'ಗಗನಕ್ಕೆ ಮುತ್ತಿಕ್ಕೀತು, ಮುತ್ತು ಎರಡಾಯಿತಲೇ ಎಚ್ಚರ': ಕಾರ್ಣಿಕ
Recommended Video
ಶ್ರಾವಣ ಮಾಸದ ಎರಡನೇ ಸೋಮವಾರ (ಆ 5) ಆಂಜನೇಯ ಸ್ವಾಮಿಯ ಉತ್ಸವದ ವೇಳೆ ಕಾರ್ಣಿಕ ನುಡಿಯಲಾಗಿದೆ. ಅದರ ಪ್ರಕಾರ, ರೈತರು ಸಂಕಷ್ಟ ಎದುರಿಸಬೇಕಾಗುತ್ತದೆ.
ಕಳೆದ ಜುಲೈ ತಿಂಗಳಲ್ಲಿ ಕೋಡಿಮಠದ ಶ್ರೀಗಳು ಸಮ್ಮಿಶ್ರ ಸರಕಾರದ ಆಯುಸ್ಸಿನ ಬಗ್ಗೆ ಮತ್ತು ರಾಜ್ಯದ ಹವಾಮಾನದ ಬಗ್ಗೆ ಭವಿಷ್ಯ ನುಡಿದಿದ್ದರು.
ಇದಲ್ಲದೇ, ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ಕಳೆದ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ, ಪರೋಕ್ಷವಾಗಿ, 'ಮೋದಿ ಮತ್ತೆ ಚೌಕೀದಾರ್' ಎಂದಿದ್ದರು.
ಈಗ, ಎರಡು ದಿನದ ಹಿಂದೆ, ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯದಲ್ಲಿ ನುಡಿಯಲಾಗಿರುವ ಕಾರ್ಣಿಕವೂ, ಈಗ, ಉತ್ತರ ಕರ್ನಾಟಕದ ಭಾಗದಲ್ಲಾಗುತ್ತಿರುವ ಅತಿವೃಷ್ಟಿಗೆ ಒಂದಕ್ಕೊಂದು ತಾಳೆಯಾಗುತ್ತಿರುವುದು ಗಮನಿಸಬೇಕಾದ ವಿಚಾರ.

ಮೈತ್ರಿ ಸರ್ಕಾರಕ್ಕೆ ಆಯುಸ್ಸು ಇಲ್ಲ
ಕಳೆದ ಜುಲೈ ಒಂದರಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶ್ರೀಗಳು, ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದು, ಈ ಸರ್ಕಾರಕ್ಕೆ ಹೆಚ್ಚು ಕಾಲ ಆಯುಸ್ಸು ಇಲ್ಲ. ಜೊತೆಗೆ, ಈ ಬಾರಿ ಮಳೆಯ ಕೊರತೆ ಆಗುವುದಿಲ್ಲ, ಗಾಳಿ ಹೋದ ನಂತರ ಮಳೆ ಬರುತ್ತದೆ, ಆತಂಕ ಪಡುವ ಅವಶ್ಯಕತೆ ಇಲ್ಲ ಎಂದಿದ್ದರು.

ಕೋಡಿಶ್ರೀಗಳ ಭವಿಷ್ಯ
ಕೋಡಿಶ್ರೀಗಳ ಭವಿಷ್ಯದಂತೆ, ಕುಮಾರಸ್ವಾಮಿ ನೇತೃತ್ವದ ಸರಕಾರ ಪತನಗೊಂಡಿತ್ತು. ಆದರೆ, ಮಳೆಯ ಕೊರತೆ ಆಗುವುದಿಲ್ಲ ಎನ್ನುವುದು ಸರಿಯಾದ ಭವಿಷ್ಯವಾಗಿದ್ದರೂ, ಉತ್ತರ ಕರ್ನಾಟಕದ ಭಾಗದಲ್ಲಿನ ಜನತೆ ಅತಿವೃಷ್ಟಿಯಿಂದ ಹೈರಾಣರಾಗಿ ಹೋಗಿದ್ದಾರೆ. ತೀರಾ ಗಂಭೀರ ಪರಿಸ್ಥಿತಿ ಅಲ್ಲಿದೆ ಎನ್ನುವುದು ವಾಸ್ತವತೆ.

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ, ಆಂಜನೇಯ ಸ್ವಾಮಿ
ಎರಡನೇ ಶ್ರಾವಣ ಸೋಮವಾರದ ದಿನದಂದು, ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ, ಆಂಜನೇಯ ಸ್ವಾಮಿ ಉತ್ಸವದಲ್ಲಿ ನುಡಿಯಲಾದ ಕಾರ್ಣಿಕ ಹೀಗಿತ್ತು, ' ಗಗನಕ್ಕೆ ಮುತ್ತಿಕ್ಕೀತು, ಮುತ್ತು ಎರಡಾಯಿತಲೇ ಎಚ್ಚರ'. ಇದರ ಪ್ರಕಾರ, 'ಅತಿರೇಕ ಮಳೆಯಿಂದಾಗಿ, ಸಮೃದ್ದ ಬೆಳೆ, ರೈತರಿಗೆ ದಕ್ಕುವುದಿಲ್ಲ' ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಅವರವರ ಭಾವಕ್ಕೆ ತಕ್ಕಂತೆ ಅರ್ಥೈಸಿಕೊಳ್ಳಲಾಗುತ್ತಿದೆ
ಶಿವಮೊಗ್ಗ - ಹರಿಹರ ರಸ್ತೆಯಲ್ಲಿರುವ ಈ ಪುರಾಣ ಪ್ರಸಿದ್ದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿರುವ ಆಂಜನೇಯಸ್ವಾಮಿಯ, ವಾರ್ಷಿಕ ಉತ್ಸವದಲ್ಲಿ ಈ ಮೇಲಿನ ಕಾರ್ಣಿಕ ನುಡಿಯಲಾಗಿದ್ದು, ಇದನ್ನು ಅವರವರ ಭಾವಕ್ಕೆ ತಕ್ಕಂತೆ ಅರ್ಥೈಸಿಕೊಳ್ಳಲಾಗುತ್ತಿದೆ.

ಸೆರಗೊಡ್ಡಿ ಬೇಡಿದವರಿಗೆ ಸಿಹಿ ಆತು.. ಕುಟುಂಬ ಸರಪಳಿ ತುಂಡಾತು..ಕುರ್ಚಿಯ ಕಾಲು ಗಟ್ಟಿ ಆತು
'ಸೆರಗೊಡ್ಡಿ ಬೇಡಿದವರಿಗೆ ಸಿಹಿ ಆತು.. ಕುಟುಂಬ ಸರಪಳಿ ತುಂಡಾತು..ಕುರ್ಚಿಯ ಕಾಲು ಗಟ್ಟಿ ಆತು.. ಸಂಸಾರ ಬಂಧ ಕತ್ತಲ ಕೋಣೆಗೆ ಹೋದೀತು..' ಎನ್ನುವ ಒಗಟಿನ ಮೂಲಕ ಕೋಡಿಶ್ರೀಗಳು ಮಂಡ್ಯ ಚುನಾವಣೆಯ ಬಗ್ಗೆ ಭವಿಷ್ಯವನ್ನು ನುಡಿದಿದ್ದರು. ಇದು, ಪರೋಕ್ಷವಾಗಿ ಸುಮಲತಾ ಗೆಲ್ಲಲಿದ್ದಾರೆಂದು ಶ್ರೀಗಳು ನುಡಿದ ಭವಿಷ್ಯ ಎಂದೇ ಹೇಳಲಾಗುತ್ತಿತ್ತು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications