Get Updates
Get notified of breaking news, exclusive insights, and must-see stories!

Digital Arrest: 15 ನಿಮಿಷಗಳಲ್ಲಿ 50 ಲಕ್ಷ ರೂ. ಸಾಲ ಮಂಜೂರು: ಬ್ಯಾಂಕ್ ಕ್ರಮಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಸಾಮಾನ್ಯ ಜನರಿಗೆ ಸಣ್ಣ ಮೊತ್ತದ ಸಾಲ ಬೇಕೆಂದರೆ ಹತ್ತಾರು ಬಾರಿ ಬ್ಯಾಂಕ್ ಅಲೆದಾಡಿಸುವ, ನೂರಾರು ದಾಖಲೆಗಳನ್ನು ಕೇಳುವ ಬ್ಯಾಂಕ್‌ಗಳು, ವಂಚಕರಿಗೆ ಮಾತ್ರ ಹೊಸ ಹೊಸ ದಾರಿಗಳನ್ನು ಹುಡುಕಿ ಕೊಡುತ್ತಿದೆಯೇ? ಎಂಬ ಗಂಭೀರ ಪ್ರಶ್ನೆ ಈಗ ಎದ್ದಿದೆ. 'ಡಿಜಿಟಲ್ ಅರೆಸ್ಟ್' (Digital Arrest) ಹೆಸರಿನಲ್ಲಿ ವಂಚನೆಗೊಳಗಾದ ಅಮಾಯಕ ಮಹಿಳೆಯೊಬ್ಬರಿಗೆ ಕೇವಲ 15 ನಿಮಿಷಗಳಲ್ಲಿ, ಯಾವುದೇ ದಾಖಲೆಗಳಿಲ್ಲದೆ 50 ಲಕ್ಷ ರೂಪಾಯಿ ಸಾಲ ಮಂಜೂರು ಮಾಡಿದ ಐಸಿಐಸಿಐ (ICICI) ಬ್ಯಾಂಕ್‌ನ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ವಿರುದ್ಧ ಬ್ಯಾಂಕ್ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡುವ ಮೂಲಕ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಜನಸಾಮಾನ್ಯರ ಪರವಾದ ಐತಿಹಾಸಿಕ ಆದೇಶ ನೀಡಿದೆ.

ಘಟನೆಯ ಹಿನ್ನೆಲೆ

2024ರ ಸೆಪ್ಟೆಂಬರ್ 17ರಂದು 32 ವರ್ಷದ ಮಹಿಳೆಯೊಬ್ಬರಿಗೆ ಫೆಡ್‌ಎಕ್ಸ್ (FedEx) ಉದ್ಯೋಗಿ ಎಂದು ಹೇಳಿಕೊಂಡು ಕರೆಯೊಂದು ಬಂದಿತ್ತು. ನಿಮ್ಮ ಆಧಾರ್ ಸಂಖ್ಯೆಯನ್ನು ಡ್ರಗ್ಸ್ (ಮಾದಕ ವಸ್ತು) ಕಳ್ಳಸಾಗಣೆಗೆ ಬಳಸಲಾಗಿದೆ ಎಂದು ಬೆದರಿಸಲಾಗಿತ್ತು. ನಂತರ ಕರೆಯನ್ನು ಮುಂಬೈ ಪೊಲೀಸರೆಂದು ಹೇಳಿಕೊಂಡವರಿಗೆ ವರ್ಗಾಯಿಸಲಾಯಿತು. ಅಲ್ಲಿಂದ ಡಿಸಿಪಿ (DCP) ಎಂದು ಹೇಳಿಕೊಂಡ ವ್ಯಕ್ತಿಯೊಬ್ಬರು ಮಾತನಾಡಿ, "ನಿಮ್ಮ ಖಾತೆಯ ಹಣ ಬಳಸಿ ಎಕೆ-47 ರೈಫಲ್ ಖರೀದಿಸಲಾಗಿದೆ, ನಿಮ್ಮ ಹೆಸರಿನಲ್ಲಿ ಹಲವು ಅಕ್ರಮ ನಡೆದಿದೆ" ಎಂದು ಬೆದರಿಸಿದ್ದನು. ಅಂತಿಮವಾಗಿ ಆರ್‌ಬಿಐ (RBI) ಅಧಿಕಾರಿ ಎಂದು ಹೇಳಿಕೊಂಡ ವಂಚಕ, ಸ್ಕೈಪ್ (Skype) ವಿಡಿಯೋ ಕರೆಯಲ್ಲಿ ಮಹಿಳೆಯನ್ನು ಸುಮಾರು 10 ಗಂಟೆಗಳ ಕಾಲ 'ಡಿಜಿಟಲ್ ಅರೆಸ್ಟ್' ಮಾಡಿ, ಮನೆಯಿಂದ ಹೊರಬರದಂತೆ ಮತ್ತು ಯಾರೊಂದಿಗೂ ಮಾತನಾಡದಂತೆ ಕೂಡಿಹಾಕಿದ್ದನು.

Digital Arrest Victim

ಬ್ಯಾಂಕ್ ಸಿಬ್ಬಂದಿ ಪಾತ್ರದ ಬಗ್ಗೆ ಅನುಮಾನ

ಈ ಪ್ರಕರಣದಲ್ಲಿ ಅತ್ಯಂತ ಆಘಾತಕಾರಿ ಸಂಗತಿಯೆಂದರೆ ಬ್ಯಾಂಕ್‌ ನವರು ನಡೆದುಕೊಂಡ ರೀತಿ. ವಂಚಕರು ಸಂತ್ರಸ್ತೆಗೆ ಆನ್‌ಲೈನ್ ಮೂಲಕ ತ್ವರಿತ ಸಾಲ (Instant Loan) ಪಡೆಯಲು ಒತ್ತಾಯಿಸಿದರು. ಆಶ್ಚರ್ಯವೆಂಬಂತೆ, ಐಸಿಐಸಿಐ ಬ್ಯಾಂಕ್ ಕೇವಲ 15 ನಿಮಿಷಗಳಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿಗಳ ಸಾಲವನ್ನು ಮಹಿಳೆಯ ಖಾತೆಗೆ ಜಮೆ ಮಾಡಿದೆ.

ಇದನ್ನು ಗಮನಿಸಿದ ಹೈಕೋರ್ಟ್ ಪೀಠವು ಬ್ಯಾಂಕ್ ಅನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. "ಯಾವುದೇ ದಾಖಲೆಗಳಿಲ್ಲದೆ, ಪರಿಶೀಲನೆ ಇಲ್ಲದೆ ಬ್ಯಾಂಕ್ 50 ಲಕ್ಷ ರೂಪಾಯಿಯನ್ನು ವರ್ಗಾಯಿಸಿದ್ದು ಹೇಗೆ? ಇಷ್ಟು ದೊಡ್ಡ ಮೊತ್ತದ ಸಾರ್ವಜನಿಕರ ಹಣವನ್ನು ಬ್ಯಾಂಕ್ ಈ ರೀತಿ ಬಿಡುಗಡೆ ಮಾಡಲು ಹೇಗೆ ಸಾಧ್ಯ?" ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲದೆ, ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ಕೂಡ, "ದಾಖಲೆಗಳಿಲ್ಲದೆ ಇಷ್ಟು ದೊಡ್ಡ ಮೊತ್ತ ಬಿಡುಗಡೆಯಾಗಿರುವುದು ಅರ್ಥವಾಗುತ್ತಿಲ್ಲ, ಇದರ ಹಿಂದೆ ಬ್ಯಾಂಕ್ ಸಿಬ್ಬಂದಿಯ ಕೈವಾಡವಿರಬಹುದು" ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಈ ವಾದವು ಸಾರ್ವಜನಿಕರ ಸಂಶಯಕ್ಕೆ ಪುಷ್ಟಿ ನೀಡಿದೆ. ಬ್ಯಾಂಕ್‌ನ ಕೆಲವರು ವಂಚಕರೊಂದಿಗೆ ಶಾಮೀಲಾಗಿರಬಹುದೇ ಎಂಬ ಅನುಮಾನ ಬಲವಾಗಿದೆ.

ವಂಚಕರು ಆ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡ ನಂತರ, ಸಾಲ ಮರುಪಾವತಿಸುವಂತೆ ಬ್ಯಾಂಕ್ ಸಂತ್ರಸ್ತೆಗೆ ಕಿರುಕುಳ ನೀಡಲಾರಂಭಿಸಿತ್ತು ಮತ್ತು ಕ್ರಿಮಿನಲ್ ಕೇಸ್ ಹಾಕಿತ್ತು. ಆದರೆ, ಜನವರಿ 30 ರಂದು ಆದೇಶ ಹೊರಡಿಸಿದ ಹೈಕೋರ್ಟ್, "ಅರ್ಜಿದಾರರ (ಸಂತ್ರಸ್ತೆಯ) ವಿರುದ್ಧ ಮುಂದಿನ ವಿಚಾರಣೆಯವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಮತ್ತು ಕ್ರಿಮಿನಲ್ ಪ್ರಕ್ರಿಯೆ ನಡೆಸಬಾರದು" ಎಂದು ಬ್ಯಾಂಕ್‌ಗೆ ಖಡಕ್ ಸೂಚನೆ ನೀಡಿದೆ.

ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ

ಹೈಕೋರ್ಟ್‌ನ ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಮಾಯಕರು ಮೋಸ ಹೋಗಿ ಸಂಕಷ್ಟದಲ್ಲಿರುವಾಗ, ಅವರಿಗೆ ಸಾಂತ್ವನ ಹೇಳಬೇಕಾದ ಬ್ಯಾಂಕ್‌ಗಳು ಅವರ ಮೇಲೆಯೇ ಕೇಸ್ ಹಾಕುವುದು ಎಷ್ಟು ಸರಿ? ಎಂಬ ಪ್ರಶ್ನೆಗೆ ಕೋರ್ಟ್ ಉತ್ತರ ನೀಡಿದೆ. ಈ ಪ್ರಕರಣದಲ್ಲಿ ಬ್ಯಾಂಕ್ ಪ್ರಕ್ರಿಯೆಗಳ ಬಗ್ಗೆಯೂ ತನಿಖೆಯಾಗಬೇಕಿದೆ ಎಂದು ನ್ಯಾಯಾಲಯ ಸರಿಯಾಗಿ ಹೇಳಿದೆ. ಸಂತ್ರಸ್ತೆಯ ಪರ ವಕೀಲ ಸೂರಜ್ ಸಂಪತ್ ಅವರು, ವಂಚಕರು ಮಹಿಳೆಯನ್ನು ಹೇಗೆ ಸುದೀರ್ಘವಾಗಿ ಬಂಧನದಲ್ಲಿಟ್ಟಿದ್ದರು ಮತ್ತು ಬ್ಯಾಂಕ್ ಹೇಗೆ ಕಣ್ಣುಮುಚ್ಚಿ ಸಾಲ ನೀಡಿತು ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 20ಕ್ಕೆ ನಿಗದಿಯಾಗಿದ್ದು, ಅಂದು ಬ್ಯಾಂಕ್ ಯಾವ ಉತ್ತರ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+