ಕೊರೊನಾ ಭಯ; ಶಾಲಾ-ಕಾಲೇಜುಗಳಿಗೆ ರಜೆ ವದಂತಿ
ಬೆಂಗಳೂರು, ಮಾರ್ಚ್ 11: ಕೊರೊನಾ ವೈರಸ್ ಸೋಂಕಿನ (ಕೋವಿಡ್ 19) ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಎನ್ನುವ ವದಂತಿ ಎದ್ದಿವೆ. ಆದರೆ, ರಾಜ್ಯದ ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಸರ್ಕಾರ ತಿಳಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಈ ಕುರಿತು ಮಾತನಾಡಿರುವ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ರಾಜ್ಯದ ಶಾಲಾ ಕಾಲೇಜುಗಳಿಗೆ ಸರಕಾರಿ ಕಚೇರಿಗಳಿಗೆ ರಜೆ ನೀಡಿಲ್ಲ. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಇದುವರೆಗೂ 1 ಲಕ್ಷಕ್ಕೂ ಅಧಿಕ ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರಿಗೆ ಮಾತ್ರ ಸೋಂಕು ಇರುವುದು ಖಚಿತವಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ತಲ್ಲಣ ಸೃಷ್ಠಿಸಿರುವ ಕೊರೊನಾ ವೈರಸ್ ಸೋಂಕಿಗೆ ಇದುವರೆಗೆ ಭಾರತದಲ್ಲಿ 64 ಜನ ಸೋಂಕಿಗೆ ಒಳಗಾಗಿದ್ದಾರೆ.












Click it and Unblock the Notifications