ಪೊಲೀಸರ ಪ್ರತಿಭಟನೆ : ಶಶಿಧರ್ ವೇಣುಗೋಪಾಲ್ಗೆ ಜಾಮೀನು
ಬೆಂಗಳೂರು, ಆಗಸ್ಟ್ 25 : ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪೊಲೀಸರ ಪ್ರತಿಭಟನೆಗೆ ಕರೆ ನೀಡಿದ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು.
ಸರ್ಕಾರದ ವಿರುದ್ಧ ಸಮರ, ಒಳಸಂಚು ರೂಪಿಸಿದ ಆರೋಪದಡಿ ಜೂನ್ 1ರ ಮಧ್ಯರಾತ್ರಿ ಶಶಿಧರ್ ವೇಣುಗೋಪಾಲ್ ಅವರನ್ನು ಬಂಧಿಸಲಾಗಿತ್ತು. ಅಂದಿನಿಂದಲೂ ಅವರು ನ್ಯಾಯಾಂಗ ಬಂಧನದಲ್ಲಿದ್ದರು. ಎರಡು ತಿಂಗಳ ಬಳಿಕ ಜಾಮೀನು ಸಿಕ್ಕಿದೆ.[ಶಶಿಧರ್ ವೇಣುಗೋಪಾಲ್ ಬಂಧನ]

ಶಶಿಧರ್ ವೇಣುಗೋಪಾಲ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂ. ಬಾಂಡ್, ಇಬ್ಬರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ.[ಪೊಲೀಸರ ಪ್ರತಿಭಟನೆ, 31 ಬೇಡಿಕೆಗಳು]
ಷರತ್ತುಗಳು
* ಪೊಲೀಸರ ಸಭೆ ನಡೆಸಬಾರದು
* ಪೊಲೀಸರ ಮುಷ್ಕರಕ್ಕೆ ಕರೆ ನೀಡಬಾರದು
* ಸಾಕ್ಷಿ ನಾಶ ಮಾಡಬಾರದು [ಮರೆಯಲಾದಿತೇ ಪೊಲೀಸಪ್ಪನವರ ಜೊತೆಗಿನ ನನ್ನ ಒಡನಾಟ?]
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೊಲೀಸರು ಸಾಮೂಹಿಕವಾಗಿ ರಜೆ ಹಾಕಿ ಜೂನ್ 4ರಂದು ಪ್ರತಿಭಟನೆ ನಡೆಸುವಂತೆ ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘ ಕರೆ ನೀಡಿತ್ತು. ಸರ್ಕಾರದ ಕ್ರಮದ ಬಳಿಕ ಪ್ರತಿಭಟನೆ ನಡೆದಿರಲಿಲ್ಲ.
ಪೊಲೀಸರ ಪ್ರತಿಭಟನೆಯನ್ನು ತಡೆಯಲು ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ವೇಣುಗೋಪಾಲ್ ಅವರನ್ನು ಜೂನ್ 1ರ ಮಧ್ಯರಾತ್ರಿ ಬಂಧಿಸಲಾಗಿತ್ತು. ಬೆಂಗಳೂರಿನ ಯಲಹಂಕ ನ್ಯೂಟೌನ್ ಆರ್ಟಿಓ ಕಚೇರಿ ಹಿಂಭಾಗದಲ್ಲಿರುವ ಶಶಿಧರ್ ಅವರ ಮನೆಗೆ ಆಗಮಿಸಿದ್ದ 30ಕ್ಕೂ ಹೆಚ್ಚು ಪೊಲೀಸರು ಅವರನ್ನು ಬಂಧಿಸಿದ್ದರು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications