ಮತ್ತೊಂದು ಕೇಸ್ನಲ್ಲಿ ದಂಡುಪಾಳ್ಯ ಗ್ಯಾಂಗ್ ಖುಲಾಸೆ, ಬಿಡುಗಡೆ?
ಬೆಂಗಳೂರು, ಸೆಪ್ಟೆಂಬರ್ 04 : ಗೀತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ದಂಡುಪಾಳ್ಯ ಗ್ಯಾಂಗ್ನ ಐವರು ಸದಸ್ಯರನ್ನು ಖುಲಾಸೆಗೊಳಿಸಲಾಗಿದೆ. ಅಪರಾಧಿಗಳ ಬಂಧನ ಅಗತ್ಯವಿಲ್ಲದಿದ್ದಲ್ಲಿ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ವಿಭಾಗೀಯ ಪೀಠ ಗೀತಾ (35) ಕೊಲೆ ಪ್ರಕರಣದಲ್ಲಿ ಐವರನ್ನು ಖುಲಾಸೆಗೊಳಿಸಿದೆ. ದೊಡ್ಡ ಹನುಮ, ವೆಂಕಟೇಶ, ಮುನಿಕೃಷ್ಣ, ನಲ್ಲತಿಮ್ಮ ಮತ್ತು ಲಕ್ಷ್ಮಮ್ಮ ಖುಲಾಸೆಯಾದವರು.
ಇದೇ ಪ್ರಕರಣದಲ್ಲಿ ಮೃತ ಮಹಿಳೆಯ ಒಡೆವೆ ದೋಚಿದ ಅಪರಾಧಕ್ಕೆ ತಂಡದ ನಾಲ್ವರಿಗೆ 7 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಲಕ್ಷ್ಮಮ್ಮ ಖುಲಾಸೆಗೊಂಡಿದ್ದಾರೆ.

ಏನಿದು ಪ್ರಕರಣ? : ನವೆಂಬರ್ 7, 2000ದಂದು ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯಲ್ಲಿ ವಾಸವಿದ್ದ ಜಯರಾಮಯ್ಯ ಅವರ ಪತ್ನಿ ಗೀತಾ ಅವರ ಚಿನ್ನಾಭರಣ ದೋಚಿ ಅವರನ್ನು ಹತ್ಯೆ ಮಾಡಿದ ಆರೋಪ ದಂಡುಪಾಳ್ಯ ಗ್ಯಾಂಗ್ ಸದಸ್ಯರ ಮೇಲಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಅಧೀನ ನ್ಯಾಯಾಲಯ ಅಪರಾಧ ಸಾಬೀತಾಗಿದೆ ಎಂದು ಗಲ್ಲು ಶಿಕ್ಷೆ ವಿಧಿಸಿತ್ತು. ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಗಲ್ಲು ಶಿಕ್ಷೆ ತೃಪ್ತಿಕರವಾಗಿಲ್ಲ. ಪುನಃ ವಿಚಾರಣೆ ನಡೆಸಿ ಎಂದು ಸೂಚಿಸಿತ್ತು.
ಪುನಃ ವಿಚಾರಣೆ ನಡೆಸಿದ ನ್ಯಾಯಾಲಯ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿತ್ತು. ಅಪರಾಧಿಗಳು ಈ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಚಿನ್ನಾಭರಣ ದೋಚಿದ್ದಕ್ಕೆ ಮಾತ್ರ ಸಾಕ್ಷಿ ಇದೆ. ಕೊಲೆ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿರುವ ಹೈಕೋರ್ಟ್ 5 ಜನರನ್ನು ಖುಲಾಸೆಗೊಳಿಸಿದೆ.
ಬೇರೆ ಪ್ರಕರಣದಲ್ಲಿ ಅಪರಾಧಿಗಳ ಬಂಧನ ಅಗತ್ಯವಿಲ್ಲದಿದ್ದಲ್ಲಿ ಕೂಡಲೇ ಬಿಡುಗಡೆ ಮಾಡುವಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಅಪರಾಧಿಗಳ ಪರವಾಗಿ ಹಷ್ಮತ್ ಪಾಷಾ ವಾದ ಮಂಡನೆ ಮಾಡಿದ್ದರು. ದಂಡುಪಾಳ್ಯ ಗ್ಯಾಂಗ್ ಸದಸ್ಯರ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳಿವೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications