜಾರಿಯಲ್ಲಿಟ್ಟು ನೇಮಕಾತಿ ಆದೇಶ ಹೊರಡಿಸಿದೆ. ಅಲೋಕ್ ಕುಮಾರ್ ಅವರು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ.[ಸಿಐಡಿ ಪ್ರಶ್ನೆಗಳಿಗೆ ಅಲೋಕ್ ಕುಮಾರ್ ಉತ್ತರವೇನು?]
ವರ್ಗಾವಣೆ ಮಾಡಲಾಗಿತ್ತು : ಅಮಾನತ್ತಿನಲ್ಲಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೂನ್ 12ರಂದು ಬಡ್ತಿ ನೀಡಿ, ವರ್ಗಾವಣೆ ಮಾಡಲಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಸ್ಥಾನಕ್ಕೆ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದ ಸರ್ಕಾರ ಅಲೋಕ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಮಾಡಿತ್ತು.[ಅಲೋಕ್ ಕುಮಾರ್ ವರ್ಗಾವಣೆ]
ಅಲೋಕ್ ಕುಮಾರ್ ಅವರ ಅಮಾನತು ಆದೇಶ ರದ್ದಾಗಿರುವುದರಿಂದ ಅವರು ಐಜಿಪಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಆದರೆ, ರಾಜ್ಯ ಸರ್ಕಾರ ಅವರ ಮೇಲೆ ನಡೆಯುತ್ತಿದ್ದ ಇಲಾಖಾ ತನಿಖೆಯನ್ನು ಜಾರಿಯಲ್ಲಿಟ್ಟಿದ್ದು. ತನಿಖೆ ಮುಂದುವರೆಯಲಿದೆ. ಅಂದಹಾಗೆ ಕರ್ನಾಟಕ ಸರ್ಕಾರ ಒಂದಂಕಿ ಲಾಟರಿ ಹಗರಣದ ತನಿಖೆಯನ್ನು ಸಿಐಗೆ ವಹಿಸಿದ್ದು, ತನಿಖೆ ನಡೆಯುತ್ತಿದೆ. [ಒಂದಂಕಿ ಲಾಟರಿ ದಂಧೆ : ಪಾರಿ 'ಕಿಂಗ್ ಪಿನ್' ಅಲ್ಲರೀ!]
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications