ಕರ್ನಾಟಕದಲ್ಲಿ 340 ಆಂಬುಲೆನ್ಸ ಸೇವೆ ರದ್ದು: ಆರೋಗ್ಯ ಇಲಾಖೆ ನೀಡಿದ ಕಾರಣವೇನು?
ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು ವಿವಿಧ ಕಾರಣಗಳಿಂದಾಗಿ '108' ಆಂಬುಲೆನ್ಸ್ ಸೇವೆಯಡಿ ಕಾರ್ಯ ನಿರ್ವಹಿಸುತ್ತಿರುವ 340 ಆಂಬುಲೆನ್ಸ್ಗಳ ಸೇವೆ ರದ್ದುಗೊಳಿಸಲು ಮುಂದಾಗಿದೆ. ಇಷ್ಟು ಬೃಹತ್ ಮಟ್ಟದಲ್ಲಿ ವಾಹನಗಳ ಸೇವೆ ಸ್ಥಗಿತಕ್ಕೆ ಕಾರಣ ಏನಿರಬಹುದು.
ಬೆಂಗಳೂರು, ಜನವರಿ 30: ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯು ವಿವಿಧ ಕಾರಣಗಳಿಂದಾಗಿ '108' ಆಂಬುಲೆನ್ಸ್ ಸೇವೆಯಡಿ ಕಾರ್ಯ ನಿರ್ವಹಿಸುತ್ತಿರುವ 340 ಆಂಬುಲೆನ್ಸ್ಗಳ ಸೇವೆ ರದ್ದುಗೊಳಿಸಲು ಮುಂದಾಗಿದೆ.
ರಾಜ್ಯದಲ್ಲಿ ತುಂಬಾ ಹಳೆಯದಾದ, ಕಳಪೆ ಹಂತಕ್ಕೆ ತಲುಪಿದ ಆಂಬುಲೆನ್ಸ್ಗಳ ಚಾಲನೆ ನಿಲ್ಲಲಿದೆ. ಈ ಹಿಂದಿನಿಂದಲೂ ಇರುವ ನಿಯಮಗಳಂತೆ ಈ ಭಾರಿಯು ಸಹ ನೂರಾರು ಆಂಬುಲೆನ್ಸ್ಗಳ ಸೇವೆ ಸ್ಥಗಿತಗೊಳ್ಳಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ಆಂಬುಲೆನ್ಸ್ ಸುಮಾರು 4 ಲಕ್ಷ ಕಿಲೋ ಮೀಟರ್ ಓಡಿದ್ದರೆ/ಸಂಚಾರ ಕ್ರಮಿಸಿದ್ದರೆ ಅಂತಹ ಆಂಬುಲೆನ್ಸ್ಗಳನ್ನು ನಿಯಮದಂತೆ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆಯಂತೆ ಬದಲಾಯಿಸಲಾಗುತ್ತದೆ. ಅದೇ ರೀತಿ ಈ ಬಾರಿಯು ನಿರ್ಧಾರ ಕೈಗೊಳ್ಳಲಾಗಿದೆ.

340 ಆಂಬುಲೆನ್ಸ್ಗಳ ಸೇವೆ ರದ್ದು ಬಗ್ಗೆ ಮಾತನಾಡಿದ ಇಲಾಖೆ ಉಪನಿರ್ದೇಶಕ (ಇಎಂಆರ್ಐ-108) ಡಾ,ಆರ್ ನಾರಾಯಣ್ ಅವರು, 2015-16ರಲ್ಲಿ ಕಳಪೆ ಸ್ಥಿತಿಗೆ ತಲುಪಿದ್ದ ಆಂಬುಲೆನ್ಸ್ಗಳನ್ನು ಬದಲಾವಣೆ ಮಾಡಲಾಗಿತ್ತು. ನಂತರ ಅವುಗಳ ಜಾಗದಲ್ಲಿ ಹೊಸ ಆಂಬುಲೆನ್ಸ್ಗಳು ಸೇವೆಗೆ ನಿಯೋಜನೆಗೊಂಡವು. ಸದ್ಯ ಇರುವ 340 ಆಂಬುಲೆನ್ಸ್ಗಳು ಸುಮಾರು ಆರು ವರ್ಷಗಳಷ್ಟು ಹಳೆಯದ್ದು ಎನ್ನಲಾಗಿದೆ. ಈ ಕಾರಣದಿಂದ ಅವುಗಳ ಸೇವೆ ಸ್ಥಗಿತಗೊಳಿಸಲು ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.
ಸೇವೆಯಲ್ಲಿ ವ್ಯತ್ಯಯ ಇಲ್ಲ
ಇಷ್ಟು ದೊಡ್ಡ ಮಟ್ಟದಲ್ಲಿ ಆಂಬುಲೆನ್ಸ್ಳ ಸೇವೆ ರದ್ದಿನ ಬಳಿಕ, ತುರ್ತು ಪರಿಸ್ಥಿತಿಗಳಲ್ಲಿ ಸೇವೆ ಹೇಗೆ ಎಂಬ ಅನುಮಾನ ಮೂಡುವುದು ಸಹಜ. ಆದರೆ ಸರ್ಕಾರದ ಈ ನಿರ್ಧಾರದಿಂದ ಸೇವೆಗಳಲ್ಲಿ ಯಾವುದೇ ವ್ಯತ್ಯಯಗಳು ಕಂಡು ಬರುವುದಿಲ್ಲ ಎಂದು ನಾರಾಯಣ್ ಸ್ಪಷ್ಟಪಡಿಸಿದರು.
ಇಲಾಖೆಗೆ ಜಿವಿಕೆ-ಇಎಂಆರ್ಐ ಕಳೆದ 14 ವರ್ಷಗಳಿಂದ ರಾಜ್ಯದಲ್ಲಿ '108' ಆಂಬ್ಯುಲೆನ್ಸ್ ಸೇವೆಯನ್ನು ಸೇವೆಯನ್ನು ಒದಗಿಸುತ್ತಿದೆ. ಹೊಸ ಆಂಬುಲೆನ್ಸ್ ಖರೀದಿ ಕುರಿತ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮುಂದಿನ ಮೂರರಿಂದ ನಾಲ್ಕು ತಿಂಗಳಲ್ಲಿ ಹೊಸ ಆ್ಯಂಬುಲೆನ್ಸ್ ಗಳು ಸೇವೆ ಆರಂಭಿಸಲಿವೆ ಎಂದು ರಸ್ತೆಗಿಳಿಯಲಿವೆ ಎಂದು ಅವರು ಹೇಳಿದ್ದಾರೆ.

ಹಲವು ವರ್ಷಗಳ ಹಿಂದೆ ರಾಜ್ಯದಲ್ಲಿ ಆಂಬ್ಯುಲೆನ್ಸ್ಗಳ ಸೇವೆ, ಗುಣಮಟ್ಟ ಬಗ್ಗೆ ನಿಯಮಗಳು ಮತ್ತು ಪರಿಶೀಲನೆಗಳು ಹೆಚ್ಚು ಕಟ್ಟುನಿಟ್ಟಾಗಿ ಇರಲಿಲ್ಲ. ಆದರೆ ಸದ್ಯ ಗುಣಮಟ್ಟದ ಸೇವೆ ಜನರಿಗೆ ನೀಡುವಲ್ಲಿ ಆರೋಗ್ಯ ಇಲಾಖೆ ರಾಜಿ ಮಾಡಿಕೊಳ್ಳುತ್ತಿಲ್ಲ. ಖಚಿತಪಡಿಸಿಕೊಳ್ಳಲು ಕಂಪನಿಗಳು ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಪೂರೈಕೆದಾರರ ಜೊತೆ ಕೈ ಜೋಡಿಸಿರುವ ಸರ್ಕಾರ ಗುಣಮಟ್ಟದ
ವಾಹನಗಳನ್ನು ನೀಡುವ ಮಹತ್ತರ ಗುರಿ ಹೊಂದಿದೆ ಎಂದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications