ಜುಲೈ 23 ರಂದು ಕರ್ನಾಟಕ ಗ್ರಾಮ ಪಂಚಾಯತ್ ಚುನಾವಣೆ
ಬೆಂಗಳೂರು, ಜುಲೈ 4: ರಾಜ್ಯ ಚುನಾವಣಾ ಆಯೋಗ (ಎಸ್ಇಸಿ) ಸೋಮವಾರ ರಾಜ್ಯಾದ್ಯಂತ 188 ಗ್ರಾಮ ಪಂಚಾಯಿತಿಗಳ 430 ಸ್ಥಾನಗಳಿಗೆ ಚುನಾವಣೆಯನ್ನು ಪ್ರಕಟಿಸಿದೆ.
ಜುಲೈ 23 ರಂದು ಚುನಾವಣೆ ನಡೆಯಲಿದ್ದು, ಜುಲೈ 26 ರಂದು ಮತ ಎಣಿಕೆ ನಡೆಯಲಿದೆ. 14 ಗ್ರಾಮ ಪಂಚಾಯಿತಿಗಳ 207 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಆಗಸ್ಟ್ನಲ್ಲಿ ಅವಧಿ ಮುಕ್ತಾಯವಾಗಲಿದೆ. ಅಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ 174 ಗ್ರಾಮ ಪಂಚಾಯಿತಿಗಳ 223 ಸ್ಥಾನಗಳಿಗೆ ಉಪಚುನಾವಣೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜು.6ಕ್ಕೆ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲು, ನಾಮಪತ್ರಗಳನ್ನು ಸಲ್ಲಿಸಲು ಜು.12ರಂದು ಕೊನೆಯ ದಿನವಾಗಿದೆ. ಇನ್ನು ಜು.13ರಂದು ನಾಮಪತ್ರಗಳನ್ನು ಪರಿಶೀಲಿಸಲು, ಜು.15ಕ್ಕೆ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಇನ್ನು ಮತದಾನಕ್ಕೆ ಅವಶ್ಯವಿದ್ದರೆ, ಮತದಾನವನ್ನು ನಡೆಸಲು ಜು.23ಕ್ಕೆ ಸೂಚಿಸಲಾಗಿದೆ. ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ಜು.25ಕ್ಕೆ ನಡೆಸಲು ಆಯೋಗ ತಿಳಿಸಿದೆ. ಜು.26ಕ್ಕೆ ಮತಗಳ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜು.6 ಹಾಗೂ ಜು.26ರವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ. ಕಳೆದ ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ನಿಗದಿ ಕುರಿತು ಆದೇಶ ಹೊರಡಿಸಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನಡವಳಿಗಳ ಅನ್ವಯ ಈ ಆದೇಶ ಪ್ರಕಟಿಸಲಾಗಿತ್ತು.
ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಾಶ್ ಎಸ್. ಮುರಬಳ್ಳಿ ಈ ಕುರಿತು ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 44(2)ರ ಪ್ರಕಾರ, ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣಾ ಆಯೋಗದ ಸಾಮಾನ್ಯ ಹಾಗೂ ವಿಶೇಷ ಆದೇಶಕ್ಕೆ ಒಳಪಟ್ಟು ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಬೇಕಾಗಿರುತ್ತದೆ ಎಂದು ಹೇಳಿದ್ದರು.
ಮೊದಲನೇ ಅವಧಿಯ ನಿಗದಿಪಡಿಸಿದ ಮೀಸಲಾತಿಗಳನ್ನು ಪರಿಗಣಿಸಿ 2020ನೇ ಸಾಲಿನ ಚುನಾವಣೆ ನಂತರದ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳನ್ನು ನಿಗದಿಪಡಿಸುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಮೀಸಲಾತಿ ನಿಗದಿಪಡಿಸುವಾಗ ಸೂಚನೆಗಳನ್ನು ಪಾಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications