HMPV: ಎಚ್ಎಂಪಿವಿ ಟೆಸ್ಟ್ ಬಗ್ಗೆ ಆರೋಗ್ಯ ಇಲಾಖೆ ಮಹತ್ವದ ಮಾಹಿತಿ
ಭಾರತದಲ್ಲಿ ಮೊದಲ ಎಚ್ಎಂಪಿವಿ ವೈರಸ್ ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗುವ ಮೂಲಕ ಆತಂಕ ಸೃಷ್ಟಿಸಿತ್ತು. ಬ್ಯಾಪ್ಟಿಸ್ಟ್ ಆಸ್ಪತ್ರೆಯ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಸೋಂಕು ದೃಢವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದ್ದು, ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿತ್ತು. ಇದೀಗ ಮತ್ತೊಂದು ಮಹತ್ವದ ವಿಚಾರವನ್ನು ಆರೋಗ್ಯ ಇಲಾಖೆ ಹಂಚಿಕೊಂಡಿದೆ.
ಸದ್ಯ ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಕೇಸ್ಗಳು ಪತ್ತೆಯಾದ ಕಾರಣ ಜನರಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕೇ? ಎನ್ನುವ ಪ್ರಶ್ನೆ ಎದುರಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆಯು ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಹೇಳಿದೆ.

ಆದರೆ, ಕೆಲವು ಖಾಸಗಿ ಆಸ್ಪತ್ರೆಯವರು ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೀಗಾಗಿ ಎಲ್ಲ ಖಾಸಗಿ ಲ್ಯಾಬ್ಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡುವುದಾಗಿಯೂ ಆರೋಗ್ಯ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಕಂಡುಬರುವ ಜ್ವರ, ಕೆಮ್ಮು ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಹೋಗುವವರು ಎಚ್ಎಂಪಿವಿ ವೈರಸ್ ಟೆಸ್ಟ್ ಅನ್ನು ಮಾಡಿಸಿಕೊಳ್ಳುವ ಅಗತ್ಯವೂ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
ಬೆಂಗಳೂರಿನಲ್ಲಿ ಎಚ್ಎಂಪಿವಿ ಕೇಸ್ಗಳು ಪತ್ತೆಯಾದ ಕಾರಣ ಕೆಲ ಆಸ್ಪತ್ರೆಗಳಲ್ಲಿ ಇದರ ತಪಾಸಣೆ ಹೆಸರಿನಲ್ಲಿ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿರುವ ವಿಚಾರ ಕೂಡ ಇಲಾಖೆ ಗಮನಕ್ಕೆ ಬಂದಿದೆ. ಬರೋಬ್ಬರಿ 12000 ರೂಪಾಯಿವರೆಗೆ ದರ ನಿಗದಿ ಮಾಡಿ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದೆ ಎಂದು ಕೂಡ ಹೇಳಿದೆ. ಹೀಗಾಗಿ ಆರೋಗ್ಯ ಇಲಾಖೆಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪಾಸಣೆ ಕಡ್ಡಾಯವಲ್ಲ ಎಂದು ಹೇಳಿದೆ. ಇದೇ ವಿಚಾರವಾಗಿ ಇಂದೇ ಆರೋಗ್ಯ ಇಲಾಖೆಯು ಪ್ರಕಟಣೆ ಹೊರಡಿಸಲಿದೆ ಎಂದು ಹೇಳಲಾಗುತ್ತಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಮಾತನಾಡಿ, ಎಚ್ಎಂಪಿವಿ ಬಗ್ಗೆ ಆತಂಕ ಬೇಡ, ಜಾಗೃತಿಯಿರಲಿ. ಶೀತ, ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಭೇಟಿಯಾಗುವುದು ಸೇರಿದಂತೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ. ವೈರಸ್ ವಿರುದ್ಧ ಹೋರಾಡಲು ಎಲ್ಲರೂ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ.
ಎಚ್ಎಂಪಿವಿ ಹಳೆಯ ವೈರಸ್ ಆಗಿದ್ದು, ಇದು ಮಾರಣಾಂತಿಕವಲ್ಲ. ರಾಜ್ಯದಲ್ಲಿ ಎರಡು ಎಚ್ಎಂಪಿವಿ ಪ್ರಕರಣಗಳು ಪತ್ತೆಯಾಗಿ ಸೋಂಕಿತರು ಗುಣಮುಖರಾಗಿದ್ದಾರೆ. ವೈರಸ್ ಕುರಿತು ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಿದರೆ ಸಾಕು. ಸೋಂಕು ನಿಯಂತ್ರಣ, ಮುಂಜಾಗ್ರತಾ ಕ್ರಮಗಳು ಮತ್ತು ಮಾರ್ಗಸೂಚಿ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ 8 ತಿಂಗಳ ಮಗು ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್ಎಂಪಿವಿ) ಸೋಂಕಿಗೆ ಒಳಗಾಗಿರುವ ವರದಿಗಳಿವೆ. ಆದರೆ, ಇದು ಹೊಸ ವೈರಸ್ ಅಲ್ಲ. ಮಗು ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ. 2001ರಿಂದ ಎಚ್ಎಂಪಿವಿ ವೈರಾಣು ಕಾಣಿಸಿಕೊಳ್ಳುತ್ತಿದೆ. ಈ ಕುರಿತು ಗಾಬರಿಯಾಗುವ ಅವಶ್ಯಕತೆಯಿಲ್ಲ. ಆದರೂ, ಮುನ್ನೆಚ್ಚರಿಕೆಯಾಗಿ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ ಎಂದಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications