Breaking: ಕರ್ನಾಟಕ: ಅ.28ಕ್ಕೆ ಗ್ರಾಮ ಪಂಚಾಯತಿ ಚುನಾವಣೆ, ಅ.30ಕ್ಕೆ ಫಲಿತಾಂಶ ಪ್ರಕಟ
ಬೆಂಗಳೂರು, ಅಕ್ಟೋಬರ್ 04: ಕರ್ನಾಟಕದ ರಾಜ್ಯದ ಒಟ್ಟು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ ಆಗಿದೆ. ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 30ಕ್ಕೆ ಫಲಿತಾಂಶ ಘೋಷಿಸಲಾಗುವುದು ಎಂದು ಕರ್ನಾಟಕ ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.
ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ರಾಜ್ಯ ಚುನಾವಣೆ ಆಯೋಗವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಉಳಿದ ಮತ್ತು ತೆರವಾದ ಸದಸ್ಯ ಸ್ಥಾನಗಳಿಗೂ ಉಪಚುನಾವಣೆಯನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ.

ಇದೇ ವರ್ಷ 2022ರ ಕಳೆದ ಆಗಸ್ಟ್ನಿಂದ ಮುಂಬರಲಿರುವ ನವೆಂಬರ್ ವೇಳೆ ಮುಕ್ತಾಯ ಆಗಲಿರುವ 203 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಅದೇ ರೀತಿ ಕೆಲವು ಕಾರಣಗಳಿಂದಾಗಿ ಖಾಲಿಯಾದ ಹಾಗೂ ತೆರವಾಗಿರುವ 49 ಗ್ರಾಮ ಪಂಚಾಯತಿಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.
ಅ.18 ನಾಮಪತ್ರ ಸಲ್ಲಿಕೆಗೆ ಕಡೆ ದಿನ
ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಕ್ಟೋಬರ್ 13ರಂದು ಗುರುವಾರ ಅಧಿಸೂಚನೆ ಹೊರಡಿಸಲಿದ್ದಾರೆ. 2022 ಅಕ್ಟೋಬರ್ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯು 2022 ಅಕ್ಟೋಬರ್ 19ರಂದು ನಡೆಯಲಿದೆ. ಅಕ್ಟೋಬರ್ 21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ ಎಂದು ಚುನಾವಣೆ ಆಯೋಗದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಇದೇ ಅಕ್ಟೋಬರ್ 28ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 5ರವರೆಗ ಗ್ರಾಮಪಂಚಾಯತಿ ಚುನಾವಣೆಗಳ ಮತದಾನ ಪ್ರಕ್ರಿಯೆ ಜರುಗಲಿದೆ. ಮರು ಮತದಾನ ಅಗತ್ಯವಿದ್ದಲ್ಲಿ ಮಾತ್ರ ಅಕ್ಟೋಬರ್ 30-ರಂದು ನಡೆಸಲಾಗುವುದು. ಮತ ಎಣಿಕೆ ಪ್ರಕ್ರಿಯೆಯು ಅಕ್ಟೋಬರ್ 31ರಂದು ಬೆಳಗ್ಗೆ 8ಗಂಟೆಯಿಂದ ಶುರುವಾಗಲಿದೆ ಎಂದು ರಾಜ್ಯ ಚುನಾವಣೆ ಆಯೋಗ ತಿಳಿಸಿದೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications