ರಾಜ್ಯದಲ್ಲಿ ಮೈಕೊರೆವ ಚಳಿಗೆ ಅನಾರೋಗ್ಯ ಭೀತಿ: ಆರೋಗ್ಯ ಇಲಾಖೆ ಅಲರ್ಟ್, ಎಲ್ಲ ಜಿಲ್ಲೆಗಳಿಗೆ ಮಾರ್ಗಸೂಚಿ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೈಕೊರೆವ ಚಳಿ ಹೆಚ್ಚಾಗಿದೆ. ತಾಪಮಾನ ಕುಸಿದಿದೆ. ಈ ವಾತಾವರಣವು ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಈ ಚಳಿಗಾಲ ಋತುವಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಇನ್ಫ್ಲುಯೆಂನ್ಜಾ ಪ್ರಕರಣಗಳು ಹೆಚ್ಚಾಗಿ ವರದಿ ಆಗುವ ಸಾಧ್ಯತೆ ಇದೆ. ಆದ್ದರಿಂದ ರಾಜ್ಯ ಆರೋಗ್ಯ ಇಲಾಖೆಯು ಎಲ್ಲ ಜಿಲ್ಲೆಗಳಿಗೆ ಅಗತ್ಯ ಮಾರ್ಗಸೂಚಿ ಹೊರಡಿಸಿದೆ.
2026 ಜನವರಿ ಮತ್ತು ಮಾರ್ಚ್ ವರೆಗೆ ಚಳಿ ಹಾಗೂ ಒಣಹವೆ ಹೆಚ್ಚಿರುತ್ತದೆ. ಈ ಅವಧಿಯಲ್ಲಿ ಇನ್ಫ್ಲುಯೆಂನ್ಜಾ ಪ್ರಕರಣಗಳು (ಶೀತ, ಜ್ವರ, ಶಾಸಕೋಶ ಸಂಬಂಧ ಸಾಂಕ್ರಾಮಿಕ ಕಾಯಿಲೆಗಳು) ಹೆಚ್ಚು ವರದಿ ಆಗುವ ನಿರೀಕ್ಷೆ ಇದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ದ ಸಲಹೆ ಮೇರೆಗೆ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ವಹಿಸಲು ತಿಳಿಸಿದೆ. ಇನ್ಫ್ಲುಯೆಂನ್ಜಾ ತರಹದ ಅನಾರೋಗ್ಯ (ILI) ಮತ್ತು ತೀವ್ರ ಉಸಿರಾಟದ ಸೋಂಕು (SARI) ಹರಡದಂತೆ ಕಣ್ಗಾವಲು ಹೆಚ್ಚಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ನಿರ್ದೇಶಿಸಿದೆ.

ಲ್ಯಾಬ್ಗಳಲ್ಲಿ ಸೋಂಕು ಮಾದರಿ ಪರೀಕ್ಷೆಗಳಿಗೆ ಸೂಚನೆ
ತಂಪು ಹವಾಮಾನ ವಾತಾವರಣದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ವರದಿ ಆಗುವ ಇನ್ಫ್ಲುಯೆಂನ್ಜಾ ಸಂಬಂಧಿತ ಪ್ರಕರಣಗಳಲ್ಲಿ ಐಎಲ್ಐ ರೋಗಿಗಳ ಶೇ. 5ರಷ್ಟು ಮಾದರಿ ಮತ್ತು ಹಾಗೂ ಉಸಿರಾಟ, ಶ್ವಾಸಕೋಶಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಶೇ.100 ರಷ್ಟು ಮಾದರಿಗಳನ್ನು ಇನ್ಫ್ಲುಯೆಂನ್ಜಾ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಮಾದರಿ ಪರೀಕ್ಷೆಗೆಂದೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಬೆಂಗಳೂರಿನ ರಾಷ್ಟ್ರೀಯ ವೈರಾಲಜಿ ಸಂಸ್ಥೆ (NIV) ಸೇರಿದಂತೆ ರಾಜ್ಯದಲ್ಲಿ ಒಂಬತ್ತು ಲ್ಯಾಬ್ಗಳಿವೆ.
ಎಲ್ಲ ಜಿಲ್ಲೆಗಳಲ್ಲಿ ಒಸೆಲ್ಟಾಮಿವಿರ್, ವೈಯಕ್ತಿಕ ರಕ್ಷಣಾ ಸಾಧನಗಳು, ಎನ್95 ಮಾಸ್ಕ್ಗಳು ಸಾಕಷ್ಟು ದಾಸ್ತಾನುಗಳು ಇವೆಯೇ ಎಂದು ನೋಡಿಕೊಳ್ಳಬೇಕು. ವೆಂಟಿಲೇಟರ್ಗಳು ಸುಸ್ಥಿತಿಯಲ್ಲಿವೆಯೇ, ತುರ್ತು ಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಪರಿಶೀಲಿಸಿ ಮಾಹಿತಿ ನೀಡುವಂತೆ ಕೇಳಿದೆ. ಶಿಶುಗಳು, ವೃದ್ಧರು, ಗರ್ಭಿಣಿಯರು ಸೇರಿದಂತೆ ರೋಗನಿರೋಧಕ ಶಕ್ತಿ ಕಡಿಮೆ ಇರುವ ದುರ್ಬಲ ವ್ಯಕ್ತಿಗಳ ಗುಂಪುಗಳಿಗೆ ಲಸಿಕೆ ನೀಡಲು ಕ್ರಮ ವಹಿಸಿ ಆರೋಗ್ಯ ಕಾಪಾಡುವಂತೆ ಸೂಚಿಸಿದೆ.
ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಿ
ಚಳಿಗಾಲದ ಸಾಂಕ್ರಾಮಿಕ ರೋಗಗಳ ವಿರುದ್ಧ ಸಮಗ್ರ ಕಣ್ಗಾವಲು ಕಾರ್ಯಕ್ರಮ, ಜಿಲ್ಲೆಗಳಲ್ಲಿನ ಆರೋಗ್ಯ ಮಾಹಿತಿ ವೇದಿಕೆ (IDSP-IHIP) ಪೋರ್ಟಲ್ ಮೂಲಕ ಜಾಗೃತಿ ಮೂಡಿಸಬೇಕು. ಕಾಯಿಲೆಗಳ ಬಗ್ಗೆ ಅರಿವು ಮೂಡಿಸಲು ಅಭಿಯಾನಗಳನ್ನು ಹೆಚ್ಚಿಸುವತ್ತ ಜಿಲ್ಲಾಧಿಕಾರಿಗಳು ಗಮನಹರಿಸಬೇಕು. ಇನ್ಫ್ಲುಯೆಂನ್ಜಾ ಸೋಂಕುಗಳು ಸದರಿ ಕಲುಷಿತ ವಾತಾವರಣದಲ್ಲಿ ವೇಗವಾಗಿ ಹರಡುತ್ತವೆ. ಇದನ್ನು ವೈರಲ್ ಸೋಂಕು ಅಂತಲೂ ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ದೇಹದಲ್ಲಿ ಆಕ್ಟಿವ್ ಅಗಿರುತ್ತದೆ. ನಿಮಗೆ ಜ್ವರ, ಶೀತ, ಕೆಮ್ಮು ಮತ್ತು ಸ್ನಾಯು ನೋವುಗಳ ಲಕ್ಷಣ ಕಂಡು ಬಂದಲ್ಲಿ ನಿರ್ಲಕ್ಷಿಸದೇ ಹತ್ತಿರ ಆಸ್ಪತ್ರೆಗೆ ಭೇಟಿ ನೀಡುವಂತೆ ಆರೋಗ್ಯ ವಿನಂತಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications