ಹೈಡ್ರೋಜನ್ ಉತ್ಪಾದನೆ: ಹೂಡಿಕೆದಾರರ ಜತೆ ರಾಜ್ಯ ಒಪ್ಪಂದ
ಬೆಂಗಳೂರು, ಜೂನ್ 20: ಕರ್ನಾಟಕ ರಾಜ್ಯ ಕೈಗಾರಿಕಾ ಇಲಾಖೆಯು ಹೈಡ್ರೋಜನ್ (ಜಲಜನಕ) ಉತ್ಪಾದನೆಗೆ ಸಂಬಂಧಿಸಿದಂತೆ ಇತ್ತಿಚೆಗೆ ಎರಡು ಒಪ್ಪಂದಗಳಿಗೆ ಸಹಿ ಹಾಕಿದೆ. ಹಸಿರು ಉಪಕ್ರಮಗಳಿಗೆ ಪೂರಕವಾದ ಈ ನಿರ್ಧಾರಗಳಿಂದ ಇಂಧನ ಭದ್ರತೆ ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕಳೆದ ಒಂದು ತಿಂಗಳಲ್ಲಿ ಎಸಿಎಂಇ ಕ್ಲಿನ್ ಟೆಕ್ ಸಲೂಷನ್ ಪ್ರೈವೇಟ್ ಲಿಮಿಟೆಡ್ ರೆನ್ಯೂ ಪವರ್ ಕಂಪನಿಗಳು ಕರ್ನಾಟಕದೊಂದಿಗೆ 52ಸಾವಿರ ಕೋಟಿ ಮತ್ತು 50 ಸಾವಿರ ಕೋಟಿ ರೂ. ಹೂಡಿಕೆಯ ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಒಪ್ಪಂದಗಳು ಕಲ್ಲಿದ್ದಲು ಬಿಕ್ಕಟ್ಟು ವಿಚಾರದಲ್ಲಿ ರಾಜ್ಯಕ್ಕೆ ವರದಾನವಾಗಲಿವೆ ಎಂದು ರಾಜ್ಯ ಕೈಗಾರಿಕಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಪ್ಪಂದ ಕುರಿತು ಮಾಹಿತಿ ನೀಡಿರುವ ಕೈಗಾರಿಕೆ ಮತ್ತುವಾಣಿಜ್ಯ ಇಲಾಖೆ ನಿರ್ದೇಶಕ ಗುಂಜನ್ ಕೃಷ್ಣ, "ಮಂಗಳೂರಿನಲ್ಲಿರುವ ಹೈಡ್ರೋಜನ್ ಕ್ಲಸ್ಟರ್ನಲ್ಲಿ ಅಧಿಕ ಉತ್ಪಾದನೆ ಮಾಡಿ ನಂತರ ಅದನ್ನು ಹೊಸ ಇಂಧನವಾದ ಅಮೋನಿಯಾಗಿ ಆಗಿ ಪರಿವರ್ತಿಸುವ ಚಿಂತನೆಯಲ್ಲಿದ್ದೇವೆ. ಇಂಧನ ಭದ್ರತೆ ಇಲ್ಲದ ಅನೇಕ ರಾಷ್ಟ್ರಗಳು ಇಂತಹ ಅಗತ್ಯ ಹೈಡ್ರೋಜನ್ ಉತ್ಪಾದಿಸುವಲ್ಲಿ ಹಿಂದೆ ಬಿದ್ದಿವೆ" ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಅಗತ್ಯ ಹೂಡಿಕೆ ಸಾಧ್ಯವಾಗಿದ್ದು, ಹಾಲಿ ಮಂಗಳೂರು ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸದಾಗಿ ಎರಡು ಹೈಡ್ರೋಜನ್ ಉತ್ಪಾದನಾ ಘಟಕ ಸ್ಥಾಪನೆ ಆದರೂ ಅಚ್ಚರಿ ಪಡಬೇಕಿಲ್ಲ. ಈಗಾಗಲೇ ಈ ಸಂಬಂಧ ಎರಡು ಕಂಪನಿಗಳು ಆಸಕ್ತಿ ವಹಿಸಿವೆ.
ಭವಿಷ್ಯದಲ್ಲಿ ಅಗತ್ಯವಾಗಿರುವ ಹಸಿರು ಇಂಧನಗಳ ಪೂರೈಕೆಗಾಗಿ ಈ ಘಟಕ ಮಹತ್ವದ ಪಾತ್ರ ವಹಿಸಲಿವೆ. ಈ ಎಲ್ಲ ಕೈಗಾರಿಕಾ ಬೆಳವಣಿಗೆಗಳಿಂದ ಬೇರೆಡೆಗೆ ಹಸಿರು ಇಂಧನ ರಫ್ತು ಕುರಿತು ಚರ್ಚೆಗಳು ಆರಂಭವಾಗಿವೆ.
ಸಂಪನ್ಮೂಲ ಬಳಕೆ: ಈ ಹಿಂದೆ ಏಪ್ರಿಲ್ನಲ್ಲಿ ಕಲ್ಲಿದ್ದಲು ಬಿಕ್ಕಟ್ಟು ಉಂಟಾದ ವೇಳೆ ಸರ್ಕಾರ ರಾಜ್ಯದಲ್ಲಿನ ಸಂಪನ್ಮೂಲ, ಮುಂದುವರಿದ ತಂತ್ರಜ್ಞಾನ ಬಳಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದು ಎಂದು ನಿರ್ಧರಿಸಿತ್ತು. ಇದೀಗ ಎರಡು ಕಂಪನಿಗಳು ರಾಜ್ಯದಲ್ಲಿ ಹೂಡಿಕೆಗೆ ಸಿದ್ಧವಾಗಿವೆ.
ಇಂಧನ ಇಲಾಖೆಯ ಅಂಕಿ ಅಂಶ ಪ್ರಕಾರ, ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನಗಳ ಪೈಕಿ ವಿದ್ಯುತ್ ಶೇ.52ರಷ್ಟಿದೆ. ಉಷ್ಣ ಶೇ.34, ಜಲ ಶೇ.12 ಮತ್ತು ಪರಮಾಣು ಶೇ.3ರಷ್ಟಿದೆ.
ನವೀಕರಿಸಬಹುದಾದ ಇಂಧನ: ಇನ್ಸ್ಸ್ಟಿಟ್ಯೂಟ್ ಆಫ್ ಎನರ್ಜಿ ಎಕನಾಮಿಕ್ಸ್ ಆಂಡ್ ಫೈನಾನ್ಷಿಯಲ್ ಅನಾಲಿಸಿಸ್ ಪ್ರಕಾರ, ಭಾರತದಲ್ಲಿ ನವೀಕರಿಸಬಹುದಾದ ಇಂಧನ ಮೇಲೆ 2020-21ರಲ್ಲಿ ಹೂಡಿಕೆ ಪ್ರಮಾಣ 14.5 ಶತಕೋಟಿ ಯು.ಎಸ್ ಡಾಲರ್ ಇದೆ.

ಕರ್ನಾಟಕವು ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳ ಜತೆ ಕೆಲವು ಒಪ್ಪಂದ ಮಾಡಿಕೊಂಡಿದೆ. ದೇಶದ ಖ್ಯಾತ ಆಟೊಮೇಟಿವ್ ಬ್ಯಾಟರಿ ತಯಾರಕ ಎಕ್ಸೈಡ್ ಕಂಪನಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸುಧಾರಿತ ಸೆಲ್ ಕೆಮೆಸ್ಟ್ರಿ ತಂತ್ರಜ್ಞಾನ ಸಂಬಂಧಿ ಕಾರ್ಖಾನೆ ಸ್ಥಾಪಿಸಲು 6000 ಕೋಟಿ ರೂ. ಹೂಡಿಕೆ ಮಾಡುವುದಾಗಿ ಘೋಷಿಸಿದೆ.
ಅಲ್ಲದೇ ರಾಜ್ಯ ಸರ್ಕಾರದ ಉನ್ನತ ಮಟ್ಟದ ಕ್ಲಿಯರನ್ಸ್ ಸಮಿತಿ ಎಲೆಕ್ಟ್ರಿಕ್ ವೆಹಿಕಲ್ ಗಳಿಗೆ ಅಗತ್ಯವಾದ ಲಿಥಿಯಂ- ಐಯಾನ ಬ್ಯಾಟರಿ ಉತ್ಪಾದನಾ ಮೂರು ಪ್ರಸ್ತಾವಗಳಿಗೆ ಒಪ್ಪಿಗೆ ಸೂಚಿಸುವ ಮೂಲಕ 22,419ಕೋಟಿ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications