ಹೈಡ್ರೋಜನ್ ಉತ್ಪಾದನೆ: ಹೂಡಿಕೆದಾರರ ಜತೆ ರಾಜ್ಯ ಒಪ್ಪಂದ
ಬೆಂಗಳೂರು, ಜೂನ್ 20: ಕರ್ನಾಟಕ ರಾಜ್ಯ ಕೈಗಾರಿಕಾ ಇಲಾಖೆಯು ಹೈಡ್ರೋಜನ್ (ಜಲಜನಕ) ಉತ್ಪಾದನೆಗೆ ಸಂಬಂಧಿಸಿದಂತೆ ಇತ್ತಿಚೆಗೆ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಹಸಿರು ಉಪಕ್ರಮಗಳಿಗೆ ಪೂರಕವಾದ ಈ ನಿರ್ಧಾರಗಳಿಂದ ಇಂಧನ ಭದ್ರತೆ ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ಒಂದು ತಿಂಗಳಲ್ಲಿ ಎಸಿಎಂಇ ಕ್ಲಿನ್ ಟೆಕ್ ಸಲೂಷನ್ ಪ್ರೈವೇಟ್ ಲಿಮಿಟೆಡ್ ರೆನ್ಯೂ ಪವರ್ ಕಂಪನಿಗಳು ಕರ್ನಾಟಕದೊಂದಿಗೆ 52ಸಾವಿರ ಕೋಟಿ ಮತ್ತು 50 ಸಾವಿರ ಕೋಟಿ ರೂ. ಹೂಡಿಕೆಯ ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಒಪ್ಪಂದಗಳು ಕಲ್ಲಿದ್ದಲು ಬಿಕ್ಕಟ್ಟು ವಿಚಾರದಲ್ಲಿ ರಾಜ್ಯಕ್ಕೆ ವರದಾನವಾಗಲಿವೆ ಎಂದು ರಾಜ್ಯ ಕೈಗಾರಿಕಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಪ್ಪಂದ ಕುರಿತು ಮಾಹಿತಿ ನೀಡಿರುವ ಕೈಗಾರಿಕೆ ಮತ್ತುವಾಣಿಜ್ಯ ಇಲಾಖೆ ನಿರ್ದೇಶಕ ಗುಂಜನ್ ಕೃಷ್ಣ, "ಮಂಗಳೂರಿನಲ್ಲಿರುವ ಹೈಡ್ರೋಜನ್ ಕ್ಲಸ್ಟರ್ನಲ್ಲಿ ಅಧಿಕ ಉತ್ಪಾದನೆ ಮಾಡಿ ನಂತರ ಅದನ್ನು ಹೊಸ ಇಂಧನವಾದ ಅಮೋನಿಯಾಗಿ ಆಗಿ ಪರಿವರ್ತಿಸುವ ಚಿಂತನೆಯಲ್ಲಿದ್ದೇವೆ. ಇಂಧನ ಭದ್ರತೆ ಇಲ್ಲದ ಅನೇಕ ರಾಷ್ಟ್ರಗಳು ಇಂತಹ ಅಗತ್ಯ ಹೈಡ್ರೋಜನ್ ಉತ್ಪಾದಿಸುವಲ್ಲಿ ಹಿಂದೆ ಬಿದ್ದಿವೆ" ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಅಗತ್ಯ ಹೂಡಿಕೆ ಸಾಧ್ಯವಾಗಿದ್ದು, ಹಾಲಿ ಮಂಗಳೂರು ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ಎರಡು ಹೈಡ್ರೋಜನ್ ಉತ್ಪಾದನಾ ಘಟಕ ಸ್ಥಾಪನೆ ಆದರೂ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಈ ಸಂಬಂಧ ಎರಡು ಕಂಪನಿಗಳು ಆಸಕ್ತಿ ವಹಿಸಿವೆ.
ಭವಿಷ್ಯದಲ್ಲಿ ಅಗತ್ಯವಾಗಿರುವ ಹಸಿರು ಇಂಧನಗಳ ಪೂರೈಕೆಗಾಗಿ ಈ ಘಟಕ ಮಹತ್ವದ ಪಾತ್ರ ವಹಿಸಲಿವೆ. ಈ ಎಲ್ಲ ಕೈಗಾರಿಕಾ ಬೆಳವಣಿಗೆಗಳಿಂದ ಬೇರೆಡೆಗೆ ಹಸಿರು ಇಂಧನ ರಫ್ತು ಕುರಿತು ಚರ್ಚೆಗಳು ಆರಂಭವಾಗಿವೆ.
ಸಂಪನ್ಮೂಲ ಬಳಕೆ: ಈ ಹಿಂದೆ ಏಪ್ರಿಲ್ನಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಉಂಟಾದ ವೇಳೆ ಸರ್ಕಾರ ರಾಜ್ಯದಲ್ಲಿನ ಸಂಪನ್ಮೂಲ, ಮುಂದುವರಿದ ತಂತ್ರಜ್ಞಾನ ಬಳಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು ಎಂದು ನಿರ್ಧರಿಸಿತ್ತು. ಇದೀಗ ಎರಡು ಕಂಪನಿಗಳು ರಾಜ್ಯದಲ್ಲಿ ಹೂಡಿಕೆಗೆ ಸಿದ್ಧವಾಗಿವೆ.
ಇಂಧನ ಇಲಾಖೆಯ ಅಂಕಿ ಅಂಶ ಪ್ರಕಾರ, ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನಗಳ ಪೈಕಿ ವಿದ್ಯುತ್ ಶೇ.52ರಷ್ಟಿದೆ. ಉಷ್ಣ ಶೇ.34, ಜಲ ಶೇ.12 ಮತ್ತು ಪರಮಾಣು ಶೇ.3ರಷ್ಟಿದೆ.
ನವೀಕರಿಸಬಹುದಾದ ಇಂಧನ: ಇನ್ಸ್ಸ್ಟಿಟ್ಯೂಟ್ ಆಫ್ ಎನರ್ಜಿ ಎಕನಾಮಿಕ್ಸ್ ಆಂಡ್ ಫೈನಾನ್ಷಿಯಲ್ ಅನಾಲಿಸಿಸ್ ಪ್ರಕಾರ, ಭಾರತದಲ್ಲಿ ನವೀಕರಿಸಬಹುದಾದ ಇಂಧನ ಮೇಲೆ 2020-21ರಲ್ಲಿ ಹೂಡಿಕೆ ಪ್ರಮಾಣ 14.5 ಶತಕೋಟಿ ಯು.ಎಸ್ ಡಾಲರ್ ಇದೆ.

ಕರ್ನಾಟಕವು ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳ ಜತೆ ಕೆಲವು ಒಪ್ಪಂದ ಮಾಡಿಕೊಂಡಿದೆ. ದೇಶದ ಖ್ಯಾತ ಆಟೊಮೇಟಿವ್ ಬ್ಯಾಟರಿ ತಯಾರಕ ಎಕ್ಸೈಡ್ ಕಂಪನಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸುಧಾರಿತ ಸೆಲ್ ಕೆಮೆಸ್ಟ್ರಿ ತಂತ್ರಜ್ಞಾನ ಸಂಬಂಧಿ ಕಾರ್ಖಾನೆ ಸ್ಥಾಪಿಸಲು 6000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಘೋಷಿಸಿದೆ.
ಅಲ್ಲದೇ ರಾಜ್ಯ ಸರ್ಕಾರದ ಉನ್ನತ ಮಟ್ಟದ ಕ್ಲಿಯರನ್ಸ್ ಸಮಿತಿ ಎಲೆಕ್ಟ್ರಿಕ್ ವೆಹಿಕಲ್ ಗಳಿಗೆ ಅಗತ್ಯವಾದ ಲಿಥಿಯಂ- ಐಯಾನ ಬ್ಯಾಟರಿ ಉತ್ಪಾದನಾ ಮೂರು ಪ್ರಸ್ತಾವಗಳಿಗೆ ಒಪ್ಪಿಗೆ ಸೂಚಿಸುವ ಮೂಲಕ 22,419ಕೋಟಿ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications