ಕೋವಿಡ್ ನಿಯಂತ್ರಣ SOP ಕಟ್ಟು ನಿಟ್ಟು ಜಾರಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಜ. 14: ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಜಾಥಾ, ಮೆರವಣಿಗೆ, ಪಾದಯತ್ರೆಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ತಡೆಯುವಂತೆ ಕೋರಿ ತಿಂಡ್ಲು ನಿವಾಸಿ ಎ.ವಿ.ನಾಗೇಂದ್ರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಯಾವುದೇ ಅನುಮತಿ ಪಡೆಯದೇ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಪಕ್ಷದ ಪರ ಹಾಜರಾದ ವಕೀಲ ಉದಯ ಹೊಳ್ಳ ಅವರು, 'ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ' ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಕೋವಿಡ್ ನಿಯಂತ್ರಣ ಸಂಬಂಧ ಜ. 4 ರಂದು ಹೊರಡಿಸಲಾಗಿರುವ ಎಸ್ಒಪಿಯನ್ನು ರಾಜ್ಯದಾದ್ಯಂತ ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು' ಎಂದು ಸರ್ಕಾರಕ್ಕೆ ನಿರ್ದೇಶಿಸಿತು.

'ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಂದುವರಿಸದಂತೆ ಕೆಪಿಸಿಸಿಯನ್ನು ನಿರ್ಬಂಧಿಸಬೇಕು. ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಬೇಕು' ಎಂದು ಕೋರಿ ತಿಂಡ್ಲು ನಿವಾಸಿ ನಾಗೇಂದ್ರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಮತ್ತು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ರಾಮನಗರ ಜಿಲ್ಲಾಧಿಕಾರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖರನ್ನು ಪ್ರತಿವಾದಿಯನ್ನಾಗಿ ಉಲ್ಲೇಖಿಸಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತೆಡೆಯಲು ಸರ್ಕಾರ ವಿಧಿಸಿರುವ ನಿರ್ಬಂಧಗಳ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಜ. 9 ರಿಂದ ಹತ್ತು ದಿನಗಳ ಪಾದಯಾತ್ರೆ ಆಯೋಜಿಸಿತ್ತು. ಸರ್ಕಾರದ ಅನುಮತಿ ಇಲ್ಲದಿದ್ದರೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ ಮೂರು ದಿನ ಪಾದಯಾತ್ರೆ ಮಂದುವರೆದಿತ್ತು. ಕಾರ್ಯಕರ್ತರು, ಮುಖಂಡರು, ಸಾಂಸ್ಕೃತಿಕ ತಂಡಗಳು ಸೇರಿದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಕೋವಿಡ್ ನಿರ್ಬಂಧ ಉಲ್ಲಂಘಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಸರ್ಕಾರ ಮತ್ತು ಕೆಪಿಸಿಸಿಯನ್ನು ನ್ಯಾಯಪೀಠ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂತ್ತು. ಇದರ ಬೆನ್ನಲ್ಲೇ ಪಾದಯಾತ್ರೆಯನ್ನು ಮೊಟಕಗೊಳಿಸಲಾಗಿತ್ತು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಬ್-ವೈನ್ ಸೆಂಟರ್ಗಳಿಗೆ ಅಪ್ರಾಪ್ತರ ಪ್ರವೇಶ ನಿಷೇಧಕ್ಕೆ ಹೈಕೋರ್ಟ್ ಸೂಚನೆ; ಐಡಿ ಪರಿಶೀಲಿಸಲು ಸಲಹೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications