ಮಡೆ ಮಡೆಸ್ನಾನಕ್ಕೆ ಹೈಕೋರ್ಟಿನಿಂದ ಗ್ರೀನ್ ಸಿಗ್ನಲ್
ಬೆಂಗಳೂರು, ನ.19: ಮಡೆಸ್ನಾನ ಸೇರಿದಂತೆ ಮೂಢ ನಂಬಿಕೆ ನಿಷೇಧ ಕಾನೂನು ಜಾರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಮೌಖಿಕ ಒಪ್ಪಿಗೆ ನೀಡುತ್ತಿದ್ದಂತೆ ನಿಡುಮಾಮಿಡಿ ಮಹಾಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಮಡೆಸ್ನಾನಕ್ಕೆ ಹೈಕೋರ್ಟ್ ಬುಧವಾರ ಗ್ರೀನ್ ಸಿಗ್ನಲ್ ನೀಡಿದೆ.
ಪವಿತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಚಾಲ್ತಿಯಲ್ಲಿರುವ ನಿರ್ದಿಷ್ಟ ಸಮುದಾಯದ ಜನ ಉಂಡುಬಿಟ್ಟ ಎಂಜಲೆಲೆಯ ಮೇಲೆ ಭಕ್ತಾದಿಗಳು ನಡೆಸುವ ಉರುಳು ಸೇವೆ (ಮಡೆ ಮಡೆಸ್ನಾನ) ಪದ್ದತಿಯನ್ನು ನಿಲ್ಲಿಸಬೇಕೆಂದು ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿಹಿಡಿದಿತ್ತು. ಅದರೆ, ಹೈಕೋರ್ಟ್ ವಿಭಾಗೀಯ ಪೀಠ ಮಡೆ ಮಡೆಸ್ನಾನಕ್ಕೆ ಇರುವ ತಡೆಯನ್ನು ತೆರವುಗೊಳಿಸಿದೆ. [ಮಡೆಸ್ನಾನದಲ್ಲಿ ಬ್ರಾಹ್ಮಣರು ಕೂಡಾ ಇದ್ರು ಕಣ್ರೀ]

ಹೈಕೋರ್ಟ್ ನಿಂದ ಪರಿಷ್ಕೃತ ಆದೇಶ ಹೊರಬಂದಿರುವುದರಿಂದ ನ.25 ರಿಂದ 29 ರ ತನಕ ಮಡೆಸ್ನಾನ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ನಡೆಸಬಹುದಾಗಿದೆ.[ಸ್ವಾಮೀಜಿಗಳ ಬೇಡಿಕೆಗಳೇನು?]
ಬ್ರಾಹ್ಮಣರು ಉಂಡ ಎಂಜಲೆಲೆಯ ಮೇಲೆ ಹರಕೆ ರೂಪದಲ್ಲಿ ಉರುಳುವ ಮಡೆ ಮಡೆಸ್ನಾನ 'ಅನಿಷ್ಠ' ಪದ್ದತಿಯನ್ನು ಕೂಡಲೇ ನಿಷೇಧಿಸಬೇಕೆಂದು ನಿಡುಮಾಮಿಡಿ ಶ್ರೀ, ದೊರೆಸ್ವಾಮಿ ಅಯ್ಯಂಗಾರ್, ಪ್ರೊ. ಗೋವಿಂದ ರಾವ್, ಮರುಳುಸಿದ್ದಪ್ಪ, ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಹನ್ನೊಂದು ಮಂದಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಡೆಸ್ನಾನ ಪದ್ದತಿ ಸುಮಾರು 400 ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದು ಕುಕ್ಕೇ ಅಥವಾ ಉಡುಪಿ ದೇವಾಲಯದ ಸೇವಾಪಟ್ಟಿಯಲ್ಲಿರದ ಸೇವೆ. ಬ್ರಾಹ್ಮಣರು ಮತ್ತು ಬ್ರಾಹ್ಮಣೇತರರೂ ಈ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications