ಚುನಾವಣಾ ಅಕ್ರಮ: ಪ್ರಜ್ವಲ್ ರೇವಣ್ಣ, ಎಚ್.ಡಿ.ರೇವಣ್ಣಗೆ ನೋಟಿಸ್
ಬೆಂಗಳೂರು, ಅ 14: ಕಳೆದ ಹಾಸನ ಲೋಕಸಭಾ ಕ್ಷೇತ್ರ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಆಯ್ಕೆಯಾಗಲು ಅಕ್ರಮ ಎಸಗಿದ ಆರೋಪದ ಮೇಲೆ ಜನಪ್ರತಿನಿಧಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲು ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣಗೆ ನೋಟಿಸ್ ಜಾರಿಯಾದ ಹಿನ್ನೆಲೆಯಲ್ಲಿ ಅವರ ಪರ ವಕೀಲರು ಹೈಕೋರ್ಟ್ಗೆ ಹಾಜರಾಗಿ ವಕಾಲತ್ತು ಸಲ್ಲಿಸಿದರು.
ಅಲ್ಲದೆ, ಸುಪ್ರೀಂಕೋರ್ಟ್ ಆದೇಶವನ್ನು ಮನವರಿಕೆ ಮಾಡಿಕೊಟ್ಟರು, ಆ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಅವರ ಪರ ವಕೀಲರ ಮೆಮೋ ದಾಖಲಿಸಿಕೊಂಡ ನ್ಯಾಯಮೂರ್ತಿ ಕೆ. ನಟರಾಜನ್ ಅವರ ಪೀಠ, ಸುಪ್ರಿಂ ಕೋರ್ಟ್ನಿಂದ ಯಾವುದಾದರೂ ಆದೇಶ ಪ್ರಕಟವಾದ ನಂತರ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರ್ಟ್ ರಿಜಿಸ್ಟ್ರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ? ಚುನಾವಣಾ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೈಕೋರ್ಟ್ 2023ರ ಸೆ.1ರಂದು ತೀರ್ಪು ನೀಡಿತ್ತು.
ಅಲ್ಲದೆ, ಚುನಾವಣೆಯಲ್ಲಿ ಪ್ರಜ್ವಲ್ ಗೆಲುವು ಸಾಧಿಸಲು ಅಕ್ರಮ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ಅವರ ವಿರುದ್ಧ ಜನ ಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 99(1)(ಎ)(2) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಹೈಕೋರ್ಟ್ ಶೋಕಾಸ್ ನೋಟಿಸ್ ಜಾರಿಗೊಳಿಸಲು ಆದೇಶಿಸಿತ್ತು.
ಅದರಂತೆ ಅವರಿಬ್ಬರಿಗೂ 2023ರ ಸೆ.13ರಂದು ಹೈಕೋರ್ಟ್ನಿಂದ ನೋಟಿಸ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಚ್.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಪರ ವಕೀಲರು ಹಾಜರಾಗಿ ವಕಾಲತ್ತು ಜೊತೆಗೆ ಮೆಮೊ ಸಲ್ಲಿಸಿದರು.
ಆಗ ನೋಟಿಸ್ ಪಡೆದವರು ಎಲ್ಲಿದ್ದಾರೆಂದು ನ್ಯಾಯಪೀಠ ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ವಕೀಲರು, ನೋಟಿಸ್ ಪಡೆದವರ ಪರ ತಾವು ವಕಾಲತ್ತು ಸಲ್ಲಿಸುತ್ತಿದ್ದೇವೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರಿಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಪಜ್ವಲ್ ಮತ್ತು ಎಚ್.ಡಿ. ರೇವಣ್ಣ ಅವರ ವಿರುದ್ಧದ ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ 2023ರ ಸೆ.18ರಂದು ತಡೆಯಾಜ್ಜೆ ನೀಡಿದೆ ಎಂದು ತಿಳಿಸಿ ಮೊಮೊ ಸಲ್ಲಿಸಿದರು. ಜತೆಗೆ, ಸುಪ್ರಿಂ ಕೋರ್ಟ್ನ ಮಧ್ಯಂತರ ಆದೇಶದ ವಿವರಗಳನ್ನು ಓದಿ ನ್ಯಾಯಾಲಯಕ್ಕೆ ತಿಳಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications