ಚಿತ್ತಾಪುರ: RSS ಪಥಸಂಚಲನಕ್ಕೆ ಷರತ್ತುಬದ್ಧ ಕೋರ್ಟ್ ಅನುಮತಿ: ಸರ್ಕಾರಕ್ಕೆ ಮುಖಭಂಗ ಎಂದ ಬಿಜೆಪಿ
ಬೆಂಗಳೂರು, ನವೆಂಬರ್ 13: ರಾಷ್ಟ್ರೀಯ ಸ್ವಯಂ ಸೇವಾ ಸಂಘ (RSS) ಪಥಸಂಚಲನಕ್ಕೆ ಹೈಕೋರ್ಟ್ ಗುರುವಾರ ಷರತ್ತುಬದ್ಧ ಅನುಮತಿ ನೀಡಿದೆ. ಇದರ ಬೆನ್ನಲ್ಲೆ ರಾಜ್ಯ ಬಿಜೆಪಿಯು ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದೆ. ಅಕವಾಶ ನೀಡಲ್ಲ ಎಂದು ಹೇಳಿದ್ದ ಸರ್ವಾಧಿಕಾರಿ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಭಾರೀ ಮುಖಭಂಗವಾಗಿದೆ ಎಂದು ತಿಳಿಸಿದೆ.
ಹೈಕೋರ್ಟ್ ಅನುಮತಿ ನೀಡುತ್ತಿದ್ದಂತೆ ಇದೇ ನವೆಂಬರ್ 16 ರಂದು ಭಾನುವಾರ ಕಲಬುರಗಿಯ ಚಿತ್ತಾಪುರದಲ್ಲಿ RSS ಪಥಸಂಚಲನ ನಡೆಸಲಾಗುವುದು ಎಂದು ಬಿಜೆಪಿ ತಿಳಿಸಿ ಎಕ್ಸ್ ಪೋಸ್ಟ್ ಮಾಡಿದೆ. "ಇಡೀ ದೇಶದ ಯಾವುದೇ ಮೂಲೆಯಲ್ಲಿ ಬೇಕಾದರೂ RSS ಪಥ ಸಂಚಲನ ಮಾಡಬಹುದು. ಆದರೆ, ಕರ್ನಾಟಕದ ಚಿತ್ತಾಪುರದಲ್ಲಿ ಪಥ ಸಂಚಲನ ಮಾಡುವುದಕ್ಕೆ ಅವಕಾಶವಿಲ್ಲ ಎಂದು ತಗಾದೆ ತೆಗೆದಿದ್ದ ಸರ್ವಾಧಿಕಾರಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಇದೀಗ ಭಾರೀ ಮುಖಭಂಗವಾಗಿದೆ'.

"ಮಿಸ್ಟರ್ ಪ್ರಿಯಾಂಕ್ ಖರ್ಗೆ ಅವರೇ, ಚಿತ್ತಾಪುರವೇನು ಪಾಕಿಸ್ತಾನದಲ್ಲಿದೆಯೇ? ಭಾನುವಾರ ಚಿತ್ತಾಪುರದಲ್ಲಿ "ನಮಸ್ತೇ ಸದಾ ವತ್ಸಲೇ ಮಾತೃಭೂಮೇ, ತ್ವಯಾ ಹಿಂದುಭೂಮೇ ಸುಖಂ ವರ್ಧಿತೋಹಮ್..' ಗೀತೆ ಧ್ವನಿಸಲಿದೆ ಎಂದು ಸರ್ಕಾರ ನಡೆಯ ಬಗ್ಗೆ ಕಿಡಿ ಕಾರಿದೆ. ಇದರ ಬೆನ್ನಲ್ಲೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಹ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
"ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSS ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ' ಎಂದು ಕುಟುಕಿದ್ದಾರೆ.
"ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಬೇಕು. ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ' ಎಂದರು.
ಪಥಸಂಚಲನದಲ್ಲಿ 300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂದು ಕೋರ್ಟ್ ವಿಧಿಸಿದ ಷರತ್ತನ್ನು ಸಚಿವರು ಬಿಜೆಪಿಗೆ ಪುನರುಚ್ಚರಿಸಿದ್ದಾರೆ.
ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು ಎಂದು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications